• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗೂಗಲ್ ಬಳಿಕ ಕನ್ನಡಿಗರ ಸಹನೆ ಕೆಣಕಿದ ಅಮೇಜಾನ್ !

Any Mind by Any Mind
June 5, 2021
in ಕರ್ನಾಟಕ
0
ಗೂಗಲ್ ಬಳಿಕ ಕನ್ನಡಿಗರ ಸಹನೆ ಕೆಣಕಿದ ಅಮೇಜಾನ್ !
Share on WhatsAppShare on FacebookShare on Telegram

ಕಳೆದೆರಡು ದಿನಗಳ ಹಿಂದೆ ಗೂಗಲ್‌ ಕನ್ನಿಡಿಗರ ಸ್ವಾಭಿಮಾನವನ್ನು ಕೆದಕಿತ್ತು. ಕನ್ನಡಿಗರು ಒಕ್ಕೊರಳಿನಿಂದ ಗೂಗಲ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು. ಕೂಡಲೇ ಎಚ್ಚೆತ್ತ ಗೂಗಲ್ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿತ್ತು. ಇದಾದ ಬೆನ್ನಲೆ ಅಮೇಜಾನ್‌ ಉದ್ಧಟತನ ಮೆರೆದಿದೆ.

ADVERTISEMENT

ಆನ್​ಲೈನ್ ಶಾಪಿಂಗ್ ಸಂಸ್ಥೆಯಾದ ಅಮೇಜಾನ್ ಮೂಲಕ ಮಾರಾಟ ಮಾಡುವ ಮಹಿಳೆಯರ ಒಳ ಉಡುಪುಗಳ ಮೇಲೆ ಕನ್ನಡ ಬಾವುಟ, ಲಾಂಛನ ಬಳಕೆಯಾಗಿದ್ದು, ಪ್ರತಿಯೊಬ್ಬ ಕನ್ನಡಿಗನು ದೇಶದ ಬಾವುಟದಷ್ಟೇ ಗೌರವಿಸುವ ಮತ್ತೊಂದು ಬಾವುಟವೆಂದರೆ ಅದು ಕೆಂಪು, ಹಳದಿ ಬಣ್ಣವಿರುವ  ಕರುನಾಡ ಬಾವುಟ. ಇದೀಗ ಅಮೇಜಾನ್‌ ಕನ್ನಡಿಗರ ಸಂಸ್ಕೃತಿಗೆ ಅಪಮಾನ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಮೇಜಾನ್‌ ಸಂಸ್ಥೆ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದಾರೆ.

ತಪ್ಪೊಪ್ಪಿಕೊಂಡು ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್‌

ಒಳ ಉಡುಪುಗಳ ಮೇಲೆ ಕನ್ನಡದ ಧ್ವಜದ ಬಣ್ಣ ಮತ್ತು ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಿ ಕನ್ನಡಿಗರ ಅಸ್ಮಿತೆಗೆ, ಸಾರ್ವಭೌಮತ್ವಕ್ಕೆ ಧಕ್ಕೆ ಆಗುವಂತೆ ಮಾಡಿರುವ  ಕೆನಡಾದ ಅಮೆಜಾನ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರಗಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಿನ್ನೆಯಷ್ಟೇ ಡೆಪ್ಟ್ ಕನ್ಸಾಲಿಡೇಷನ್ ಸ್ಕ್ವಾಡ್.ಕಾಮ್ ಮತ್ತು ಗೂಗಲ್ ಸಂಸ್ಥೆ ಇಂತಹದೇ ಅಚಾತುರ್ಯದ ಕೆಲಸವನ್ನು ಮಾಡಿ ಕನ್ನಡಿಗರಿಂದ ಛೀಮಾರಿ ಹಾಕಿಸಿಕೊಂಡ ನಂತರ ಕ್ಷಮೆಯನ್ನು ಕೂಡ ಯಾಚಿಸಿದ್ದು ಹಸಿಯಾಗಿರುವಾಗಲೇ ಇಂದು ಅಮೆಜಾನ್ ಸಂಸ್ಥೆ ಇಂತಹ ಉದ್ಧಟತನ ಮೆರೆದಿರುವುದು ಕನ್ನಡಿಗರ ಸೌಮ್ಯ ಭಾವನೆಯನ್ನು ಕೆರಳಿಸಿದೆ. ತಮ್ಮ ವ್ಯಾಪಾರವನ್ನು ವೃದ್ಧಿಸಿಕೊಳ್ಳಲು ಅದೂ ಒಳ ಉಡುಪುಗಳ ಮೇಲೆ ಅಖಂಡ ಕನ್ನಡ ಮನಸ್ಸುಗಳು ಗೌರವಿಸುವ, ಪೂಜ್ಯಭಾವನೆಯಿಂದ ನೋಡಲಾಗುವ ರಾಜ್ಯದ ಧ್ವಜ ಮತ್ತು ಕರ್ನಾಟಕ ಸರ್ಕಾರದ ಲಾಂಛನ ಬಳಸಿ, ಅಖಂಡ ಕನ್ನಡಿಗರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಇಂತಹವರನ್ನು ಹೀಗೆ ಬಿಟ್ಟರೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಹಾಗಾಗಿ ಇಂತಹ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಕನ್ನಡ ಕೊಳಕು ಭಾಷೆಯೆಂದು ಅವಾಂತರ ಸೃಷ್ಟಿಸಿದ ಗೂಗಲ್: ಇಂಟರ್‌ನೆಟ್‌ ದೈತ್ಯನಿಗೆ ಹೆಚ್‌ ಡಿ ಕುಮಾರಸ್ವಾಮಿ ತರಾಟೆ

     ಕೆನಡಾದ ಅಮೆಜಾನ್ ಸಂಸ್ಥೆ ಕೂಡಲೇ ಕ್ಷಮೆಯಾಚಿಸಬೇಕು ಮತ್ತು ಈ ರೀತಿ ಒಳಉಡುಪುಗಳ ಮೇಲೆ ರಾಜ್ಯದ ಲಾಂಛನವನ್ನು ಬಳಸಲು ಆದೇಶಿಸಿದ ಆಡಳಿತ ಮಂಡಳಿ, ಅಧಿಕಾರಿ ಮತ್ತು ನೌಕರರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

     ಕನ್ನಡಿಗರ ಭಾವನೆಗೆ ಧಕ್ಕೆ ತಂದಿರುವ ಅಮೆಜಾನ್ ಸಂಸ್ಥೆಯ ವಿರುದ್ಧ ಟ್ವಿಟ್ಟರ್ ಅಭಿಯಾನವನ್ನು ಪ್ರಾರಂಭಿಸಲಾಗುವುದು ಮತ್ತು ಕ್ಷಮೆ ಕೇಳಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ನಮ್ಮ ಕರ್ನಾಟಕದ ಜನತೆ ಅಮೆಜಾನ್ ನೊಂದಿಗೆ ವ್ಯವಹಾರವನ್ನು ಸ್ಥಗಿತಗೊಳಿಸಬೇಕು ಎಂದು ಅಧ್ಯಕ್ಷರು ಮನವಿ ಮಾಡಿದ್ದಾರೆ.

     ಸಾವಿರಾರು ಕೋಟಿ ವ್ಯವಹಾರ ವಹಿವಾಟು ನಡೆಸುವ ಅಮೆಜಾನ್ ಸಂಸ್ಥೆ, ಈ ರೀತಿ ಒಂದು ರಾಜ್ಯದ ಜನತೆಗೆ ದಕ್ಕೆ ತರುವ ರೀತಿ ನಡೆದುಕೊಂಡಿರುವುದು ಅಕ್ಷಮ್ಯ ಅಪರಾಧ. ಕರ್ನಾಟಕದಲ್ಲಿಯೂ ತನ್ನ ಶಾಖೆಯನ್ನು ತೆರೆದಿರುವ ಅಮೆಜಾನ್, ಇಲ್ಲಿನ ನೆಲ-ಜಲ, ಭೂಮಿಯನ್ನು ಬಳಸಿಕೊಂಡು ವ್ಯಾಪಾರವನ್ನು ವೃದ್ಧಿಸಿಕೊಂಡಿದೆ. ಅಷ್ಟಾಗಿಯೂ ಕನ್ನಡಿಗರನ್ನ ಅವಮಾನಿಸಿರುವುದು ಹೇಯ ಕೃತ್ಯ ಎಂದು ಆರೋಪಿಸಿದ್ದಾರೆ.

     ನಮ್ಮ ರಾಜ್ಯದ ಧ್ವಜದ ಹಳದಿ ಬಣ್ಣವು ಅರಿಶಿಣ ಮತ್ತು ಕೆಂಪು ಬಣ್ಣವು ಕುಂಕುಮದ ಸಂಕೇತವಾಗಿದೆ. ಇವೆರಡು ವಸ್ತುಗಳು ಭಾರತದ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ವಿವಿಧ ಕಾರಣಗಳಿಗೆ ಬಳಸುತ್ತಾರೆ. ಕೆಂಪು ಬಣ್ಣ ಅಭಿವೃದ್ಧಿಯ ಸಂಕೇತ, ಅರಿಸಿಣ ಬಣ್ಣ ಆರೋಗ್ಯಕರ ಸಮಾಜದ ಸಂಕೇತವಾಗಿದೆ. ಇವೆರಡು ಮಂಗಳವನ್ನು ಮತ್ತು ಯೋಗಕ್ಷೇಮವನ್ನು ಸೂಚಿಸುತ್ತದೆ. ಇಂತಹ ಮಂಗಳಕರವಾದ ಸಂಕೇತಕ್ಕೆ ಅವಮಾನಿಸುವ ಅಚಾತುರ್ಯ ಎಸಗಿರುವ ಸಂಸ್ಥೆಯನ್ನು ಕ್ಷಮಿಸುವ ಮಾತೇ ಇಲ್ಲ. ಅವರ ವಿರುದ್ಧ ಕಾನೂನು ಸಮರ ಕಟ್ಟಿಟ್ಟಬುತ್ತಿ ಎಂದು ಆಕ್ರೋಶಗೊಂಡಿದ್ದಾರೆ.

ಈ ಮೂಲಕ ಎಲ್ಲಾ ಕನ್ನಡಿಗರು ಈ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಅಮೆಜಾನ್ ಸಂಸ್ಥೆಗೂ ದೂರು ಸಲ್ಲಿಸುವಂತೆ ಕೋರಿದ್ದಾರೆ.

Previous Post

ಕನ್ನಡಕ್ಕೆ ಕೆಟ್ಟದ್ದೆಂಬ ಹಣೆಪಟ್ಟಿ ಅಂಟಿಸುವ ಚಟ: ಪದೇಪದೇ ಕನ್ನಡ ಭಾಷೆಗೆ ಏಕೆ ಹೀಗಾಗ್ತಿದೆ ?

Next Post

‘ಅಪೋಲೋದಲ್ಲಿ ಲಸಿಕೆ ಹಾಕಿಸಿಕೊಳ್ಳಿ’ ಎಂದಿದ್ದ ಡಿಸಿ ರೋಹಿಣಿ ಸಿಂಧೂರಿ!

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
Next Post
‘ಅಪೋಲೋದಲ್ಲಿ ಲಸಿಕೆ ಹಾಕಿಸಿಕೊಳ್ಳಿ’ ಎಂದಿದ್ದ ಡಿಸಿ ರೋಹಿಣಿ ಸಿಂಧೂರಿ!

'ಅಪೋಲೋದಲ್ಲಿ ಲಸಿಕೆ ಹಾಕಿಸಿಕೊಳ್ಳಿ’ ಎಂದಿದ್ದ ಡಿಸಿ ರೋಹಿಣಿ ಸಿಂಧೂರಿ!

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada