• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ.. ಕುಮಾರಸ್ವಾಮಿ ಬರ್ತಾರಾ..?

Krishna Mani by Krishna Mani
July 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ಶೋಧ
0
ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ.. ಕುಮಾರಸ್ವಾಮಿ ಬರ್ತಾರಾ..?
Share on WhatsAppShare on FacebookShare on Telegram

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತ ಇಂದು ಮಹತ್ವದ ಸರ್ವಪಕ್ಷ‌ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸರ್ವಪಕ್ಷ‌ ಸಭೆ ಕರೆದಿದ್ದಾರೆ ಸಿಎಂ‌ ಸಿದ್ದರಾಮಯ್ಯ.. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಕಾವೇರಿ ಕಣಿವೆಯ ಸಂಸದರು, ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ..

ADVERTISEMENT

ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯು ಪ್ರತಿದಿನ 1 TMC ನೀರು ಬಿಡುಗಡೆಗೆ ಆದೇಶ ಮಾಡಿದೆ. ಆದರೆ‌ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.. ಸದ್ಯಕ್ಕೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಜೂನ್ – ಜುಲೈ ತಿಂಗಳಲ್ಲಿ ಆಗಬೇಕಿದ್ದ ಮಳೆ ಸರಿಯಾಗಿ ಆಗಿಲ್ಲ. ಹೀಗಾಗಿ ಶೇಕಡ 28 ರಷ್ಟು ಮಳೆ ಕೊರತೆ ಎದರಾದ ಕಾರಣ ನೀರು ಬಿಡಲು ಆಗಲ್ಲ ಎಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಜೊತೆಗೆ ಕಾವೇರಿ ‌ನೀರಾವರಿ ನಿಯಂತ್ರಣ ಸಮಿತಿಯ ಶಿಫಾರಸ್ಸು ವಿರುದ್ಧ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನಿಸಿದೆ.

ಕಾವೇರಿ Cauvery ವಿಚಾರದಲ್ಲಿ ರಾಜ್ಯ ಸರ್ಕಾರ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದ್ದು, ರಾಜ್ಯ ಸರ್ಕಾರದ ಜೊತೆ ಕೈ ಜೊಡಿಸಿ ಎಂದು ವಿಪಕ್ಷಗಳಲ್ಲಿ ಮನವಿ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ನೂತನ ಸಂಸದರ ಸಭೆಯಲ್ಲಿ ಕರ್ನಾಟಕಕ್ಕೆ ಕಷ್ಟದ ಸಮಯದಲ್ಲಿ ರಾಜ್ಯದ ಹಿತ ಕಾಪಾಡಲು ಮನವಿ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮನವಿಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗು ಪ್ರಹ್ಲಾದ್‌ ಜೋಷಿ ಬೆಂಬಲಿಸಿದ್ದರು. ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಕೂಡ ರಾಜ್ಯದ ವಿಚಾರದಲ್ಲಿ ಬೆಂಬಲಿಸುವ ಮಾತನಾಡಿದ್ದಾರು. ಇದೀಗ ಕೇಂದ್ರ ಸಚಿವರ ಬೆಂಬಲ ಕೋರಲು ಸಿಎಂ ಮುಂದಾಗಿದ್ದಾರೆ.

ಮುಂಗಾರು ಆರಂಭದಲ್ಲಿ ನೀರಿಕ್ಷಿತ ಪ್ರಮಾಣದಲ್ಲಿ ರಾಜ್ಯಕ್ಕೆ ಮಳೆಯಾಗಿಲ್ಲ. ಮುಂದೆ‌ ಇದೇ ರೀತಿ ಮಳೆ ಕೈ ಕೊಟ್ಟರೆ ಸಮಸ್ಯೆ ಆಗಬಹುದು. ಈಗಿನ ಪರಿಸ್ಥಿತಿಯಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಹೀಗಾಗಿ ನಾವು ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಸರ್ಕಾರ

ತೆಗೆದುಕೊಂಡಿದೆ. ನೀವು ವಿಪಕ್ಷಗಳೆಲ್ಲ ಸರ್ಕಾರದ ಪರವಾಗಿ ನಿಲ್ಲಬೇಕು. ನಿಮ್ಮ ಅಗತ್ಯ ಸಲಹೆ ಸೂಚನೆಗಳಿದ್ದರೆ ನೀಡಬಹುದು ಎಂದು ವಿಪಕ್ಷಗಳ ಸಲಹೆ ಕೇಳಲಿದ್ದಾರೆ ಸಿಎಂ ಸಿದ್ದರಾಮಯ್ಯ. ಕೇಂದ್ರಕ್ಕೆ ನಿಯೋಗ ಕೊಂಡೊಯುವ ಬಗ್ಗೆಯೂ ವಿಪಕ್ಷಗಳು ಸಲಹೆ ಕೇಳಲಿದ್ದಾರೆ ಸಿಎಂ. ತಮಿಳುನಾಡಿಗೆ ನೀರು ಬೀಡಲು ಸದ್ಯಕ್ಕೆ ಸಾಧ್ಯವಿಲ್ಲ, ಇದ್ರ ಬಗ್ಗೆ ಮೇಲ್ಮನವಿ ಹಾಗು ಕೇಂದ್ರ ನೀರಾವರಿ ಸಚಿವರಿಗೂ ನಿಯೋಗದ ಮೂಲಕ ಮನವಿ ಕೊಡಲು ನಿರ್ಧಾರ ಮಾಡಲಾಗಿದೆ. ಇಂದಿನ ಸಭೆಗೆ ಯಾರೆಲ್ಲಾ ಬರ್ತಾರೆ..? ಮಂಡ್ಯ ಸಂಸದರೂ ಕೇಂದ್ರ ಸಚಿವರೂ ಆಗಿರುವ ಕುಮಾರಸ್ವಾಮಿ ಬರ್ತಾರಾ..? ಅನ್ನೋದನ್ನು ಕಾದು ನೋಡ್ಬೇಕು.

ಕೃಷ್ಣಮಣಿ

Tags: #bjp#CMSiddaramaiah#MYSORE1 TMC of water availableCongress PartyHdKumaraswamyKRS Back waterನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈಗ ಯಾರೂ ರಾಹುಲ್ ಅವರನ್ನು ತಮಾಷೆಯಾಗಿ ಪರಿಗಣಿಸುವುದಿಲ್ಲ. ಅವರು ಮಾತನಾಡುವಾಗ ಬಿಜೆಪಿಯವರು ಕಿಡಿಕಾರಿದರು, ನಗಲಿಲ್ಲ

Next Post

ಆಷಾಢಕ್ಕೆ ತವರಿಗೆ ಬಂದ ಮಗಳು.ಪ್ರಿಯಕರನ ಜೊತೆಗೆ ಆತ್ಮಹತ್ಯೆ.

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
Next Post

ಆಷಾಢಕ್ಕೆ ತವರಿಗೆ ಬಂದ ಮಗಳು.ಪ್ರಿಯಕರನ ಜೊತೆಗೆ ಆತ್ಮಹತ್ಯೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada