• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..

ಯಾವುದೇ ಸೆನ್ಸಾರ್ ಇಲ್ಲದೆ, ಶಾಲಾ ವಿದ್ಯಾರ್ಥಿನಿಯರನ್ನು, ಹರೆಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲ, ಅಸಭ್ಯ ಶೀರ್ಷಿಕೆ ಮತ್ತು ಗೀತೆಗಳನ್ನು ರಚಿಸುತ್ತಿದ್ದಾರೆ ಎಂದು ದೂರು ನೀಡಿದ್ದ ಮೋಹನ್‌ ಕುಮಾರ್‌ ದಾನಪ್ಪ..

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಕಾನೂನು ಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಮಹಿಳೆಯರ, ಮಕ್ಕಳ ಗೌರವಕ್ಕೆ ಹಾಗೂ ನಾಡಿನ ಸಂಸ್ಕೃತಿಗೆ ಧಕ್ಕೆ ಉಂಟು ಮಾಡುವ ಚಟುವಟಿಕೆಗಳು ನಡೆಯುತ್ತಿವೆ. ಈ ರೀತಿಯಾಗಿ ಅಸಭ್ಯ ಗೀತೆಗಳ ರಚನೆಕಾರರು ಹಾಗೂ ಗಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನೀರೀಕ್ಷಕರಿಗೆ ಪತ್ರ ಬರೆದು ಆಗ್ರಹಿಸಿದ್ದರು.

ADVERTISEMENT
HD Kumaraswamy : ನಿಮ್ಗೆ ಕಾರ್ಖಾನೆ ಬೇಕು ಅಂದ್ರೆ ಪ್ರಮಾಣಿಕವಾಗಿ ನಡೆದುಕೊಳ್ಳಿ  #pratidhvani

ಆದರೆ ಇದೀಗ ಈ ಮನವಿ ಪತ್ರದಲ್ಲಿನ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಇಂತಹ ಪ್ರಕರಣಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ, ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಹಾಗೂ ಹೆಚ್ಚಿನದ್ದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೆಲವು ವ್ಯಕ್ತಿಗಳು ಕನ್ನಡ ಭಾಷೆ, ಶಬ್ದಗಳನ್ನು ಕೆಟ್ಟದಾಗಿ ಬಳಸುತ್ತಿದ್ದರು. ಕಾನೂನು ಬಾಹಿರವಾಗಿ ಯಾವುದೇ ಸೆನ್ಸಾರ್ ಇಲ್ಲದೆ, ಶಾಲಾ ವಿದ್ಯಾರ್ಥಿನಿಯರನ್ನು, ಹರೆಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲ, ಅಸಭ್ಯ ಶೀರ್ಷಿಕೆ ಮತ್ತು ಗೀತೆಗಳನ್ನು ರಚಿಸುತ್ತಿದ್ದಾರೆ.

ಅವುಗಳಲ್ಲಿ ಧ್ವಂದಾರ್ಥ ಸಂಭಾಷಣೆಗಳನ್ನು ರಚಿಸಿ ರಸ ಮಂಜರಿ ಕಾರ್ಯಕ್ರಮಗಳ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಜಾತ್ರೆ, ಉತ್ಸವ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ ಹಾಗೂ ಟಿವಿ ಮಾಧ್ಯಮಗಳಲ್ಲಿ ರಿಯಾಲಿಟಿ ಶೋ ಕಾರ್ಯಕ್ರಮಗಳಲ್ಲಿ ಅಶ್ಲೀಲತೆ ಪ್ರದರ್ಶಿಸಿ ಮಹಿಳೆಯರ ಮತ್ತು ಮಕ್ಕಳ ಘನತೆ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿದ್ದಾರೆ.

ಮಹಿಳೆಯರ ತೇಜೋವಧೆ ಮಾಡುವುದು, ಯುವಜನತೆಯ ದಾರಿ ತಪ್ಪಿಸುತ್ತಾ, ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕಲಿಕೆಯ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿರುತ್ತಾರೆ, ಜಾನಪದ ಹೆಸರಿನಲ್ಲಿ ತಾಯಿ ಭಾಷೆಯನ್ನ ಅಶ್ಲೀಲಗೊಳಿಸಿ ರಚಿಸಿದ ಗೀತೆಗಳನ್ನು ಟ್ರ್ಯಾಕ್ಟ‌ರ್ ಹಾಗೂ ಇತರೆ ವಾಹನಗಳಲ್ಲಿ ಅಕ್ರಮವಾಗಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಹಾಕುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮುಜುಗರ ಉಂಟು ಮಾಡಲಾಗುತ್ತಿದೆ.

ಇದನ್ನೂ ಓದಿ : ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಈ ಮೂಲಕ ಕನ್ನಡ ಭಾಷೆಯನ್ನು ಕನ್ನಡ ಸಂಸ್ಕೃತಿಯನ್ನು ಅವಮಾನಿಸಿದಂತಾಗುತ್ತಿರುತ್ತದೆ, ಇಂತಹ ಅಶ್ಲೀಲ ಭಾಷೆಗಳಿಂದ ಯುವಕರು ಪ್ರೇರಣೆಗೊಂಡು ಮಹಿಳೆಯರನ್ನು ಕೆಟ್ಟ ದೃಷ್ಟಿಯಿಂದ ನೋಡುವುದು. ಅತ್ಯಾಚಾರದಂತಹ ಅಪರಾಧಗಳಿಗೆ ಪ್ರಚೋದನೆ ನೀಡಿದಂತಾಗುತ್ತಿದೆ.

ರಾಜ್ಯದ ಯುವಜನತೆಯನ್ನು ದಿಕ್ಕು ತಪ್ಪಿಸಿ, ಸಾಮಾಜಿಕ ಸ್ವಾಸ್ಥ್ಯ, ಕನ್ನಡನಾಡು, ನುಡಿ ಭಾಷೆ, ಸಂಸ್ಕೃತಿಯನ್ನು ಹಾಳು ಮಾಡುತ್ತಿರುವ ಹಾಗೂ ಅಶ್ಲೀಲ ಗೀತೆಗಳನ್ನು ರಚಿಸುವ ವ್ಯಕ್ತಿಗಳ ವಿರುದ್ಧ ಬಿ.ಎನ್.ಎಸ್ ಕಾಯ್ದೆಯ ಸೆಕ್ಷನ್ 296 ರಡಿಯಲ್ಲಿ ಹಾಗೂ ಐಟಿ ಕಾಯ್ದೆ-2000 ಸೇರಿದಂತೆ ವಿವಿಧ ಕಾನೂನಿಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವಿಡಿಯೋಗಳನ್ನು ಅಳಿಸಿ ನಾಡಿನ ಸಂಸ್ಕೃತಿ, ಭಾಷೆಯನ್ನು ಹಾಗೂ ಮಹಿಳೆಯರ ಮತ್ತು ಮಕ್ಕಳ ಗೌರವ, ಅವರ ಹಕ್ಕುಗಳನ್ನು ರಕ್ಷಿಸುವಂತೆ ಬಿ.ಎನ್.ಎಸ್. 296 ರಡಿಯಲ್ಲಿ ಆಯಾ ಠಾಣೆ ವ್ಯಾಪ್ತಿಯಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮೋಹನ್‌ ಕುಮಾರ್‌ ದಾನಪ್ಪ ಬರೆದ ಪತ್ರದಲ್ಲಿ ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ರಾಜ್ಯದ ಡಿಜಿ ಮತ್ತು ಐಜಿಪಿರವರಿಗೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರ ಬರೆದಿದ್ದರು.

ಈ ಪ್ರತದಲ್ಲಿನ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಹಾಗೂ ಐಜಿಪಿ ಸುತ್ತೋಲೆ ಹೊರಡಿಸುವ ಮೂಲಕ ಜಾನಪದದ ಹೆಸರಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಭಾಷೆಯನ್ನು ಅವಹೇಳನ ಮಾಡುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Tags: BNSDGP M A SalimGovernment of Karnatakakannada folk songskannada janapada songsKarnataka PoliceKarnataka PoliceStationslegal actionMohan Kumar DanappaPolice Complaint Authority memberPratidhvaniSchool Childernssinging obsceneUttarakarnatak Newsvulgar songs
Previous Post

ಖಮೇನಿ ಹತ್ಯೆ ಖಂಡಿಸಿದ ಭಾರತ : ಇರಾನ್‌ ರಾಯಬಾರಿ ಕಚೇರಿ ಬುಕ್‌ನಲ್ಲಿ ವಿಕ್ರಂ ಮಿಸ್ರಿ ಬರೆದಿದ್ದೇನು..?

Next Post

ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

Related Posts

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?
Top Story

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

by ಪ್ರತಿಧ್ವನಿ
April 19, 2026
0

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ, ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
Next Post
ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada