• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

TMC ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್‌ ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲು ನಿರ್ಧಾರ

Any Mind by Any Mind
May 2, 2021
in ದೇಶ
0
TMC ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್‌ ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲು ನಿರ್ಧಾರ
Share on WhatsAppShare on FacebookShare on Telegram

  

ADVERTISEMENT

ಪಂಚರಾಜ್ಯಗಳ  ವಿಧಾನಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ತಮಿಳುನಾಡಿನಲ್ಲಿ ಡಿಎಂಕೆ  ಪರ ಚುನಾವನಾ ಪ್ರಚಾರ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತ, ಚುನಾವಣಾ ರಣತಂತ್ರ ಪರಿಣಿತನೆಂದೇ ಹೆಸರು ಪಡೆದ ಪ್ರಶಾಂತ್‌ ಕಿಶೋರ್‌ ಚುನಾವಣಾ ತಂತ್ರಜ್ಞ ಹುದ್ದೆಗೆ ತ್ಯಜಿಸುವುದಾಗಿ ಘೋಷಿಸಿದ್ದಾರೆ.

ನಾನು ಎಂಟು-ಒಂಬತ್ತು ವರ್ಷಗಳಿಂದ ಚುನಾವಣಾ ತಂತ್ರಜ್ಞನ ಕೆಲಸ ಮಾಡುತ್ತಿದ್ದೇನೆ, ನಾನು ಸಾಕಷ್ಟು ನೋಡಿದ್ದೇನೆ, ನಾನು ಈ ಹುದ್ದೆಯಲ್ಲಿ ಮತ್ತೆ ಮುಂದುವರೆಯಲು ಬಯಸುವುದಿಲ್ಲ. ಈಗಾಗಲೇ ಈ ಸ್ಥಾನದಲ್ಲಿದ್ದು, ಸಾಕಷ್ಟು ಮಾಡಿದ್ದೇನೆ. ಈಗ ಸ್ವಲ್ಪ ವಿರಾಮ ತೆಗೆದುಕೊಂಡು ಮುಂದೆ ಜೀವನದಲ್ಲಿ ಇನ್ನೇನಾದರೂ ಮಾಡಲು ಬಯಸುತ್ತೇನೆ.  ಇದೀಗ ಈ ಜವಾಬ್ದಾರಿಯಿಂದ ತ್ಯಜಿಸಲು ಬಯಸುತ್ತೇನೆ” ಎಂದು ಪ್ರಶಾಂತ್ ಕಿಶೋರ್ ಎನ್‌ಡಿಟಿವಿ ಯ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ನಾನು ವಿಫಲ ರಾಜಕಾರಣಿ ಎಂದ ಪ್ರಶಾಂತ್‌ ಕಿಶೋರ್‌  ರಾಜಕೀಯಕ್ಕೆ ಸೇರುವುದರ ಅಥವಾ ರಾಜಕೀಯದಿಂದ ದೂರ ಉಳಿವ ಬಗ್ಗೆ  ಮಾತನಾಡಿಲ್ಲ. ತಮ್ಮ ಸಂಸ್ಥೆಯಾದ ಐಪಾಕ್ ಸಮರ್ಥರ ಕೈನಲ್ಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರ ಹೆಚ್ಚು ಸದ್ದು ಮಾಡಿದ ಪ್ರಶಾಂತ್‌ ಕಿಶೋರ್‌ ಟ್ವೀಟ್

ಪಶ್ಚಿಮ ಬಂಗಾಳದಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಕಮಲವನ್ನು ಅರಳಿಸಲು ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿಂದ ಬಿಜೆಪಿಯ ಪ್ರಭಾವಿ ರಾಷ್ಟ್ರೀಯ ನಾಯಕರು ಕೋವಿಡ್‌ ಎರಡನೇ ಅಲೆಯನ್ನೂ ಲೆಕ್ಕಿಸದೆ. ಪಶ್ಚಿಮ ಬಂಗಾಳದಲ್ಲಿ ಬೃಹತ್‌ ಚುನಾವಣಾ ರ್ಯಾಲಿಗಳನ್ನು ನಡೆಸಿದ್ದರು.  ಮಮತಾ ಬ್ಯಾನರ್ಜಿ ಮತ್ತು ಮೋದಿ ನಡುವೆ ಸಾಕಷ್ಟು ವಾಕ್‌ ಸಮರಗಳು ನಡೆದಿದ್ದವು, ಈ ಮಧ್ಯೆ ಭಾರತದ ರಾಜಕೀಯ ಚಾಣಾಕ್ಷನೆಂದೇ ಹೆಸರು ಪಡೆದಿರುವ ಪ್ರಶಾಂತ್‌ ಕಿಶೋರ್‌ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸಿ ಮಾಡಿರುವ ಟ್ವೀಟ್‌ ಹೆಚ್ಚು ಸದ್ದು ಮಾಡುತ್ತು.

ದೇಶದ ಪ್ರಜಾಪ್ರಭುತ್ವದ ಪ್ರಮುಖ ಯುದ್ಧಗಳಲ್ಲಿ ಪಶ್ಚಿಮ‌ ಬಂಗಾಳದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯೂ ಒಂದು, ಎನ್ನುವ ಮೂಲಕ ಟಿಎಂಸಿಯ ಘೋಷವಾಕ್ಯವನ್ನು ಹಂಚಿಕೊಂಡು ತೃಣಮೂಲ ಕಾಂಗ್ರೆಸ್‌ ಗೆಲುವಿಗೆ ಪ್ರಶಾಂತ್‌ ಬೆನ್ನೆಲುಬಾಗಿ ನಿಂತಿದ್ದರು.

“ಬಂಗಾಳ ಮಾತ್ರ ತನ್ನ ಸ್ವಂತ ಮಗಳನ್ನು ಬಯಸುತ್ತದೆ”. ಈ ಚುನಾವಣೆ ಭಾರತದ ಪ್ರಜಾಪ್ರಭುತ್ವದ ಪ್ರಮುಖ ಸಮರಗಳಲ್ಲಿ ಒಂದಾಗಿದೆ. ಬಂಗಾಳದ ಜನತೆ ತಮ್ಮ ಸಂದೇಶ ನೀಡಲು ಸಜ್ಜಾಗಿದ್ದಾರೆ. ಜನತೆ ಚುನಾವಣೆಯಲ್ಲಿ ಸರಿಯಾದ ಉತ್ತರ ನೀಡಲು ಧೃಢ ನಿರ್ಧಾರ ಮಾಡಿಕೊಂಡಿದ್ದಾರೆ. ಮೇ 2 ರಂದು ನನ್ನ ಈ ಕೊನೆಯ ಟ್ವೀಟನ್ನು ಗಮನಿಸಿ ಎಂಬ ಸಂದೇಶವನ್ನು ಟ್ವಿಟರ್‌ ಮೂಲಕ ಹಂಚಿಕೊಂಡಿದ್ದರು.

2020ರ ಡಿಸೆಂಬರ್ 21 ರಂದು ಪ್ರಶಾಂತ್‌ ಕಿಶೋರ್‌ ಬಿಜೆಪಿಗೆ ಮತ್ತೊಂದು ಸವಾಲು ಹಾಕಿದ್ದರು. ” ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡಲಿದೆ. ನನ್ನ ಮಾತು ಸುಳ್ಳಾದರೆ ಈ ಕ್ಷೇತ್ರ ತ್ಯಜಿಸುತ್ತೇನೆ, ಬರೆದಿಟ್ಟುಕೊಳ್ಳಿ” ಎಂದಿದ್ದರು.‌

For all the hype AMPLIFIED by a section of supportive media, in reality BJP will struggle to CROSS DOUBLE DIGITS in #WestBengal

PS: Please save this tweet and if BJP does any better I must quit this space!

— Prashant Kishor (@PrashantKishor) December 21, 2020

ಟಿಎಂಸಿ ಗೆಲುವಿನ ಬಗ್ಗೆ ನನಗೆ ಭರವಸೆ ಇತ್ತು

ಪಶ್ಚಿಮ ಬಂಗಾಳದಲ್ಲಿ  294 ವಿಧಾನಸಭಾ ಕ್ಷೇತ್ರಗಳಿಗೆ  ಒಟ್ಟು 8 ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಏಣಿಕೆ ಇಂದು ನಡೆಯುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಶಾಂತ್‌ ಕಿಶೋರ್‌  ನನಗೆ ಮೊದಲಿನಿಂದಲೂ ಟಿಎಂಸಿ ಗೆಲುವಿನ ವಿಚಾರ ಕುರಿತು ಬಹಳ ಭರವಸೆಯಿತ್ತು. ಬಿಜೆಪಿಯ ಜೊತೆ ನಾವು ತೀವ್ರ ಸ್ಪರ್ಧೆ ಮಾಡಿದ್ದೇವೆ. ಹಾಗು  ಕಠಿಣ ಹೋರಾಟ ಎದುರಿಸಿದ್ದೇವೆ ಎಂದಿದ್ದಾರೆ.  ಇಂದು ಬೆಳಗ್ಗೆಯಿಂದ ನಡೆಯುತ್ತಿರುವ  ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ  ಬಿಜೆಪಿ ಅನ್ನು ಹಿಂದಿಕ್ಕಿ ಟಿಎಂಸಿ ಭರ್ಜರಿಯಾಗಿ ಮುನ್ನುಗುತ್ತಿದೆ.

Tags: After Bengal victory
Previous Post

ಬಸವಕಲ್ಯಾಣದಲ್ಲಿ ಅರಳಿದ ಕಮಲ; ಕಾಂಗ್ರೆಸ್ ತೆಕ್ಕೆಗೆ ಮಸ್ಕಿ – ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮುನ್ನಡೆ

Next Post

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada