• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ : ಮುಂದಿನ ಆದೇಶದವರೆಗೂ ಎಲ್ಲಾ ಶಾಲೆಗಳು ಬಂದ್!

ಪ್ರತಿಧ್ವನಿ by ಪ್ರತಿಧ್ವನಿ
November 21, 2021
in ದೇಶ
0
ದೆಹಲಿಯಲ್ಲಿ ಹೆಚ್ಚುತ್ತಿರುವ  ವಾಯುಮಾಲಿನ್ಯ : ಮುಂದಿನ ಆದೇಶದವರೆಗೂ ಎಲ್ಲಾ ಶಾಲೆಗಳು ಬಂದ್!
Share on WhatsAppShare on FacebookShare on Telegram

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಯಾವುದೇ ಯೋಚನೆ ಇಲ್ಲ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ADVERTISEMENT

ನಗರದಲ್ಲಿ ಕೆಟ್ಟ ವಾಯು ಮಾಲಿನ್ಯದಿಂದಾಗಿ ಮುಂದಿನ ಆದೇಶದವರೆಗೆ ರಾಷ್ಟ್ರ ರಾಜಧಾನಿಯ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ದೆಹಲಿ ಸರ್ಕಾರ ಭಾನುವಾರ ಹೇಳಿಕೆ ನೀಡಿದ್ದು, ಆನ್ಲೈನ್ ತರಗತಿಗಳು ಮಾತ್ರ ಮುಂದುವರಿಯಲಿವೆ ಎಂದು ಶಿಕ್ಷಣ ನಿರ್ದೇಶನಾಲಯ ಆದೇಶದಲ್ಲಿ ತಿಳಿಸಿದೆ.

ಕಳೆದ ನವೆಂಬರ್ 13 ರಂದು, ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ದೆಹಲಿ ಸರ್ಕಾರವು ಶಾಲೆಗಳನ್ನು ಮುಚ್ಚಿತ್ತು. ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಯ ಆಯೋಗದ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಂಡಿದೆ.

ಭಾನುವಾರದಂದು ನಡೆದ ಸಭೆಯಲ್ಲಿ ದೆಹಲಿ ಸರ್ಕಾರದ ಶಿಕ್ಷಣ ಇಲಾಖೆಯು ಮುಂದಿನ ಸೂಚನೆಯವರೆಗೆ ಶಾಲೆಗಳನ್ನು ತೆರೆಯದಿರಲು ಹೊಸ ಆದೇಶವನ್ನು ಹೊರಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ವರದಿಯ ಪ್ರಕಾರ, ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕವು ಸಂಜೆ 4 ಗಂಟೆಗೆ 352 ರಷ್ಟಿದೆ ಎಂದು ತಿಳಿಸಿದೆ.

ತೀರ ಕಳಪೆ ಮಟ್ಟ ತಲುಪಿದ ದೆಹಲಿ!

ಈ ವಾಯು ಗುಣಮಟ್ಟದ ಸೂಚ್ಯಂಕವು 50 ರ ಒಳಗಿದ್ದರೆ ಉತ್ತಮವಾಗಿದೆ. 51 ರಿಂದ 100ರವರೆಗಿದ್ದರೆ ತೃಪ್ತಿದಾಯಕ. 101 ರಿಂದ 200 ರವರೆಗಿದ್ದರೆ ಮಧ್ಯಮ. 201 ರಿಂದ 300 ರವರೆಗೆ ಕಳಪೆ, 301 ರಿಂದ 400 ರವರೆಗೆ ತೀರ ಕಳಪೆಮಟ್ಟ. 401 ರಿಂದ 500 ರವರೆಗೆ ವಾಯು ಗುಣಮಟ್ಟ ಕಂಡುಬಂದರೆ ವಾಯುಗುಣಮಟ್ಟದಲ್ಲಿ ತೀವ್ರ ತರಹದ ಮಾಲಿನ್ಯವಾಗಿದೆ ಎಂದು ಸಂಶೋಧನೆಯಲ್ಲಿ ತಿಳಿದುಬರುತ್ತದೆ.

ಈ ಮಧ್ಯೆ ಮಾಲಿನ್ಯ ತಡೆಗಟ್ಟಲು ನಗರದಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಪರಿಶೀಲಿಸಲು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದೆಹಲಿಯ ಕೇಂದ್ರ ಸರ್ಕಾರದ ಏರ್ ಕ್ವಾಲಿಟಿ ಅರ್ಲಿ ವಾರ್ನಿಂಗ್ ಸಿಸ್ಟಂ ಹೇಳಿಕೆ ನೀಡಿರುವ ಪ್ರಕಾರ, ದೆಹಲಿಯಲ್ಲಿ ಅತ್ಯಂತ ಕಳಪೆಮಟ್ಟದ ವಾತಾವರಣವಿದ್ದು, ಮುಂದಿನ ವಾರದಲ್ಲಿ ಸುಧಾರಿಸಬಹುದು ಎಂದು ತಿಳಿಸಿದೆ.

ಟ್ರಕ್ಕ್ ಗಳ ಪ್ರವೇಶಕ್ಕೆ ಸಂಪೂರ್ಣ ನಿಷೇಧ!

ಇದಕ್ಕೂ ಮುನ್ನ ದೆಹಲಿಯಲ್ಲಿ ನವೆಂಬರ್ 17 ರಂದು, ಮಾಲಿನ್ಯ ನಿಗ್ರಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ದೆಹಲಿಗೆ ಸರಕುಗಳನ್ನು ತುಂಬಿಕೊಂಡು ಬರುವ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸ ಮಾಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಲಾಗಿದೆ.

Tags: BJPCongress Partyಕೋವಿಡ್-19ದೆಹಲಿನರೇಂದ್ರ ಮೋದಿಬಿಜೆಪಿವಾಯುಮಾಲಿನ್ಯಶಾಲೆಗಳು ಬಂದ್
Previous Post

ಬಾಕಿ ಇರುವ ಬೇಡಿಕೆಗಳ ಕುರಿತು ಮೋದಿಗೆ ಬಹಿರಂಗ ಪತ್ರ : ಹೋರಾಟ ಮುಂದುವರಿಸಲು SKM ನಿರ್ಧಾರ

Next Post

ಆಕೆಯನ್ನು ಜೈಲಿಗೆ ಹಾಕಿ ಇಲ್ಲವೇ ಮಾನಸಿಕ ಆಸ್ಪತ್ರೆಗೆ ಸೇರಿಸಿ : ಕಂಗಾನ ವಿರುದ್ಧ ಸಿಖ್ ಸಮುದಾಯ ಕಿಡಿ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಸ್ವಾತಂತ್ರ್ಯಸಿಕ್ಕಿದ್ದು 1947ರಲ್ಲಿ ಅಲ್ಲ, 2014ರಲ್ಲಿ: ಮತ್ತೊಂದ ವಿವಾದದಲ್ಲಿ ಕಂಗನಾ, ನೆಟ್ಟಿಗರಿಂದ ತರಾಟೆ!

ಆಕೆಯನ್ನು ಜೈಲಿಗೆ ಹಾಕಿ ಇಲ್ಲವೇ ಮಾನಸಿಕ ಆಸ್ಪತ್ರೆಗೆ ಸೇರಿಸಿ : ಕಂಗಾನ ವಿರುದ್ಧ ಸಿಖ್ ಸಮುದಾಯ ಕಿಡಿ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada