• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 25, 2026
in Top Story
0
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಐಐಐಟಿ ಕ್ಯಾಂಪಸ್‌ನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ADVERTISEMENT

ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ ಆಯೋಜಿಸಿದ್ದ ‘ತಯಾರಿಕೆಗಾಗಿ ಕೃತಕ ಬುದ್ಧಿಮತ್ತೆ: ನಾಳಿನ ಕರ್ನಾಟಕದ ನಿರ್ಮಾಣ’ ಸಮಾವೇಶದಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯದಲ್ಲಿ ಎಐ ಆಧಾರಿತ ಕೈಗಾರಿಕೆಗಳು ಮತ್ತು ತಯಾರಿಕಾ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.

ಅಮೆರಿಕದ ಕಂಪನಿಗಳು ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಯಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಮುಂದಿನ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲೂ ಅಮೆರಿಕದ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಡೇಟಾ ಸೆಂಟರ್‌ಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊಸ ನೀತಿ ಜಾರಿಗೆ ತರಲಿದೆ. ಬೆಂಗಳೂರು ಉತ್ತರ, ಮಂಗಳೂರು ಹಾಗೂ ಎರಡನೇ ಹಂತದ ನಗರಗಳಲ್ಲಿ ತಲಾ 1 ಗಿಗಾವ್ಯಾಟ್ ಸಾಮರ್ಥ್ಯದ ಡೇಟಾ ಸೆಂಟರ್‌ಗಳನ್ನು ಸ್ಥಾಪಿಸುವ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

Siddaramaiah : ಮೀಸಲಾತಿ ಹೋರಾಟ ನಿರಂತರವಾಗಿರಬೇಕು..! #internalreservation #karnataka #pratidinnews

ಅಭಿವೃದ್ಧಿಪಡಿಸಲಾಗುತ್ತಿರುವ ಕ್ವಿನ್ ಸಿಟಿಯಲ್ಲಿ ಭಾರತದ ಮೊದಲ ಎಐ ಸಿಟಿಯನ್ನೂ ಸ್ಥಾಪಿಸುವ ಯೋಜನೆ ಇದೆ. ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ಚಿಪ್ ವಿನ್ಯಾಸಗಾರರು ಕಾರ್ಯನಿರ್ವಹಿಸುತ್ತಿದ್ದಾರೆ. ‘ನಿಪುಣ ಕರ್ನಾಟಕ’ ಯೋಜನೆಯಡಿ 100ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಕೈಗಾರಿಕೆಗಳು ದತ್ತು ಪಡೆಯುತ್ತಿವೆ. ವಿಶ್ವಬ್ಯಾಂಕ್ ನೆರವಿನಿಂದ 30ಕ್ಕೂ ಹೆಚ್ಚು ಐಟಿಐಗಳನ್ನು ಉತ್ಕೃಷ್ಟತಾ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪಾಟೀಲ ಹೇಳಿದರು.

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ ದೊರೆಯಲಿರುವ ₹2,500 ಕೋಟಿ ಅನುದಾನವನ್ನು ಬಳಸಿಕೊಂಡು ಉನ್ನತ ಶಿಕ್ಷಣ ಕ್ಷೇತ್ರವನ್ನು ಆಧುನೀಕರಿಸಲಾಗುತ್ತಿದೆ ಎಂದರು.

Siddaramaiah : ಮುಂದಿನ‌ ಎಲೆಕ್ಷನ್‌ಗೆ ನಿಲ್ಲಲ್ಲ ಕಣಯ್ಯಾ..! #siddaramaiah #bengaluru #karnataka

ಬೋಯಿಂಗ್, ಜಿಇ ಏರೋಸ್ಪೇಸ್, ಹನಿವೆಲ್, ಅಪ್ಲೈಡ್ ಮೆಟೀರಿಯಲ್ಸ್ ಮತ್ತು ಟಿಮ್ಕೆನ್‌ನಂತಹ ಜಾಗತಿಕ ಕಂಪನಿಗಳು ಈಗಾಗಲೇ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಮೂಲಕ ಭವಿಷ್ಯದ ಪ್ರೊಪಲ್ಶನ್ ತಂತ್ರಜ್ಞಾನ, ಎಐ ಎಂಜಿನ್ ಡಯಾಗ್ನಾಸ್ಟಿಕ್ಸ್, ಕೈಗಾರಿಕಾ ಐಒಟಿ, ಪ್ರಿಸಿಷನ್ ಎಂಜಿನಿಯರಿಂಗ್ ಹಾಗೂ ಜಾಗತಿಕ ಸೆಮಿಕಂಡಕ್ಟರ್ ಪೂರೈಕೆ ಸರಪಳಿ ಕ್ಷೇತ್ರಗಳಲ್ಲಿ ಗಮನಾರ್ಹ ಬೆಳವಣಿಗೆ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ, ಬಯೋಟೆಕ್, ಮಷಿನ್ ಟೂಲ್ಸ್ ಹಾಗೂ ಎಲೆಕ್ಟ್ರಾನಿಕ್ ವಿನ್ಯಾಸ ಕ್ಷೇತ್ರಗಳಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ಡೀಪ್ ಎಐ ತಂತ್ರಜ್ಞಾನದ ವ್ಯಾಪಕ ಅಳವಡಿಕೆಯಿಂದ ರಾಜ್ಯದ ಕೈಗಾರಿಕಾ ಕ್ಷೇತ್ರ ಮುಂದಿನ ವರ್ಷಗಳಲ್ಲಿ ಮತ್ತಷ್ಟು ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Siddaramaiah : ಒಳ ಮೀಸಲಾತಿ ವಿಚಾರದಲ್ಲಿ ಯಾವತ್ತು ರಾಜಿ ಆಗಲ್ಲ ಸಿದ್ದು ಖಡಕ್‌ ಮಾತು..! #internalreservation

ವರ್ಲ್ಡ್ ಎಕನಾಮಿಕ್ ಫೋರಂ ವರದಿ ಪ್ರಕಾರ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಕಾರ್ಮಿಕಶಕ್ತಿಯ ಉತ್ಪಾದಕತೆ ಶೇ.53ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕವು ಈ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕೈಗಾರಿಕಾ ಬೆಳವಣಿಗೆಗೆ ಹೊಸ ವೇಗ ನೀಡಲಿದೆ ಎಂದು ಎಂ.ಬಿ. ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಅಮ್ಚಮ್) ಸಂಘಟನೆಯ ರಂಜನಾ ಖನ್ನಾ, ಸಲೀಲ್ ಗುಪ್ತೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags: aerospaceAI CityAI Excellence CentreAI InnovationAI Karnatakaartificial intelligencebengalurubiotechnologyChip DesignData CentresDefence ManufacturingDigital InfrastructureElectronic DesignGreen TechnologyIndustrial GrowthKarnataka GovernmentKarnataka IndustriesKarnataka Investmentkarnataka newsMachine ToolsMB PatilNipun KarnatakaQuantum CityRaichurRaichur IIITsemiconductorTechnology News
Previous Post

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

Next Post

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

August 25, 2026
Next Post
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada