ರಿಯಲ್ ಸ್ಟಾರ್ ಉಪೇಂದ್ರರವರ ಆರೋಗ್ಯದಲ್ಲಿ ಏರುಪೇರಾಗಿದ್ದು ನೆಲಮಂಗಲದ ಹರ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸದ್ಯ ಯುಐ ಚಿತ್ರೀಕರಣದಲ್ಲಿ ಉಪೇಂದ್ರ ಭಾಗಿಯಾಗಿದ್ದು ಥ್ರಿಲ್ಲರ್ ಮಂಜು ಸಾಸಹ ಸಂಯೋಜಿಸಿರುವ ಸಾಹಸ ದೃಶ್ಯ ಸೆರೆಹಿಡಿಯಲಾಗುತಿತ್ತು. ಆಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇನ್ನು ಶೂಟಿಂಗ್ ಸೆಟ್ನಿಂದ ವಿಡಿಯೋ ಹೇಳಿಕೆ ಒಂದನ್ನು ಬಿಡುಗಡೆ ಮಾಡಿರುವ ನಟ ಉಪೇಂದ್ರ ತಮ್ಗೆ ಏನು ಆಗಿಲ್ಲ ಯಾರು ಭಯ ಪಡುವ ಅವಶ್ಯಕತೆಯಿಲ್ಲ ಆರಾಮಾಗಿದ್ದೇನೆ.. ಜಸ್ಟ್ ಕೆಮ್ಮಿದೆ ಅಷ್ಟೇ ಎಂದು ಆಸ್ಪತ್ರೆಗೆ ದಾಖಲಾದ ಬಗ್ಗೆ ಉಪೇಂದ್ರ ಸ್ಪಷ್ಟನೆ ನೀಡಿದ್ದಾರೆ.