ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಮೇ.24ರಿಂದ ಮತ್ತೆ 14 ದಿನಗಳ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರು ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು 52,58 ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಒಂದೇ ದಿನ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತದಿಂದ 353 ಜನರು ಸಾವನ್ನಪ್ಪಿದ್ದಾರೆ.
ಹೆಚ್ಚು ಸೋಂಕಿತಕ್ಕೆ ಒಳಗಾಗುತ್ತಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿ ಇದ್ದರೆ, ಮೈಸೂರು ದ್ವಿತೀಯ ಸ್ಥಾನದಲ್ಲಿ ಇದೆ, ಬಳ್ಳಾರಿ ತೃತೀಯ ಸ್ಥಾನದಲ್ಲಿದೆ.






