ಬಾಲಿವುಡ್ ನಟ ಶಾರುಖ್ ಖಾನ್, ಪುತ್ರಿ ಸುಹಾನ ಖಾನ್ ಹಾಗೂ ನಟಿ ನಯನತಾರಾ ಮಂಗಳವಾರ (ಸೆಪ್ಟೆಂಬರ್ 5) ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.
ಅಟ್ಲೀ ನಿರ್ದೇಶನದ ‘ಜವಾನ್ʼ ಚಿತ್ರ ಸೆಪ್ಟೆಂಬರ್ 7ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಈ ಹಿನ್ನೆಲೆ ಮಂಗಳವಾರ ಮುಂಜಾನೆ ನಯನತಾರಾ ಹಾಗೂ ಪುತ್ರಿ ಸುಹಾನ ಅವರೊಂದಿಗೆ ಶಾರುಖ್ ತಿರುಪತಿಯ ವೆಂಕಟೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್ʼ ಅನ್ನು ಗೌರಿ ಖಾನ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ.
ಶಾರೂಖ್ ಖಾನ್ ಅಲ್ಲದೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಲೋತ್ರಾ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಅಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ಜವಾನ್’ ಚಿತ್ರವು ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.