• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸೂರ್ಯನತ್ತ ಜಿಗಿದ ʼಆದಿತ್ಯʼ | ಇಸ್ರೊ ಮತ್ತೊಂದು ಮೈಲಿಗಲ್ಲು ; ಆದಿತ್ಯ-ಎಲ್‌1 ಉಡಾವಣೆ ಯಶಸ್ವಿ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in ಇದೀಗ, ದೇಶ
0
ಆದಿತ್ಯ-ಎಲ್‌1

ಆದಿತ್ಯ-ಎಲ್‌1 ಉಡಾವಣೆ

Share on WhatsAppShare on FacebookShare on Telegram

ನೈಸರ್ಗಿಕ ವಿಕೋಪ, ಪ್ರಳಯ ಮೊದಲಾದವುಗಳಿಗೂ ಸೂರ್ಯನಿಗೂ ಸಂಬಂಧವಿದೆಯೇ? ಇಂತಹ ಪ್ರಶ್ನೆಯನ್ನು ಶೋಧಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮುಂದಾಗಿದ್ದು ಚಂದ್ರಯಾನ 3ರ ಯಶಸ್ಸಿನ ನಂತರ ಸೂರ್ಯನತ್ತ ಆದಿತ್ಯ-ಎಲ್‌1 ಉಪಗ್ರಹ ಹಾರಿಸುವ ಮೂಲಕ ಶನಿವಾರ (ಸೆಪ್ಟೆಂಬರ್‌ 2) ಹೊಸ ದಾಖಲೆ ಬರೆದಿದೆ.

ADVERTISEMENT

ನಿಗದಿಪಡಿಸಿದ ಸಮಯದಲ್ಲಿ ಬೆಳಿಗ್ಗೆ 11.50ಕ್ಕೆ ಆದಿತ್ಯ ಎಲ್‌1 ಅಂತರಿಕ್ಷ ವೀಕ್ಷಣಾಲಯವು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-ಸಿ 57 ರಾಕೆಟ್‌ ಮೂಲಕ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ.

ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿ, ರೋವರ್ ಕಾರ್ಯ ನಿರ್ವಹಿಸುತ್ತಿರುವ ಬೆನ್ನಲ್ಲೇ ಇಡೀ ಪ್ರಪಂಚ ಈಗ ಆದಿತ್ಯ ಉಡಾವಣೆ ನಂತರ ಭಾರತದತ್ತ ಹೊರಳಿ ನೋಡುತ್ತಿದೆ.

ಶನಿವಾರವೇ ಆದಿತ್ಯ-ಎಲ್1 ಅನ್ನು ಕೆಳಸ್ತರದ ಭೂಕಕ್ಷೆಯೊಂದಕ್ಕೆ ಸೇರಿಸಲಾಗುವುದು. ಕ್ರಮೇಣ ಭೂಕಕ್ಷೆಯ ಎತ್ತರವನ್ನು ಹೆಚ್ಚಿಸಲಾಗುತ್ತದೆ. ಬಳಿಕ ನಿಗದಿತ ದಿನವೊಂದರಲ್ಲಿ ಅದಿತ್ಯ ಲಗ್ರಾಂಜಿಯನ್ ಬಿಂದುವಿನತ್ತ ಯಾನ ಬೆಳೆಸಲಿದೆ. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ. ಇದು ಸ್ಥಿರತೆ ಹೊಂದಿದ ವಿಶೇಷ ಕಕ್ಷೆಯಾಗಿದೆ. ಈ ವೀಕ್ಷಣಾಲಯಕ್ಕೆ ಯಾವ ಗ್ರಹಣವೂ ಬಾಧಿಸುವುದಿಲ್ಲ. ನಿರಂತರವಾಗಿ ಮತ್ತು ದೀರ್ಘವಾಗಿ ಅಡ್ಡಿ ಇಲ್ಲದೇ ಸೂರ್ಯನನ್ನು ಗಮನಿಸಲು ಸಹಾಯಕವಾಗುತ್ತದೆ.

