ಧಾರವಾಡ: ಅಪಾಯ ಅಥವಾ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ಹಾಗೂ ತಕ್ಷಣದ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಜಾರಿಗೆ ತಂದಿರುವ ‘ಅಕ್ಕ ಪಡೆ’ ಯೋಜನೆಯ ರಕ್ಷಣಾ ವಾಹನಕ್ಕೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಚಾಲನೆ ನೀಡಿದರು.

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತವಾಗಿ ಸ್ಪಂದಿಸಿ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಈ ಸೇವೆಯಿಂದ ಅಗತ್ಯವಿರುವವರಿಗೆ ತುರ್ತು ನೆರವು ತಲುಪಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ್, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






