• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ಕಿಯ ಜೊತೆಗೆ ರಾಗಿ ಅಥವಾ ಜೋಳ ನೀಡುವಂತೆ ಸಲಹೆ ; ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಸಲಹೆಗೆ ಮೆಚ್ಚುಗೆ

ಪ್ರತಿಧ್ವನಿ by ಪ್ರತಿಧ್ವನಿ
June 19, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅಕ್ಕಿಯ ಜೊತೆಗೆ ರಾಗಿ ಅಥವಾ ಜೋಳ ನೀಡುವಂತೆ ಸಲಹೆ ; ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಸಲಹೆಗೆ ಮೆಚ್ಚುಗೆ
Share on WhatsAppShare on FacebookShare on Telegram

ಅನ್ನಭಾಗ್ಯ ಯೋಜನೆಯ ವಿಚಾರಕ್ಕೆ ಸಂಬಂಧ ಪಟ್ಟಂತೆ ರಾಜ್ಯದಲ್ಲಿ ಸಾಕಷ್ಟು ವಿವಾದಗಳು ಭುಗಿಲೆದ್ದಿದೆ, ಅದರಲ್ಲೂ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಕಲ್ಲು ಹಾಕಿದ್ದು, ಬಡ ಜನರು ಒಂದು ಹೊತ್ತು ನೆಮ್ಮದಿಯಿಂದ ಊಟ ಮಾಡೋದಕ್ಕೆ ಕೂಡ ತಡೆಯೊಡ್ಡುತ್ತಿದೆ ಎಂಬ ಆರೋಪವನ್ನ ಆಡಳಿತ ಪಕ್ಷ ಕಾಂಗ್ರೆಸ್ ಮಾಡುತ್ತಿದೆ.

ADVERTISEMENT

ಇನ್ನು ಕೇಂದ್ರ ಸರ್ಕಾರದ ಈ ನಡೆಗೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಆಕ್ರೋಶವನ್ನ ವ್ಯಕ್ತ ಪಡಿಸಿದ್ದು, ಮೋದಿ ಅವರ ದುರಾಡಳಿತ, ಮತ್ತು ಅಧಿಕಾರಶಾಹಿ ದಬ್ಬಾಳಿಕೆಗಳು ಎಂತಹದ್ದು ಎಂಬುವುದನ್ನ ಮತ್ತೆ ಮತ್ತೆ ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ಹೊರತು ಪಡಿಸಿ ಆಡಳಿತದಲ್ಲಿರುವ ವಿವಿಧ ಪಕ್ಷಗಳ ನಾಯಕರು ಹೇಳಿಕೆಯನ್ನ ನೀಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇನ್ನು ಕೇಂದ್ರ ಸರ್ಕಾರ ಅಕ್ಕಿ ಕೊಡೋದಿಲ್ಲ ಎಂಬ ವಿಚಾರಕ್ಕೆ ತಿರುಗಿ ಬಿದ್ದಿರುವ ರಾಜ್ಯ ಸರ್ಕಾರ, ಈ ಬಾರಿ ಎಷ್ಟೇ ಕಷ್ಟ ಆದರೂ ತೊಂದರೆಯಿಲ್ಲ. ನಾವು ಅನ್ನಭಾಗ್ಯ ಯೋಜನೆಯನ್ನ ಜಾರಿಗೆ ತಂದೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ನೀಡಿದ್ದು, ಈಗಾಗ್ಲೆ ತೆಲಂಗಾಣ, ಹೈದರಬಾದ್ ಹಾಗೂ ಪಂಜಾಬ್ ಛತ್ತಿಸ್ಗಡ ಮುಖ್ಯಮಂತ್ರಿಗಳೊಂದಿಗೆ ಅಕ್ಕಿ ಖರೀದಿಗಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಆದ್ರೆ ಈ ಬಗ್ಗೆ ಕೆಲ ರೈತ ಮುಖಂಡರು ಅಸಮಧಾನವನ್ನ ವ್ಯಕ್ತ ಪಡಿಸಿದ್ದು, ಬೇರೆ ರಾಜ್ಯಗಳ ಬಳಿ ಅಕ್ಕಿಗಾಗಿ ಬೇಡಿಕೆ ಇಡುವ ಬದಲು, ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ, ಜೊತೆ ಗೋಧಿ ರಾಗಿ, ಸಕ್ಕರೆ, ಜೋಳ ಇವುಗಳಲ್ಲಿ ಯಾವುದಾದರು ಒಂದು ಪಡಿತರವನ್ನ ಸೇರಿಸಿ 10 ಕೆಜಿ ಪಡಿತರ ನೀಡಿದಲ್ಲಿ ಜನತೆಗೆ ಅನುಕೂಲವಾಗುತ್ತದೆ ಎಂದು ಹೇಳುತ್ತಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಮತ್ತು ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಅವರು ಕೂಡ ಸಿಎಂಗೆ ಪತ್ರ ಬರೆದಿದ್ದು, ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಧಾನ್ಯಕ್ಕೆ ಹುಡುಕಾಟ ನಡೆಸುವ ಬದಲು, ರಾಗಿ ಇಲ್ಲವೇ ಜೋಳ ನೀಡಬಹುದು. ಸ್ವಾಮಿನಾಥನ್ ವರದಿ ಶಿಫಾರಸಿನ ಬೆಂಬಲ ಬೆಲೆ ನೀಡಿ ನಮ್ಮ ರೈತರಿಂದಲೇ ನೇರವಾಗಿ ಖರೀದಿಸಬಹುದು ಎಂದು ಸಲಹೆ ನೀಡಿದ್ದಾರೆ.

ಪ್ರಕಾಶ್ ಕಮ್ಮರಡಿ ಅವರ ಈ ಸಲಹೆಗೆ ರೈತ ಮುಖಂಡರಿಂದ ವ್ಯಾಪಕವಾದ ಬೆಂಬಲ ಸಿಗುತ್ತಿದ್ದು,ಅವರ ಈ ಸಲಹೆ ಉತ್ತಮವಾಗಿದೆ. ಮತ್ತು ರಾಜ್ಯದ ರೈತರ ಸಬಲೀಕರಣಕ್ಕೆ ಕೂಡ ಇದು ಸೂಕ್ತವಾದ ಉಪಾಯ ಎನ್ನವ ಅಭಿಪ್ರಾಯ ವ್ಯಕ್ತವಾಗ್ತಾ ಇದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಯಾವ ರೀತಿಯಾದ ನಿರ್ಧಾರವನ್ನ ಪ್ರಕಟಿಸಲಿದೆ ಅಂಬುವುದನ್ನು ಕಾದು ನೋಡಬೇಕಾಗಿದೆ.

Tags: Agricultural economistBJPcmsiddaramiahCongress PartyDr. Appreciation for Prakash Kammardi'sDr. Appreciation for Prakash Kammardi's suggestiongive milletlatestnewsPMModiಬಿಜೆಪಿ
Previous Post

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಐಟಿ ಸೆಲ್ ಅಧ್ಯಕ್ಷ ವಿರುದ್ಧ ದೂರು ದಾಖಲು

Next Post

ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post
ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು

ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada