• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ.. ಕುಮಾರಸ್ವಾಮಿ ಬರ್ತಾರಾ..?

Krishna Mani by Krishna Mani
July 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ಶೋಧ
0
ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ.. ಕುಮಾರಸ್ವಾಮಿ ಬರ್ತಾರಾ..?
Share on WhatsAppShare on FacebookShare on Telegram

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತ ಇಂದು ಮಹತ್ವದ ಸರ್ವಪಕ್ಷ‌ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸರ್ವಪಕ್ಷ‌ ಸಭೆ ಕರೆದಿದ್ದಾರೆ ಸಿಎಂ‌ ಸಿದ್ದರಾಮಯ್ಯ.. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಕಾವೇರಿ ಕಣಿವೆಯ ಸಂಸದರು, ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ..

ADVERTISEMENT

ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯು ಪ್ರತಿದಿನ 1 TMC ನೀರು ಬಿಡುಗಡೆಗೆ ಆದೇಶ ಮಾಡಿದೆ. ಆದರೆ‌ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.. ಸದ್ಯಕ್ಕೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಜೂನ್ – ಜುಲೈ ತಿಂಗಳಲ್ಲಿ ಆಗಬೇಕಿದ್ದ ಮಳೆ ಸರಿಯಾಗಿ ಆಗಿಲ್ಲ. ಹೀಗಾಗಿ ಶೇಕಡ 28 ರಷ್ಟು ಮಳೆ ಕೊರತೆ ಎದರಾದ ಕಾರಣ ನೀರು ಬಿಡಲು ಆಗಲ್ಲ ಎಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಜೊತೆಗೆ ಕಾವೇರಿ ‌ನೀರಾವರಿ ನಿಯಂತ್ರಣ ಸಮಿತಿಯ ಶಿಫಾರಸ್ಸು ವಿರುದ್ಧ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನಿಸಿದೆ.

ಕಾವೇರಿ Cauvery ವಿಚಾರದಲ್ಲಿ ರಾಜ್ಯ ಸರ್ಕಾರ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದ್ದು, ರಾಜ್ಯ ಸರ್ಕಾರದ ಜೊತೆ ಕೈ ಜೊಡಿಸಿ ಎಂದು ವಿಪಕ್ಷಗಳಲ್ಲಿ ಮನವಿ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ನೂತನ ಸಂಸದರ ಸಭೆಯಲ್ಲಿ ಕರ್ನಾಟಕಕ್ಕೆ ಕಷ್ಟದ ಸಮಯದಲ್ಲಿ ರಾಜ್ಯದ ಹಿತ ಕಾಪಾಡಲು ಮನವಿ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮನವಿಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗು ಪ್ರಹ್ಲಾದ್‌ ಜೋಷಿ ಬೆಂಬಲಿಸಿದ್ದರು. ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಕೂಡ ರಾಜ್ಯದ ವಿಚಾರದಲ್ಲಿ ಬೆಂಬಲಿಸುವ ಮಾತನಾಡಿದ್ದಾರು. ಇದೀಗ ಕೇಂದ್ರ ಸಚಿವರ ಬೆಂಬಲ ಕೋರಲು ಸಿಎಂ ಮುಂದಾಗಿದ್ದಾರೆ.

ಮುಂಗಾರು ಆರಂಭದಲ್ಲಿ ನೀರಿಕ್ಷಿತ ಪ್ರಮಾಣದಲ್ಲಿ ರಾಜ್ಯಕ್ಕೆ ಮಳೆಯಾಗಿಲ್ಲ. ಮುಂದೆ‌ ಇದೇ ರೀತಿ ಮಳೆ ಕೈ ಕೊಟ್ಟರೆ ಸಮಸ್ಯೆ ಆಗಬಹುದು. ಈಗಿನ ಪರಿಸ್ಥಿತಿಯಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಹೀಗಾಗಿ ನಾವು ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಸರ್ಕಾರ

ತೆಗೆದುಕೊಂಡಿದೆ. ನೀವು ವಿಪಕ್ಷಗಳೆಲ್ಲ ಸರ್ಕಾರದ ಪರವಾಗಿ ನಿಲ್ಲಬೇಕು. ನಿಮ್ಮ ಅಗತ್ಯ ಸಲಹೆ ಸೂಚನೆಗಳಿದ್ದರೆ ನೀಡಬಹುದು ಎಂದು ವಿಪಕ್ಷಗಳ ಸಲಹೆ ಕೇಳಲಿದ್ದಾರೆ ಸಿಎಂ ಸಿದ್ದರಾಮಯ್ಯ. ಕೇಂದ್ರಕ್ಕೆ ನಿಯೋಗ ಕೊಂಡೊಯುವ ಬಗ್ಗೆಯೂ ವಿಪಕ್ಷಗಳು ಸಲಹೆ ಕೇಳಲಿದ್ದಾರೆ ಸಿಎಂ. ತಮಿಳುನಾಡಿಗೆ ನೀರು ಬೀಡಲು ಸದ್ಯಕ್ಕೆ ಸಾಧ್ಯವಿಲ್ಲ, ಇದ್ರ ಬಗ್ಗೆ ಮೇಲ್ಮನವಿ ಹಾಗು ಕೇಂದ್ರ ನೀರಾವರಿ ಸಚಿವರಿಗೂ ನಿಯೋಗದ ಮೂಲಕ ಮನವಿ ಕೊಡಲು ನಿರ್ಧಾರ ಮಾಡಲಾಗಿದೆ. ಇಂದಿನ ಸಭೆಗೆ ಯಾರೆಲ್ಲಾ ಬರ್ತಾರೆ..? ಮಂಡ್ಯ ಸಂಸದರೂ ಕೇಂದ್ರ ಸಚಿವರೂ ಆಗಿರುವ ಕುಮಾರಸ್ವಾಮಿ ಬರ್ತಾರಾ..? ಅನ್ನೋದನ್ನು ಕಾದು ನೋಡ್ಬೇಕು.

ಕೃಷ್ಣಮಣಿ

Tags: #bjp#CMSiddaramaiah#MYSORE1 TMC of water availableCongress PartyHdKumaraswamyKRS Back waterನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈಗ ಯಾರೂ ರಾಹುಲ್ ಅವರನ್ನು ತಮಾಷೆಯಾಗಿ ಪರಿಗಣಿಸುವುದಿಲ್ಲ. ಅವರು ಮಾತನಾಡುವಾಗ ಬಿಜೆಪಿಯವರು ಕಿಡಿಕಾರಿದರು, ನಗಲಿಲ್ಲ

Next Post

ಆಷಾಢಕ್ಕೆ ತವರಿಗೆ ಬಂದ ಮಗಳು.ಪ್ರಿಯಕರನ ಜೊತೆಗೆ ಆತ್ಮಹತ್ಯೆ.

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಆಷಾಢಕ್ಕೆ ತವರಿಗೆ ಬಂದ ಮಗಳು.ಪ್ರಿಯಕರನ ಜೊತೆಗೆ ಆತ್ಮಹತ್ಯೆ.

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada