ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ 16 ಸದಸ್ಯರ ಚುನಾವಣಾ ಸಮಿತಿ ರಚಿಸಿದ್ದು, ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷರ ಹೊರತಾಗಿ ಇಂಧನ ಸಚಿವ ಹಾಗೂ ಸರ್ವಜ್ಞನಗರ ಶಾಸಕ ಕೆಜೆ ಜಾರ್ಜ್ ಅವರಿಗೆ ಅವಕಾಶ ಕಲ್ಪಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ಸೇರಿದಂತೆ ಒಟ್ಟು 16 ಮಂದಿಯನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಅಂಬಿಕಾ ಸೋನಿ, ಅಧೀರ್ ರಂಜನ್ ಚೌಧರಿ, ಸಲ್ಮಾನ್ ಖುರ್ಷಿದ್, ಮಧುಸೂಧನ್ ಮಿಸ್ತ್ರಿ, ಎನ್.ಉತ್ತಮ್ ಕುಮಾರ್ ರೆಡ್ಡಿ, ಟಿ.ಎಸ್. ಸಿಂಗ್ ದೇವ್, ಪ್ರೀತಮ್ ಸಿಂಗ್, ಮಹಮ್ಮದ್ ಜಾವೇದ್, ಆಮಿ ಯಾಜ್ನಿಕ್, ಪಿ.ಎಲ್. ಪೂನಿಯಾ ಮತ್ತು ಓಂಕಾರ್ ಮಾರ್ಕಮ್ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
