ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಸಂಬಂಧ ಬಾಲಿವುಡ್ ನಟ-ನಿರ್ದೇಶಕ ಸಿದ್ದಾಂತ್ ಕಪೂರ್ಗೆ ಬೆಂಗಳೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.
ಜುಲೈ12ರಂದು ಪೊಲೀಸರು ಹಲಸೂರಿನಲ್ಲಿರುವ ದಿ ಪಾರ್ಕ್ನಲ್ಲಿರುವ ಪಬ್ ಮೇಲೆ ದಾಳಿ ಮಾಡಿದಾಗ ಸಿದ್ದಾಂತ್ ಸೇರಿದಂತೆ ಐವರನ್ನು ಡ್ರಗ್ಸ್ ಸೇವನೆ ಆರೋಪದ ಮೇಲೆ ಬಂಧಿಸಿದ್ದರು.
ನಂತರ ತೀವ್ರ ವಿಚಾರಣೆ ನಡೆಸಿದ ಪೊಲೀಸರು ನಟನನ್ನು ಸ್ಟೇಷನ್ ಬೇಲ್ ಮೇಲೆ ಬಿಟ್ಟು ಕಳುಹಿಸಿದ್ದರು ಮತ್ತು ಅಗತ್ಯವಿದ್ದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಈ ಉರಿತು ಪ್ರತಿಕ್ರಿಯಿಸಿರುವ ನಟ ಸಿದ್ದಾಂತ್ ಕಪೂರ್ ಆಗಷ್ಟ್ 15ರ ನಂತರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ನಟ ವಿಚಾರನೆಗೆ ಹಾಜರಾದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.