ಆದಿತ್ಯ-ಎಲ್1 ಉಪಗ್ರಹದಲ್ಲಿ ಒಟ್ಟು ಏಳು ಉಪಕರಣಗಳಿದ್ದು, ನಾಲ್ಕು ಉಪಕರಣಗಳು ಸೂರ್ಯನನ್ನು ವೀಕ್ಷಣೆ ಮಾಡಿದರೆ ಉಳಿದ ಮೂರು ಉಪಕರಣಗಳು ಕಣಗಳು, ಪ್ಲಾಸ್ಮಾ, ಕಾಂತಕ್ಷೇತ್ರಗಳ ಅಧ್ಯಯನ ಮಾಡುತ್ತವೆ. ಇದು ಕೇವಲ ಇಸ್ರೋಯೋಜನೆಯಲ್ಲ, ಖಭೌತ ವಿಜ್ಞಾನಕ್ಕೆ ಸಂಬಂಧಿಸಿದ ದೇಶದ ಏಳು ಪ್ರಮುಖ ಸಂಸ್ಥೆಗಳು ಕೈಜೋಡಿಸಿರುವುದರಿಂದ ಇದು ರಾಷ್ಟ್ರೀಯ ಅಭಿಯಾನವಾಗಿದೆ ಎಂದು ಇಸ್ರೋ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

#WATCH | India's first solar mission, #AdityaL1 is all set to be launched from Satish Dhawan Space Centre in Sriharikota, at 11:50 am. pic.twitter.com/k12Doj0wCR

— ANI (@ANI) September 2, 2023

ಗೋಲ ಬಿಂಬ ಸೆರೆ ಹಿಡಿಯುವ ಕ್ಯಾಮೆರಾ

ಸೂರ್ಯನ ಗೋಲದ ಬಿಂಬವನ್ನು ಅತಿ ಹೆಚ್ಚು ಸ್ಪುಟವಾಗಿ ಸೆರೆ ಹಿಡಿಯುವ ಮತ್ತು ಕೃತಕವಾಗಿ ಗ್ರಹಣವನ್ನು ಸೃಷ್ಟಿಸಿ ಅಧ್ಯಯನ ಮಾಡುವ ಉಪಕರಣಗಳು ವಿಶಿಷ್ಟವಾದವು ಎಂದು ಅವರು ಹೇಳಿದರು.

“ಸೂರ್ಯನನ್ನು ಕೂಲಂಕಷವಾಗಿ ಅರ್ಥ ಮಾಡಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶ. ಅಲ್ಲದೇ, ಸೂರ್ಯನ ಹೊರ ಆವರಣ ಮತ್ತು ಒಳಗೆ ಚಿಮ್ಮುವ ಪ್ರಚಂಡ ಕಣ ಪ್ರವಾಹ, ಸೌರ ಜ್ವಾಲೆ, ವಿಕಿರಣಗಳು ಭೂಮಿಯತ್ತ ನುಗ್ಗುವಾಗ ಮುನ್ಸೂಚನೆ ನೀಡಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಇಲ್ಲವಾದಲ್ಲಿ, ಭೂಮಿಯನ್ನು ಸುತ್ತುತ್ತಿರುವ ಉಪಗ್ರಹಗಳು, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾನಿ ಉಂಟು ಮಾಡಬಲ್ಲವು. 1989 ರಲ್ಲಿ ಕೆನಡಾದಲ್ಲಿ ಸೌರ ಕಣ ಪ್ರವಾಹದಿಂದ ದೊಡ್ಡ ಅವಘಡ ಸಂಭವಿಸಿತ್ತು” ಎಂದು ಅವರು ತಿಳಿಸಿದರು.

ನಾಸಾ, ಯೂರೋಪಿಯನ್ ಸ್ಪೇಸ್ ಏಜೆನ್ಸಿ ಮತ್ತು ಜಾಕ್ಸಾ ಮಾತ್ರ ದೊಡ್ಡ ಪ್ರಮಾಣದ ನೌಕೆಗಳನ್ನು ಸೂರ್ಯನ ಅಧ್ಯಯನಕ್ಕೆ ಕಳುಹಿಸಿದ್ದು, ಇಸ್ರೋ ನಾಲ್ಕನೆಯದು ಎಂದು ಅವರು ಹೇಳಿದರು.

Tags: Aditya-L1Chandrayaan 3ISROಆದಿತ್ಯ-ಎಲ್‌1ಇಸ್ರೊಚಂದ್ರಯಾನ 3
Previous Post

ರಾಜಸ್ಥಾನ | ಪತ್ನಿಯನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿದ ಪತಿ ; ವ್ಯಾಪಕ ಟೀಕೆ

Next Post

ರಾಜಸ್ಥಾನ | ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ ಪ್ರಕರಣ ; ಮೂವರ ಬಂಧನ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025
Next Post
ರಾಜಸ್ಥಾನ

ರಾಜಸ್ಥಾನ | ಮಹಿಳೆಯನ್ನು ಬೆತ್ತಲುಗೊಳಿಸಿ ಮೆರವಣಿಗೆ ಪ್ರಕರಣ ; ಮೂವರ ಬಂಧನ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada