• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉತ್ತರ ಕನ್ನಡ | ಮತ್ತೆ ಬಿಳಿ ಹಾವು ಪ್ರತ್ಯಕ್ಷ ; ಸ್ನೇಕ್‌ ಪವನ್‌ ನಾಯ್ಕರಿಂದ ರಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ಕರ್ನಾಟಕ
0
ಉತ್ತರ ಕನ್ನಡ

ಉರಗ ರಕ್ಷಕ ಪವನ್‌

Share on WhatsAppShare on FacebookShare on Telegram

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಗ್ರಾಮದಲ್ಲಿ ಹೆಗಡೆ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯಂಗಳದಲ್ಲಿ ಬೃಹತ್ ಗಾತ್ರದ ಬಿಳಿ ಹೆಬ್ಬಾವೊಂದು ಪತ್ತೆಯಾಗಿ ಮನೆಮಂದಿಗೆ ಗಾಬರಿ ಮೂಡಿಸಿದ ಘಟನೆ ನಡೆದಿದೆ.

ADVERTISEMENT

ಮಾಹಿತಿ ತಿಳಿದು ಉರಗ ರಕ್ಷಕ ಪವನ್ ನಾಯ್ಕ ಅವರು ಕೂಡಲೇ ಸ್ಥಳಕ್ಕಾಗಮಿಸಿ ಈ ಬಿಳಿ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಹಾವನ್ನು ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸಿದರು. ಹೆಬ್ಬಾವಿನ ಮೈಮೇಲೆ ಸಣ್ಣ-ಪುಟ್ಟ ಗಾಯಗಳಿದ್ದ ಕಾರಣ ಅದನ್ನು ಇದೀಗ ಮೈಸೂರು ಮೃಗಾಲಯಕ್ಕೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉತ್ತರ ಕನ್ನಡ
ಬಿಳಿ ಹಾವು

ಮುಕ್ರಿ ಅವರ ಮನೆಯಂಗಳದಲ್ಲಿ ಈ ಹೆಬ್ಬಾವು ಕಾಣಿಸಿಕೊಂಡ ಸಂದರ್ಭದಲ್ಲಿ, ಪಕ್ಕದ ಮನೆಯವರಾದ ಆರ್.ಟಿ.ಓ. ಆಫಿಸ್ ಹೋಮ್ ಗಾರ್ಡ್ ಗಣೇಶ್ ಮುಕ್ರಿಯವರು ತಕ್ಷಣ ಉರಗ ರಕ್ಷಕ ಪವನ್ ನಾಯ್ಕ ಅವರಿಗೆ ಕರೆ ಮಾಡಿದ್ದಾರೆ.

ಕೂಡಲೇ ಪವನ್ ನಾಯ್ಕ ಅವರು ರಾತ್ರಿ 12 ಘಂಟೆಗೆ ಇಲ್ಲಿಗೆ ಬಂದು ಈ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಇದು ಇತ್ತೀಚೆಗೆ ಈ ಭಾಗದಲ್ಲಿ ಪತ್ತೆಯಾದ ಎರಡನೇ ಬಿಳಿ ಬಣ್ಣದ ಹೆಬ್ಬಾವಾಗಿದೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲೇ ಉತ್ತರ ಕನ್ನಡ ಕುಮಟಾದ ಮಿರ್ಜಾನ್ನ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಎಂಬುವವರ ಮನೆಯಲ್ಲಿ 5 ಅಡಿ ಉದ್ದ ಅಪರೂಪದ ಬಿಳಿ ಹೆಬ್ಬಾವು ಕಾಣಿಸಿದ್ದು ಅದನ್ನೂ ಸಹ ರಾತ್ರಿ ವೇಳೆಯಲ್ಲೇ ಪವನ್ ನಾಯ್ಕರು ರಕ್ಷಣೆ ಮಾಡಿದ್ದರು. ಬಿಳಿ ಹೆಬ್ಬಾವು ಕಂಡುಬಂದ ಸುದ್ದಿ ಆ ಸಂದರ್ಭದಲ್ಲಿ ರಾಷ್ಟ್ರ ಮಟ್ಟದಲ್ಲಿ ವೈರಲ್ ಸುದ್ದಿಯಾಗಿತ್ತು.

ಇದೀಗ ಸಿಕ್ಕಿರುವ ಬಿಳಿ ಹೆಬ್ಬಾವು ಸುಮಾರು 15 ಅಡಿ ಉದ್ದವಿದ್ದು ಇದು ಈ ಭಾಗದ ಜನರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಸುದ್ದಿ ತಿಳಿದು ರಾತ್ರಿ ಸಮಯದಲ್ಲೂ ನೂರಾರು ಸ್ಥಳೀಯರು ಹೆಬ್ಬಾವಿನ ವೀಕ್ಷಣೆಗೆಂದು ಬಂದಿದ್ದರು.

ಇಂತಹ ಬಿಳಿ ಬಣ್ಣದ ಹೆಬ್ಬಾವು ಕರ್ನಾಟಕದಲ್ಲೇ ನಾಲ್ಕನೇ ಬಾರಿ ರಕ್ಷಣೆಯಾಗಿದ್ದು, 2 ಬಾರಿ ಬೆಳ್ತಂಗಡಿಯಲ್ಲಿ ಹಾಗೂ 2 ಭಾರಿ ಕುಮಟಾದಲ್ಲಿ ಸಿಕ್ಕಿರುವುದು ವಿಶೇಷವಾಗಿರುತ್ತದೆ. ಮಾತ್ರವಲ್ಲದೇ, ಭಾರತದಲ್ಲೇ ಅತೀ ದೊಡ್ಡ ಬಿಳಿ ಹೆಬ್ಬಾವಿನ ರಕ್ಷಣೆಯ ಕೀರ್ತಿಯೂ ಪವನ್ ನಾಯ್ಕ ಅವರಿಗೆ ಸಂದಂತಾಗಿದೆ.

ಮೆಲಿನಿನ್ ಕೊರತೆಯಿಂದ ಬಿಳಿ ಬಣ್ಣ ಪಡೆಯುವ ಹೆಬ್ಬಾವು..!

‘ಸಾಮಾನ್ಯ ಹೆಬ್ಬಾವಿಗೆ ಹಾಗೂ ಬಿಳಿ ಹೆಬ್ಬಾವಿಗೆ ವ್ಯತ್ಯಾಸ ಇರುವುದಿಲ್ಲ. ಆದರೆ, ದೇಹದಲ್ಲಿ ಮೆಲಿನಿನ್ ಕೊರತೆಯಿಂದ ಹೆಬ್ಬಾವು ಜೈವಿಕವಾಗಿ ಬಿಳಿ ಬಣ್ಣ ಪಡೆಯುತ್ತದೆ. ಇದು ದೇಶದಲ್ಲೇ ಅತಿ ದೊಡ್ಡ ಬಿಳಿ ಹೆಬ್ಬಾವು ಆಗಿರುವ ಸಾಧ್ಯತೆ ಇದೆ. ಹೆಬ್ಬಾವಿನ ಮೇಲೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮೈಸೂರು ಪ್ರಾಣಿ ಸಂಗ್ರಹಾಲಯಕ್ಕೆ ಕಳುಹಿಸಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ ತಿಳಿಸಿದ್ದಾರೆ.

ಡಿ.ಎಫ್.ಓ. ರವಿಶಂಕರ್, ಎ.ಸಿ.ಎಫ್.ಒ ಜಿ ಲೋಹಿತ್, ಆರ್.ಎಪ್.ಓ. ಎಸ್ ಟಿ ಪಟಗಾರ್, ಡಿ.ಆರ್.ಎಫ್.ಓ. ಹೂವಣ್ಣ ಗೌಡ ಮೊದಲಾದವರು ಬಿಳಿ ಹೆಬ್ಬಾವು ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಸ್ಥಳದಲ್ಲಿದ್ದರು.

ಈ ಅಪರೂಪದ ಬಿಳಿ ಹೆಬ್ಬಾವಿನ ಫೊಟೋಗಳನ್ನು ಈ ಭಾಗದ ಖ್ಯಾತ ಛಾಯಾಗ್ರಾಹಕರಾದ ಗೋಪಿ ಜೊಲಿ ತಮ್ಮ ಕೆಮರಾದಲ್ಲಿ ಸೆರೆಹಿಡಿದಿದ್ದಾರೆ.

Tags: KumataUttara KannadaWhite Snakeಉತ್ತರ ಕನ್ನಡಕುಮಟಾಬಳಿ ಹಾವು
Previous Post

Breaking: ನನ್ನ ಹೆಣವೂ ಬಿಜೆಪಿಗೆ ‌ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಸಿಎಂ ಸಿದ್ದರಾಮಯ್ಯ

ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada