ಪವಿತ್ರಾಗೌಡಗೆ (Pavitra gowda) ಅಶ್ಲೀಲ ಮೆಸೇಜ್ ಕಳುಹಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಯ (Renuka swamy) ಹತ್ಯೆ ಕೇಸ್ನಲ್ಲಿ ನಟ ದರ್ಶನ್ (Actor darshan) ಸೇರಿ ಎಲ್ಲಾ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಿದಂತಾಗಿದೆ. ಕೋರ್ಟ್ ನಿನ್ನೆ 2ನೇ ಬ್ಯಾಚ್ನಲ್ಲಿ ಎ2 ದರ್ಶನ್ ಸೇರಿ ಧನರಾಜ ವಿನಯ್, ಪ್ರದೂಶ್ನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ 13 ದಿನಗಳ ಕಸ್ಟಡಿಯಲ್ಲಿ ಸಂಪೂರ್ಣ ವಿಚಾರಣೆ ಬಳಿಕ ಡಿ ಗ್ಯಾಂಗ್ಗೆ (D gang) ಪರಪ್ಪನ ಅಗ್ರಹಾರ ಜೈಲಿನ ದರ್ಶನ ಆಗಿದೆ.ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ನಟ ದರ್ಶನ್ಗೆ ನಿನ್ನೆ ರಾತ್ರಿ ಜೈಲೂಟ ನೀಡಿದ್ದಾರೆ.
ಚಪಾತಿ, ಅನ್ನ, ಮಜ್ಜಿಗೆ ನೀಡಿದ್ದು, ದರ್ಶನ್ ಚಪಾತಿ ಮಾತ್ರ ತಿಂದು ಮಜ್ಜಿಗೆ ಕುಡಿದಿದ್ದು, ಜೈಲು ಸಿಬ್ಬಂದಿ ಕೊಟ್ಟ ಅನ್ನ ತಿನ್ನಲು ಒಲ್ಲೆ ಎಂದಿದ್ದಾರಂತೆ.. ರಾತ್ರಿ 8 ಗಂಟೆ ಸುಮಾರಿಗೆ ಜೈಲೂಟ ಸೇವಿಸಿದ ದರ್ಶನ್ ಯಾರ ಜೊತೆಗೂ ಮಾತನಾಡದೇ ಮೌನಕ್ಕೆ ಜಾರಿದ್ದಾರೆ. ಸಪ್ಪೆ ಮೊರೆ ಹಾಕಿಕೊಂಡು ನಟ ದರ್ಶನ್ ಜೈಲಲ್ಲಿ ಕುಳಿತಿದ್ದಾರೆಂದು ತಿಳಿದುಬಂದಿದೆ.