ಇಡೀ ದೇಶವೇ ಬೆಚ್ಚಿಬೀಳಿಸುವ ಯುವತಿ ಶ್ರದ್ಧಾ ವಾಲ್ಕರ್(26) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಪೊಲೀಸ್ ಕಸ್ಟಡಿ ಅವಧಿಯನ್ನು ನವೆಂಬರ್ 22ರವರೆಗೂ ವಿಸ್ತರಿಸಲಾಗಿದೆ.
ಆರೋಪಿ ಅಫ್ತಾಬ್ನನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಪೊಲೀಸ್ ಕಸ್ಟಡಿಯನ್ನು ನವೆಂಬರ್ 22ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಮೆಟ್ರಾಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಆರೋಪಿ ಅಫ್ತಾಬ್ ಧಾರ್ಮಿಕ ಸಂಘಟನೆಗಳಿಂದ ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾನೆ. ಜೊತೆಗೆ ಪೊಲೀಸರು ಇನ್ನು ಹೆಚ್ಚಿನ ವಿಚಾರಣೆ ನಡೆಸಬೇಕಾಗಿರುವ ಕಾರಣ ಕಸ್ಟಡಿ ಅವಧಿಯನ್ನು ಮುಂದಿನ ಐದು ದಿನಗಳವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.






