ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಕೇಸ್ ಗೆ (Renuka swamy murder case) ಸಂಬಂಧಪಟ್ಟಂತೆ ಇಂದು ಸಿಟಿ ಸಿವಿಲ್ ಕೋರ್ಟ್ಗೆ A1 ಪವಿತ್ರಾ (Pavitra gowda), A2 ದರ್ಶನ್ (Actor darshan) ಸೇರಿ ಎಲ್ಲಾ 17 ಆರೋಪಿಗಳು ಹಾಜರಾಗಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡುವಾಗ ಪ್ರತಿ ವಿಚಾರಣೆ ವೇಳೆ ಕೋರ್ಟ್ಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು.ಇವತ್ತು ಬೆಳಗ್ಗೆ 11ಗಂಟೆ ಸುಮಾರಿಗೆ 57ನೇ ಸಿಸಿಹೆಚ್ ಕೋರ್ಟ್ ಗೆ ಆರೋಪಿಗಳು ಹಾಜರಾಗಲಿದ್ದಾರೆ.

ಇಂದು ನ್ಯಾ.ಜೈಶಂಕರ್ ಅವರಿಂದ ವಿಚಾರಣೆ ನಡೆಯಲಿದೆ. ಈ ಹಿನ್ನಲೆ ಇವತ್ತು ಕೊರ್ಟ್ಗೆ ಪವಿತ್ರಾ, ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಹಾಜರಾಗಬೇಕು. ಒಂದು ವೇಳೆ ಗೈರು ಹಾಜರಾದರೆ ಸೂಕ್ತ ಕಾರಣ ನೀಡಿ ವಿನಾಯಿತಿ ಕೋರಬೇಕು ಎಂದು ತಿಳಿಸಲಾಗಿದೆ .






