• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್

ಪ್ರತಿಧ್ವನಿ by ಪ್ರತಿಧ್ವನಿ
April 6, 2025
in Top Story, ಕರ್ನಾಟಕ, ಸಿನಿಮಾ
0
ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್
Share on WhatsAppShare on FacebookShare on Telegram

ತರುಣ್ ಸುಧೀರ್, ರಾಜು ಗೌಡ ಹಾಗೂ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ.* .

ADVERTISEMENT

ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ “ಬಂಡೆ ಸಾಹೇಬ್”. ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ.‌ ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ‌ ರಾಜು ಗೌಡ ಬಿಡುಗಡೆ ಮಾಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಈ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೊದಲು ತಂಡಕ್ಕೆ ಅಭಿನಂದನೆ ಸಲ್ಲಿಸಬೇಕು. ಟೀಸರ್ ನಲ್ಲೇ ಇನ್ನೂ ಏನೋ ಇದೆ ಅನ್ನುವಷ್ಟರಲ್ಲೇ ಟೀಸರ್ ಮುಗಿದು ಹೋಗಿರುತ್ತದೆ. ಈ ವಿಷಯಕ್ಕೆ ನಿಜಕ್ಕೂ ನಿರ್ದೇಶಕರನ್ನು ಶ್ಲಾಘಿಸಬೇಕು. ಸಂತೋಷ್ ರಾಮ್ ಅವರ ನಟನೆ ಕೂಡ ಚೆನ್ನಾಗಿದೆ. ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಈ ಸಿನಿಮಾವನ್ನು ನಾನು ಕೂಡ ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದರು ನಟ ಶರಣ್.

ಅಪ್ಪು ಅವರಿಗೆ ಅರ್ಪಣೆಯಾದ ಗೀತೆ ಹೃದಯಕ್ಕೆ ಹತ್ತಿರವಾಯಿತು. ಟೀಸರ್ ಅಂತು ಟೀಸರ್ ಗೆ ಟೀಸರ್ ಇದ್ದ ಹಾಗೆ ಇದೆ. ಇಂತಹ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಅಭಿನಂದನೆಗಳು. ಇನ್ನೂ, ಎಸ್ ಪಿ ಸಾಂಗ್ಲಿಯಾನ ಸಿನಿಮಾ ನೋಡಿದಾಗ ಶಂಕರ್ ನಾಗ್ ಅವರು‌ ಸಾಂಗ್ಲಿಯಾನ ಅವರ ಹಾಗೆ ಕಂಡರು. ಈಗ ಈ ಚಿತ್ರದ ನಾಯಕ ಸಂತೋಷ್ ರಾಮ್ ಅವರನ್ನು ನೋಡಿದಾಗ ಮಲ್ಲಿಕಾರ್ಜುನ ಬಂಡೆ ಅವರನ್ನೇ ನೋಡಿದ ಹಾಗೆ ಆಗುತ್ತಿದೆ ಎಂದರು ನಿರ್ದೇಶಕ ತರುಣ್ ಸುಧೀರ್.

Yatnal: ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ವೀರಾವೇಶದಿಂದ ಮಾತಾಡ್ತಿದ್ರು..! #lakshmihebbalkar #yatnal #bjp

ನಿರ್ಮಾಪಕ ಗೋಪ್ಪಣ್ಣ ದೊಡ್ಮನಿ ಅವರು ನನ್ನ ಹಿರಿಯ ಸಹೋದರ ಇದ್ದಂತೆ. ಮೊದಲು ಅವರು ಸಿನಿಮಾ ಮಾಡುತ್ತೇನೆ ಎಂದಾಗ ಬೇಡ ಅಂದಿದ್ದೆ. ಈಗ ಅವರು ನಿರ್ಮಿಸಿರುವ ಮಲ್ಲಿಕಾರ್ಜುನ ಬಂಡೆ ಅವರ ಕುರಿತಾದ ಈ ಚಿತ್ರದ ಟೀಸರ್ ನೋಡಿ ಅವರು ಒಳ್ಳೆಯ ನಿರ್ಧಾರ ಮಾಡಿದ್ದಾರೆ‌ ಅನಿಸಿತು. ನಾವು ಮಲ್ಲಿಕಾರ್ಜುನ ಬಂಡೆ ಅವರನ್ನು ಹತ್ತಿರದಿಂದ ನೋಡಿದ್ದೇವೆ. ಈಗ ಸಂತೋಷ್ ರಾಮ್ ಅವರ ಅಭಿನಯ ನೋಡಿದಾಗ ಮಲ್ಲಿಕಾರ್ಜುನ ಬಂಡೆ ಅವರೆ ನೆನಪಾದರು. ದಕ್ಷ ಪೊಲೀಸ್ ಅಧಿಕಾರಿಯೊಬ್ಬರ ಕುರಿತಾದ ಈ ಚಿತ್ರವನ್ನು ಹೆಚ್ಚಿನ ಜನರು ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಶಾಸಕ ರಾಜು ಗೌಡ.

ಡಿ.ಎಸ್ ಮ್ಯಾಕ್ಸ್ ನ‌ ದಯಾನಂದ್ ಅವರು ಮಾತನಾಡಿ ನಿರ್ಮಾಪಕರು ಹಾಕಿದ ದುಡ್ಡಿಗೆ ಈ ಚಿತ್ರದಿಂದ ಹೆಚ್ಚು ಲಾಭ ಬರಲಿ ಎಂದು ಹಾರೈಸಿದರು.

ನಿರ್ಮಾಪಕರು ನನ್ನ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ನೈಜಘಟನೆ ಆಧಾರಿತ ಚಿತ್ರವನ್ನು ನಿರ್ದೇಶಿಸುವುದು ಸುಲಭವಲ್ಲ ಅನಿಸಿತು. ನಂತರ‌ ಕಥೆ ಇಷ್ಟವಾಗಿ ನಿರ್ದೇಶನಕ್ಕೆ ಮುಂದಾದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಚಿತ್ರೀಕರಣ‌ ಹಾಗೂ ನಂತರದ ಕಾರ್ಯಗಳು ಮುಕ್ತಾಯವಾಗಿರುವ ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಎಂದರು ನಿರ್ದೇಶಕ ಚಿನ್ಮಯ್ ರಾಮ್.

ನಿರ್ಮಾಪಕ ಗೋಪಣ್ಣ ದೊಡ್ಮನಿ ಅವರ ಪುತ್ರಿ ಗೀತಾ ಅವರು ಮಾತನಾಡಿ, ನಮ್ಮ ಕುಟುಂಬದವರು ಮಲ್ಲಿಕಾರ್ಜುನ ಬಂಡೆ ಅವರ ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇವೆ. ಹುತಾತ್ಮ ಪಿ.ಎಸ್.ಐ ಅವರ ಕಾರ್ಯವೈಖರಿಯನ್ನು ಎಲ್ಲರಿಗೂ ತಿಳಿಸುವ ಸಲುವಾಗಿ ನಮ್ಮ ತಂದೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದರು.

ನಾನು ಹಾಗೂ ವೀರಣ್ಣ ಕೊರಳ್ಳಿ ಅವರು ಗುಲ್ಬರ್ಗದಲ್ಲೇ ಎರಡು ತಿಂಗಳು ಇದ್ದು, ಮಲ್ಲಿಕಾರ್ಜುನ ಬಂಡೆ ಅವರ ಒಡನಾಡಿಗಳನ್ನು ಸಂಪರ್ಕ ಮಾಡಿದ್ದೆವು. ಆನಂತರ ಕಥೆ ಮೆಚ್ಚಿಕೊಂಡ ಗೋಪಣ್ಣ ದೊಡ್ಮನಿ ಅವರು ನಿರ್ಮಾಣಕ್ಕೆ ಮುಂದಾದರು. “ಪಂಟ್ರು” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ನಾನು ಈ ಚಿತ್ರದಲ್ಲಿ ಮಲ್ಲಿಕಾರ್ಜುನ ಬಂಡೆ ಅವರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಹೇಳಿದರು.

ನಾಯಕಿ ಕಾವ್ಯ ಭಾರದ್ವಾಜ್, ನಟ ಫರ್ವೆಜ್ ಸಿಂಹ, ಛಾಯಾಗ್ರಾಹಕ ಮುಂಜಾನೆ ಮಂಜು, ಸಂಗೀತ ನಿರ್ದೇಶಕ ಎಂ.ಎಸ್ ತ್ಯಾಗರಾಜ್, ಸಂಕಲನಕಾರ ಶೇಷಾಚಲ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅಲೆಕ್ಸಾ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ವೀರಣ್ಣ ಕೊರಳ್ಳಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

Tags: bande sahebbande saheb moviebande saheb pressmeetKannadakannada actorkannada actor sharan and tarunKannada Actorskannada cinemakannada filmKannada Film Industrykannada reelskannada upcomingMallikarjunmr. d picturesmrdpictures kannadapressmeetsharanTaruntharun sudhirtreanding shortsಬಂಟ್ವಾಳಬಂಟ್ವಾಳ ಪೊಲೀಸರುಬಂಡೆ ಸಾಹೇಬ್ಬಂಡೆ ಸಾಹೇಬ್ kannada movie audio releaseಬಂಡೆ ಸಾಹೇಬ್ the power of police
Previous Post

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು: ಸಿ.ಎಂ.ಸಿದ್ದರಾಮಯ್ಯ*

Next Post

BSY ಓರ್ವ ಕಡು ಭ್ರಷ್ಟ- ನನ್ನನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಿಸಿದ್ದರು..! : ಯತ್ನಾಳ್ ಸ್ಫೋಟಕ ಹೇಳಿಕೆ 

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
BSY ಓರ್ವ ಕಡು ಭ್ರಷ್ಟ- ನನ್ನನು ಚುನಾವಣೆಯಲ್ಲಿ ಸೋಲಿಸಲು  ಪ್ರಯತ್ನಿಸಿದ್ದರು..! : ಯತ್ನಾಳ್ ಸ್ಫೋಟಕ ಹೇಳಿಕೆ 

BSY ಓರ್ವ ಕಡು ಭ್ರಷ್ಟ- ನನ್ನನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಿಸಿದ್ದರು..! : ಯತ್ನಾಳ್ ಸ್ಫೋಟಕ ಹೇಳಿಕೆ 

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada