• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʻಅನೈತಿಕ ಪೊಲೀಸ್‌ʼಗಿರಿಗೆ ಸಮಜಾಯಿಷಿ: ಸಿಎಂ ಬೊಮ್ಮಾಯಿಗೆ ನೋಟಿಸ್‌

Any Mind by Any Mind
October 18, 2021
in ಕರ್ನಾಟಕ
0
ʻಅನೈತಿಕ ಪೊಲೀಸ್‌ʼಗಿರಿಗೆ ಸಮಜಾಯಿಷಿ: ಸಿಎಂ ಬೊಮ್ಮಾಯಿಗೆ ನೋಟಿಸ್‌
Share on WhatsAppShare on FacebookShare on Telegram

ಧಾರ್ಮಿಕ ಮೂಲಭೂತವಾದಿ ಗುಂಪುಗಳು ನಡೆಸುವ ಅನೈತಿಕ ಪೊಲೀಸ್‌ಗಿರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ವಿವಾದಾತ್ಮಕ ಸಮರ್ಥನೆಯನ್ನು ಹಿಂಪಡೆಯಬೇಕೆಂದು ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾರ್ ಜಸ್ಟೀಸ್ (All India Lawyers’ Association for Justice – AILAJ) ನೋಟಿಸ್ ಕಳುಹಿಸಿದೆ.

ADVERTISEMENT

ಮುಖ್ಯಮಂತ್ರಿಗೆ ಕಳಿಸಿರುವ 10 ಪುಟಗಳ ನೋಟಿಸ್‌ನಲ್ಲಿ, ಕರ್ನಾಟಕದಲ್ಲಿ ಕೋಮುಭಾವನೆ ಬೆಳೆಯುತ್ತಿರುವುದನ್ನು ಉಲ್ಲೇಖಿಸಿರುವ AILAJ, ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಸಿಎಂ ಹೇಳಿಕೆ ಅನುಮೋದನೆ ನೀಡಿದಂತಾಗುತ್ತದೆ ಎಂದು ಹೇಳಿದೆ.

https://twitter.com/AilajHq/status/1449747035079397376

ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮೆಡಿಕಲ್‌ ವಿದ್ಯಾರ್ಥಿಗಳ ಮೇಲೆ ನಡೆಸಿರುವ ಗೂಂಡಾಗಿರಿಗೆ ಸಂಬಂಧಪಟ್ಟಂತೆ ಬೊಮ್ಮಾಯಿ ಅವರನ್ನು ಪ್ರಶ್ನಿಸಿದಾಗ, ಭಾವನಾತ್ಮಕ ವಿಷಯದಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ ಎಂದು ಸಮಜಾಯಿಷಿ ನೀಡಿದ್ದರು.

ಸಮಾಜ ಅಂದ ಮೇಲೆ ಎಲ್ಲರಿಗೂ ಜವಾಬ್ದಾರಿಯಿರುತ್ತದೆ. ಭಾವನಾತ್ಮಕ ವಿಷಯಗಳಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ. ಕಾನೂನು ಸುವ್ಯವಸ್ಥೆ ಮಾತ್ರವಲ್ಲದೆ, ಸಮುದಾಯದೊಳಗಿನ ಸಾಮರಸ್ಯವನ್ನು ಕಾಪಾಡುವುದು ಕೂಡಾ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. . ನಮ್ಮ ಯುವಕರು ಕೂಡ ಸಮಾಜದ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಇದು ಸಾಮಾಜಿಕ ಸಮಸ್ಯೆ ಮತ್ತು ನಮಗೆ ನೈತಿಕತೆ ಬೇಕು. ಸಮಾಜದಲ್ಲಿ ನೈತಿಕತೆ ಇಲ್ಲದಿದ್ದಾಗ ಅದಕ್ಕೆ ತಕ್ಕಂತೆ ಪ್ರತಿಕ್ರಿಯೆಗಳು ಬರುತ್ತವೆ ಎಂದು ಹೇಳಿದ್ದರು.

1/3 AILAJ has sent @CMofKarnataka Shri Bommai a notice to withdraw statements made in violation of oath justifying moral policing. These statements are shocking, coming in the backdrop of an alarming increase in communal violence and are in violation of his constitutional oath. pic.twitter.com/kaMJab0MQP

— AILAJ_HQ (@AilajHq) October 17, 2021


ಬಜರಂಗದಳ ಕಾರ್ಯಕರ್ತರು ಮಾಡಿದ್ದನ್ನು ಅವರ ಭಾವನೆಗಳಿಗೆ ಧಕ್ಕೆ ಆದಾಗ ನೀಡಿದ ಪ್ರತಿಕ್ರಿಯೆ, ಅದು ಸಹಜವೆಂಬಂತೆ ಬಿಂಬಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಭಾರತದಾದ್ಯಂತದ ವಕೀಲರನ್ನು, ಕಾನೂನು ತಜ್ಞರನ್ನು ಹೊಂದಿರುವ AILAJ ಸಂಸ್ಥೆ ಕೂಡಾ ಸಿಎಂ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದರಲ್ಲೂ ರಾಜ್ಯದಲ್ಲಿ ಕೋಮು ಭಾವನೆಗಳು ಸೂಕ್ಷ್ಮಗೊಳ್ಳುತ್ತಿರುವ ಈ ಸಂಧರ್ಭದಲ್ಲಿ ಸಿಎಂ ಅವರ ಈ ಹೇಳಿಕೆಯು ಅಪಾಯಕಾರಿ. ಕ್ರಿಯೆಗೆ ಪ್ರತಿಕ್ರಿಯೆಯನ್ನು ಸರಿದೂಗಿಸಲು ನಾಡಿನ ನಾಗರಿಕರು ತಮ್ಮ ಮೂಲಭೂತ ಹಕ್ಕುಗಳನ್ನೇ ಕಳೆದುಕೊಳ್ಳಬೇಕಾದೀತು ಎಂದು ಅದು ಆತಂಕ ವ್ಯಕ್ತಪಡಿಸಿದೆ.


ಇತ್ತೀಚೆಗೆ ಬೆಳಗಾಂನಲ್ಲಿ ಹಿಂದೂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಕೊಲೆಯಾದ ಅರ್ಬಾಝ್‌ ಅಫ್ತಾಬ್‌ ಪ್ರಕರಣವನ್ನೂ AILAJ ಉಲ್ಲೇಖಿಸಿದೆ.
ಧಾರ್ಮಿಕ ಕಾರಣಗಳಿಗಾಗಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಯುತ್ತಿರುವಾಗ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ಕಾನೂನು ಬಾಹಿರ ಕೃತ್ಯಗಳಿಗೆ ಉತ್ತೇಜನ ನೀಡಿದಂತಾಗುತ್ತದೆ ಮಾತ್ರವಲ್ಲ, ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವಂತಾಗುತ್ತದೆ ಎಂದು ಅದು ಅಭಿಪ್ರಾಯಪಟ್ಟಿದೆ.


ರಾಜ್ಯದಲ್ಲಿ ಧಾರ್ಮಿಕ ಉಗ್ರಗಾಮಿ ಗುಂಪುಗಳಿಂದ ಹಿಂಸೆ ನಿರಂತರವಾಗಿ ಹೆಚ್ಚುತ್ತಿದೆ. ಈ ಸಂಘಟನೆಗಳು ಸಾಮಾಜಿಕ ಪ್ರತ್ಯೇಕತೆಯನ್ನು ಪರಿಣಾಮಕಾರಿಯಾಗಿ ಹೇರುತ್ತಿವೆ, ಇದು ಭ್ರಾತೃತ್ವ ಮತ್ತು ಜಾತ್ಯತೀತತೆಯ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು AILAJ ಹೇಳಿದೆ.

Tags: Basavaraj BommaiBJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಳೆಯ ಅಬ್ಬರಕ್ಕೆ ಕಣ್ಣೀರಾದ ದೇವರನಾಡು!

Next Post

ಹಾನಗಲ್:ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ನಡೆದ ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್‌ ಮಾತು

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಹಾನಗಲ್:ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ನಡೆದ ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್‌ ಮಾತು

ಹಾನಗಲ್:ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ನಡೆದ ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್‌ ಮಾತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada