ಬೆಂಗಳೂರು : ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ . ಈ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಮುಂದಿನ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ಜೋರಾಗಿದೆ.
![](https://pratidhvani.com/wp-content/uploads/2023/05/bjp-core-committee-meeting-amit-shah-1-1200x675-2-1024x576.jpg)
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಹೀಗಾಗಿ ಮುಂದಿನ ವಿಪಕ್ಷ ನಾಯಕನ ಆಯ್ಕೆಗೆ ಮಹತ್ವದ ಸಭೆ ಕರೆಯಲಾಗಿದೆ .
ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಬಲವಾಗಿ ದನಿ ಎತ್ತು ಸಾಮರರ್ಥ್ಯವಿದ್ದ ಬಹುತೇಕ ನಾಯಕರು ಸೋತು ಮನೆ ಸೇರಿದ್ದಾರೆ. ಇನ್ನೂ ಹಲವು ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದೇ ವಿಧಾನಸಭೆ ಪ್ರವೇಶಿಸದಂತೆ ಮಾಡಿದೆ. ಸದ್ಯ ವಿಪಕ್ಷ ನಾಯಕಮ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಹೆಸರು ಕೇಳಿ ಬರ್ತಿದ್ದು ಬಿಜೆಪಿ ಶಾಸಕಾಂಗ ಸಭೆಯತ್ತ ಎಲ್ಲರ ಗಮನ ನೆಟ್ಟಿದೆ.