• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂಗೀತ ಕ್ಷೇತ್ರದಲ್ಲಿ ಅಜನೀಶ್‌ ಲೋಕನಾಥ್ ಹೊಸ ಹೆಜ್ಜೆ;50 ಚಿತ್ರಗಳಿಗೆ ಸಂಗೀತ ನಿರ್ದೇಶನ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ, ಸಾಲು ಸಾಲು ಹಿಟ್‌ ಹಾಡುಗಳ ಮೂಲಕ ಸಂಗೀತ ಪ್ರಿಯರ ಗಮನ ಸೆಳೆದವರು ಕನ್ನಡದ ಅಜನೀಶ್‌ ಲೋಕನಾಥ್.‌ ಇದೀಗ ಇದೇ ಅಜನೀಶ್‌ ತಮ್ಮ ವೃತ್ತಿ ಜೀವನದ ಪ್ರಮುಖ ಘಟ್ಟ ತಲುಪಿದ್ದಾರೆ. ಚಿತ್ರೋದ್ಯಮಕ್ಕೆ ಬಂದು 21 ವರ್ಷಗಳಾದರೂ, ಸ್ವತಂತ್ರ ನಿರ್ದೇಶಕರಾಗಿ ಚಿತ್ರೋದ್ಯಮದಲ್ಲಿ ಸುದೀರ್ಘ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಇದ್ದಾರೆ. ಇದೀಗ ಇದೇ ಸಂಗೀತ ನಿರ್ದೇಶಕರು ತಮ್ಮ ಕೆರಿಯರ್‌ನಲ್ಲಿ 50 ಸಿನಿಮಾಗಳಿಗೆ ಸಂಗೀತ ನೀಡಿದ ಗುರಿ ತಲುಪಿದ್ದಾರೆ.

ADVERTISEMENT

ಹೀಗಿರುವಾಗಲೇ 2022ರಲ್ಲಿನ ಕಾಂತಾರ ಸಿನಿಮಾ ಅಜನೀಶ್‌ ಲೋಕನಾಥ್‌ ವೃತ್ತಿ ಬದುಕಿನಲ್ಲಿ ದೊಡ್ಡ ಮೈಲಿಗಲ್ಲಾಯಿತು.ಕರ್ನಾಟಕದ ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೆ, ಪರಭಾಷಿಕರೂ ಈ ಸಿನಿಮಾವನ್ನು ಮೆಚ್ಚಿಕೊಂಡರು. ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿಯನ್ನೂ ಈ ಸಿನಿಮಾ ಪಡೆದುಕೊಂಡಿತು. ಇದೀಗ ಕನ್ನಡದ ಮುಂಬರುವ ಮ್ಯಾಕ್ಸ್‌, ಬಘೀರ, UI ಸಿನಿಮಾಗಳಿಗೂ ಅಜನೀಶ್‌ ಸಂಗೀತ ನೀಡಿದ್ದಾರೆ.ಈ ಸುದೀರ್ಘ ಪಯಣದ ಬಗ್ಗೆ ಅಜನೀಶ್‌ ತಮ್ಮ ಮನದಾಳವನ್ನು ಹಂಚಿಕೊಂಡಿದ್ದು ಹೀಗೆ.

ಅಜನೀಶ್‌ ಲೋಕನಾಥ್ ಮನದಾಳ”ಸಿನಿಮಾರಂಗದಲ್ಲಿದ್ದು ಕೆಲಸ ಶುರುಮಾಡಿ 21 ವರ್ಷವಾಯ್ತು. 2003ರಲ್ಲಿ ಕೆಲಸ ಶುರುವಾಯ್ತು ಆರಂಭದಲ್ಲಿ ಕೀ ಬೋರ್ಡ್‌ ಪ್ಲೇಯರ್‌ ಆಗಿದ್ದೆ. ಆಮೇಲೆ 2005ರಿಂದ ಚಿಕ್ಕ ಪುಟ್ಟ ಸಿನಿಮಾಕ್ಕೆ ಮ್ಯೂಸಿಕ್‌ ಮಾಡಿದೆ. ಯಾವುದೂ ರಿಲೀಸ್‌ ಆಗಲಿಲ್ಲ. ಒಳ್ಳೆಯ ಸಿನಿಮಾ ಸಿಗುತ್ತಿರಲಿಲ್ಲ. 2010ರಲ್ಲಿ ಬಂದ ಶಿಶಿರ ಕೈ ಹಿಡಿಯಿತು. ಅದಾದ ಮೇಲೆ ಬಂದ ನನ್ನ ಲೈಫ್‌ನಲ್ಲಿ, ಉಳಿದವರು ಕಂಡಂತೆ ಚಿತ್ರಗಳು ಒಳ್ಳೆಯ ಹೆಸರು ತಂದುಕೊಟ್ಟವು. ಕನ್ನಡ ಮಾತ್ರವಲ್ಲದೆ, ಬೇರೆ ಭಾಷೆಗಳಿಂದಲೂ ಪ್ರಶಂಸೆ ಸಿಕ್ತು. ರಂಗಿತರಂಗ ಚಿತ್ರದಿಂದ ಕಮರ್ಷಿಯಲ್‌ ಸಕ್ಸಸ್‌ ಸಿಕ್ತು. ಕಿರಿಕ್‌ ಪಾರ್ಟಿ ಸಿನಿಮಾದಿಂದ ತೆಲುಗಿನಲ್ಲಿಯೂ ಅವಕಾಶ ಸಿಕ್ಕಿತು. ಹೀಗೆ ಇದೀಗ 50 ಅನ್ನೋ ನಂಬರ್‌ಗೆ ಬಂದಿದ್ದೇನೆ” ಎಂದಿದ್ದಾರೆ.

ವರ್ಷಕ್ಕೆ ಮೂರ್ನಾಲ್ಕು ಸಿನಿಮಾ ಮಾಡಿದ್ದೇನೆ ಎಂದರೂ, ಮೂರು ತಿಂಗಳಿಗೆ ಒಂದು ಸಿನಿಮಾ ಆಗುತ್ತೆ. ಇಲ್ಲಿ ಏನನ್ನು ಕೊಡಬೇಕು, ಹೇಗಿರಬೇಕು ಎಂಬ ಆ ಪ್ರೊಸೆಸ್‌ಗೆ ಹೆಚ್ಚು ಸಮಯ ಬೇಕೇ ಹೊರತು, ಮ್ಯೂಸಿಕ್‌ ಮಾಡಲು ಅಲ್ಲ. ಅದೇ ರೀತಿ ಮ್ಯಾಕ್ಸ್‌ ಸಿನಿಮಾ, UI ಸಿನಿಮಾಗಳನ್ನು ನೋಡಿದ ಮೇಲೆ ಮ್ಯೂಸಿಕ್‌ ಸಖತ್‌ ಸೂಟ್‌ ಆಗಿದೆ. ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಎಲ್ಲ ಅಂಶಗಳನ್ನೂ ಸಂಗೀತದ ಮೂಲಕ ನೀಡಿದ್ದೇನೆ. ನೋಡುಗನಿಗೆ ಒಂದೊಳ್ಳೆ ಟ್ರೀಟ್‌ ಈ ಸಿನಿಮಾಗಳ ಮೂಲಕ ಸಿಗಲಿದೆ.

ಅಪ್ಪ ನನ್ನ ಮೊದಲ ಗುರು, ಕೆ ಕಲ್ಯಾಣ್‌ ಗಾಡ್‌ಫಾದರ್‌

ಸಂಗೀತದ ಮೊದಲ ಗುರು ನನ್ನ ತಂದೆ. ಅವರಿಂದಲೇ ನಾನು ಸಂಗೀತದ ಅ ಆ ಇ ಈ.. ಕಲಿತಿದ್ದು. ಸಿನಿಮಾರಂಗದ ಗಾಡ್‌ಫಾದರ್‌ ಆದವರು ಕೆ ಕಲ್ಯಾಣ್‌. ಮೊದಲಿಗೆ ನಾನು ಬೆಂಗಳೂರಿಗೆ ಬಂದಾಗ, ಸಿನಿಮಾ ಕ್ಷೇತ್ರದ ಅನುಭವ ಹೇಳಿ ಕೊಟ್ಟವರು ಗುರುಗಳಾದ ಕೆ. ಕಲ್ಯಾಣ್‌ ಸರ್.‌ಒಂದು ವರ್ಷ ಅವರ ಮನೆಯಲ್ಲಿಯೇ ಇದ್ದೆ. ಮ್ಯೂಸಿಕ್‌ ಗೊತ್ತಿತ್ತು. ಆದರೆ, ಸಿನಿಮಾ ಮ್ಯೂಸಿಕ್‌ ಹೇಗೆ ವರ್ಕ್‌ ಆಗುತ್ತದೆ ಎಂಬುದು ಗೊತ್ತಿರಲಿಲ್ಲ. ಆ ಅನುಭವ ಸಿಕ್ಕಿದ್ದೇ ಅಲ್ಲಿ. ಅವರೇ ನನ್ನ ಗಾಡ್‌ ಫಾದರ್‌.10 ವರ್ಷ ಸಾಕಷ್ಟು ಕಷ್ಟ ಪಟ್ಟಿದ್ದೆ. ಆದರೆ ನನ್ನ ಸಿನಿಮಾಗಳು ರಿಲೀಸ್‌ ಆಗಿರಲಿಲ್ಲ. ಜತೆಗೆ ಪರಭಾಷೆಯ ಸಿನಿಮಾಗಳಲ್ಲಾದ ಅನುಭವ ನನ್ನನ್ನು ಇಲ್ಲಿಯವರೆಗೂ ಕರೆತಂದಿದೆ”

ಬಾಬಿ ಬ್ಯಾಕ್‌ಬೋನ್‌:”ಕಮರ್ಷಿಯಲ್‌ ವಿಚಾರಕ್ಕೆ ನನ್ನ ಬೆನ್ನೆಲುಬಾಗಿ ನಿಂತವರು ಬಾಬಿ. 2006ರಿಂದಲೇ ಬಾಬಿ ನನ್ನ ಜತೆಗಿದ್ದಾರೆ.ಸಂಗೀತದಲ್ಲಿಯೂ ಸಹಾಯ ಮಾಡುತ್ತ, ನನ್ನ ಜತೆಗೆ ನಿಂತಿದ್ದಾರೆ. ವ್ಯಾವಹಾರಿಕವಾಗಿ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿಯೂ ಅವರೇ ನೋಡಿಕೊಳ್ಳಲಿದ್ದಾರೆ. ನನ್ನ ಈ ಸಕ್ಸಸ್‌ ರೇಷೋವನ್ನೂ ಹೇಗೆ ಕಾಪಾಡಿಕೊಂಡಿಕೊಂಡು ಹೋಗಬೇಕು ಎಂಬುದನ್ನು ಬಾಬಿ ಅವರೇ ನೋಡಿಕೊಳ್ಳುತ್ತಿದ್ದಾರೆ. ಅವರೂ ಒಬ್ಬ ಸಂಗೀತ ನಿರ್ದೇಶಕರಾದರೂ ನನ್ನ ಜತೆಗೆ ನಿಂತಿದ್ದಾರೆ” ಎಂದಿದ್ದಾರೆ ಅಜನೀಶ್‌.

ಚಿತ್ರ ನಿರ್ಮಾಣಕ್ಕೂ ಇಳಿದ ಅಜನೀಶ್‌- ಬಾಬಿ ಜೋಡಿ:ಸಂಗೀತ ಕ್ಷೇತ್ರದಲ್ಲಿ ಮೋಡಿ ಮಾಡಿರುವ ಅಜನೀಶ್‌ ಲೋಕನಾಥ್‌ ಮತ್ತು ಸಿ.ಆರ್‌. ಬಾಬಿ ಇದೀಗ ಸಿನಿಮಾ ನಿರ್ಮಾಣಕ್ಕೂ ಇಳಿದಿದ್ದಾರೆ.Abbs Studios ಬ್ಯಾನರ್‌ ತೆರೆದು, ಅದರ ಅಡಿಯಲ್ಲಿ ಮೊದಲ ಚಿತ್ರವಾಗಿ ಜಸ್ಟ್‌ ಮ್ಯಾರೀಡ್‌ ಸಿನಿಮಾ ನಿರ್ಮಾಣವಾಗುತ್ತಿದೆ. ಈ ಚಿತ್ರದಲ್ಲಿ ಶೈನ್‌ ಶೆಟ್ಟಿ ಮತ್ತು ಅಂಕಿತಾ ಅಮರ್‌ ಜೋಡಿಯಾಗಿ ನಟಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Ajanish Loknath ManadalaFilm
Previous Post

‘ಉದ್ಘಾಟನೆ’ ದಿನವೇ ಜನರಿಂದ ಅಂಗಡಿ ಲೂಟಿ

Next Post

ಮುಡಾ ಕೇಸ್​ನಲ್ಲಿ ಸಿಎಂ ಪಾತ್ರ ಏನು ಹೇಳಿ ನಾವದಗಿಯವರೇ? ವಕೀಲರಿಗೆ ಜಡ್ಜ್​​ ಪ್ರಶ್ನೆ!

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post

ಮುಡಾ ಕೇಸ್​ನಲ್ಲಿ ಸಿಎಂ ಪಾತ್ರ ಏನು ಹೇಳಿ ನಾವದಗಿಯವರೇ? ವಕೀಲರಿಗೆ ಜಡ್ಜ್​​ ಪ್ರಶ್ನೆ!

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada