ರಾಜ್ಯದಲ್ಲಿ ಕರೋನ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡಿತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದರೆ ಪರೀಕ್ಷೇಯಲ್ಲಿ ಉತ್ತೀರ್ಣ ಆಗದೇ ಇರಉವ “ರಿಪೀಟರ್ಸ್” ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಈಗ ತಿಳಿಸಿದೆ.
ಈ ಕುರಿತಂತೆ ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ಸಲ್ಲಿಸಿದ್ದು, ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.
ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ರೆಗ್ಯೂಲರ್ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಲು ಇಲಾಖೆ ನಿರ್ಧರಿಸಿತ್ತು. ಈ ನಿರ್ಧಾರವನ್ನು ವಿರೋಧಿಸಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು ಮತ್ತು ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿದ್ದು ಸರ್ಕಾರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಕೂಡ ಪಾಸ್ ಮಾಡುವ ನಿರ್ಧಾರವನ್ನು ಹೈ ಕೋರ್ಟ್ ಗೆ ತಿಳಿಸಿದೆ.