ವಕೀಲರಾಗಿ ನೋಂದಣಿಯಾದ ಕಾನೂನು ಪದವೀಧರರು ಅಖಿಲ ಭಾರತ ವಕೀಲರ ಪರೀಕ್ಷೆ(ಎಐಬಿಇ) ಪಾಸಾಗದೆ ವಕೀಲಿಕೆ ನಡೆಸುವಂತಿಲ್ಲ ಎಂದು ಹೇಳಿದೆ.
ಹೌದು, ಈ ಕುರಿತಂತೆ ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಪತ್ರ ಬರೆದಿರುವ ಎಐಬಿಇ, ನೋಂದಣಿಯಾದ ವಕೀಲರು ಎಐಬಿಇ ಪಾಸಾಗದೇ ವಕೀಲಿಕೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ವಕೀಲರ ಪರಿಷತ್ ಎಚ್ಚರಿಸಿದೆ.
ಯಾರು ಎಐಬಿಇ ಪರೀಕ್ಷೆ ಪಾಸಾಗಿಲ್ಲವೋ ಅಂಥವರು ಕೋರ್ಟ್ ಕಲಾಪದಲ್ಲಿ ವಕೀಲರ ಉಡುಪು ಬರುವಂತಿಲ್ಲ. ಈ ರೀತಿ ವಕೀಲಿಕೆ ನಡೆಸುತ್ತಿದ್ದ ಯಲಬುರ್ಗಾದ ವಕೀಲ ಆನಂದ ಎ.ಉಳ್ಳಾಗಡ್ಡಿ ಅವರ ಸನ್ನದನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಐಬಿಇ ಪರೀಕ್ಷಾ ಫಲಿತಾಂಶದಲ್ಲಿ ಪಾಸಾಗದ ಅಥವಾ ವೃತ್ತಿ ಪ್ರಮಾಣ ಪತ್ರ ಹೊಂದಿರದ ವಕೀಲರಿಗೆ, ವಕೀಲರ ಸಂಘಗಳು ಸದಸ್ಯತ್ವ ನೀಡಬೇಕು. ಆದರೆ ಮತದಾನದ ಹಕ್ಕು ನೀಡಬಾರದು ಎಂದು ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಮನವಿ ಮಾಡಿದ್ದಾರೆ.
2010ರ ಜುಲೈ 14 ರವರೆಗೆ ಅಥವಾ ನಂತರದಲ್ಲಿ, ಕಾನೂನು ಪದವಿ ಪಡೆದವರು ಎರಡು ವರ್ಷಗಳ ತನಕ ಕೋಟು ಧರಿಸಿ ಕೋರ್ಟ್ಗೆ ಬರಬಹುದು. ಆದರೆ, ವಕಾಲತ್ತಿಗೆ ಸಹಿ ಹಾಕುವಂತಿಲ್ಲ. ಒಂದು ವೇಳೆ ಎರಡು ವರ್ಷಗಳ ಒಳಗೆ ಎಐಬಿಇ ಪರೀಕ್ಷೆ ಪಾಸು ಮಾಡದೇ ಹೋದರೆ ಅಂಥವರು ವಕೀಲರ ಉಡುಪಿನಲ್ಲಿ ಬಂದು ವಕೀಲಿಕೆ ನಡೆಸಲು ಅವಕಾಶವಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಯಾರಾದರೂ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ನೋಂದಣಿಯನ್ನು ವಕೀಲರ ಕಾಯ್ದೆ ಮತ್ತು ಸಿಒಪಿ ನಿಯಮಗಳ ಪ್ರಕಾರ ಅಮಾನತುಗೊಳಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

