ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾ ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಎರಡು ಫಾರ್ಮ್ಗಳಲ್ಲಿ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದು ಶನಿವಾರ (ಆಗಸ್ಟ್ 19) ಮಾಧ್ಯಮಗಳು ವರದಿ ಮಾಡಿವೆ.
ಮಲೆಯಂಪಾಡಿಯಲ್ಲಿರುವ ಫಾರ್ಮ್ ಒಂದರಲ್ಲಿ ಶುಕ್ರವಾರ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದನ್ನು ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದರು. ಇದಾದ ಬಳಿಕ ಅಲ್ಲಿರುವ ಹಾಗೂ 10 ಕಿ.ಮೀ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿಷ್ಟಾಚಾರ ಪ್ರಕಾರ ಹೂಳಲು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 3ಡಿ ಅಂಚೆ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಫಿದಾ
ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿಲೋಮೀಟರ್ ಪ್ರದೇಶವನ್ನು ಸೋಂಕು ಪತ್ತೆಯಾದ ಪ್ರದೇಶವೆಂದೂ, 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಣಾವಲು ವಲಯ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಹರಡುವ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ.