• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶಾರ್ಜಿಲ್ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್: ಇನ್ನೂ ಇತ್ಯರ್ಥವಾಗದ UAPA ಪ್ರಕರಣ!

ಪ್ರತಿಧ್ವನಿ by ಪ್ರತಿಧ್ವನಿ
November 28, 2021
in ದೇಶ
0
ಶಾರ್ಜಿಲ್ ಇಮಾಮ್‌ಗೆ ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್: ಇನ್ನೂ ಇತ್ಯರ್ಥವಾಗದ UAPA ಪ್ರಕರಣ!
Share on WhatsAppShare on FacebookShare on Telegram

2019ರಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಭಾಷಣ ಮಾಡಿದ್ದಕ್ಕಾಗಿ ದೇಶದ್ರೋಹದ ಪ್ರಕರಣದಡಿಯಲ್ಲಿ ಬಂಧಿತರಾಗಿದ್ದ ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್‌ ಅವರಿಗೆ ಅಲಹಾಬಾದ್ ಹೈಕೋರ್ಟ್ ಶನಿವಾರ, ನವೆಂಬರ್ 28ರಂದು ಜಾಮೀನು ನೀಡಿದೆ. ಅವರ ಮೇಲೆ ಐಪಿಸಿ ಸೆಕ್ಷನ್ 124A (ದೇಶದ್ರೋಹ), 153A (ಧರ್ಮ, ಜನಾಂಗದ ದ್ವೇಷ ಉತ್ತೇಜಿಸುವುದು), 153B (ಶಾಂತಿ ಭಂಗವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು) ಮತ್ತು 505(2) (ಆತಂಕಕಾರಿ ಹೇಳಿಕೆಗಳು, ತಪ್ಪು ಉದ್ದೇಶವನ್ನು ಸೃಷ್ಟಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ADVERTISEMENT

ದೆಹಲಿ, ಮಣಿಪುರ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಗಳಲ್ಲೂ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.  ಈಗಾಗಲೇ ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದರೂ ಅಕ್ಟೋಬರ್‌ನಲ್ಲಿ ದೆಹಲಿಯ ನ್ಯಾಯಾಲಯವು ಆ ಭಾಷಣಕ್ಕಾಗಿ ಇಮಾಮ್‌ಗೆ ಜಾಮೀನು ನಿರಾಕರಿಸಿತ್ತು. “ಪ್ರಚೋದನಕಾರಿ ಭಾಷಣದ ಧ್ವನಿಯು ಸಾರ್ವಜನಿಕ ಶಾಂತಿ, ಸಮಾಜದ ಶಾಂತಿ ಮತ್ತು ಸಾಮರಸ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ” ಎಂದು ಜಾಮೀನು ನಿರಾಕರಣೆಗೆ ಕಾರಣ ನೀಡಿತ್ತು.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (UAPA) ಕಾಯಿದೆಯಡಿಯಲ್ಲೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  ನವೆಂಬರ್ 2 ರಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಮಾಮ್‌‌ರ ಜಾಮೀನು ಅರ್ಜಿಯ ಕುರಿತು ತನ್ನ ಆದೇಶವನ್ನು ಕಾಯ್ದಿರಿಸಿದೆ.

ಇಮಾಮ್ ಅವರು ತಮ್ಮ ವಕೀಲರಾದ ಅಹ್ಮದ್ ಇಬ್ರಾಹಿಂ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಾವು ಶಾಂತಿ ಬಯಸುವ ಪ್ರಜೆಯಾಗಿದ್ದು ಯಾವ ಪ್ರತಿಭಟನೆಯ ಸಮಯದಲ್ಲೂ ಹಿಂಸಾಚಾರದಲ್ಲಿ ಭಾಗಿಯಾಗಲಿಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 13 ರಂದು ಮಾಡಿದ ಭಾಷಣವೇ ಆಗಿರಲಿ ಅಥವಾ ತನ್ನ ಯಾವುದೇ ಭಾಷಣದಲ್ಲಿ ಆಗಿರಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ಸರ್ಕಾರದ ವಿರುದ್ಧ ಯಾವುದೇ ಅಸಮಾಧಾನವನ್ನು ಹರಡುವ ಅಥವಾ ಯಾವುದೇ ಸಮುದಾಯದ ವಿರುದ್ಧ ಹಿಂಸೆ ಅಥವಾ ಕೋಮುಭಾವನೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿಲ್ಲ ಎಂದು ಅವರು ವಾದಿಸಿದರು.

ಫೆಬ್ರವರಿ 2020 ರ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಪ್ರಕರಣಗಳು ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡಿವೆ ಎಂದು ಈಗಾಗಲೇ ಹಲವಾರು ಮಾನವ ಹಕ್ಕುಗಳ ಹೋರಾಟಗಾರರು ಅಭಿಪ್ರಾಯ ಪಟ್ಟಿದ್ದಾರೆ.  ತಿಂಗಳುಗಟ್ಟಲೆ ಶಾಂತಿಯುತವಾಗಿ ಆಂದೋಲನ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು ಬಹಿರಂಗವಾಗಿ ಪ್ರಚೋದನಕಾರಿ ಮತ್ತು ಬೆದರಿಕೆಯ ಭಾಷಣ ಮಾಡಿದ ಬಲಪಂಥೀಯ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಲಿಲ್ಲ ಎನ್ನುವ ದೂರುಗಳನ್ನೂ ಸಲ್ಲಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಸದ್ಯಕ್ಕೆ ಶಾರ್ಜಿಲ್ ಇಮಾಮ್ ಅವರಿಗೆ ಜಾಮೀನು ಮಂಜೂರು ಮಾಡಿದ್ದರೂ ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಸೇರಿದಂತೆ ಅವರ ವಿರುದ್ಧದ ಇತರ ಪ್ರಕರಣಗಳು ಇನ್ನೂ ಬಾಕಿಯಿರುವುದರಿಂದ ಅವರು ಸದ್ಯಕ್ಕೆ ಜೈಲಿನಲ್ಲಿಯೇ ಇರಲಿದ್ದಾರೆ.

Tags: BJPCongress PartyCovid 19sharjeel imamUAPAಅಲಹಾಬಾದ್ ಹೈಕೋರ್ಟ್ನರೇಂದ್ರ ಮೋದಿಬಿಜೆಪಿಶಾರ್ಜಿಲ್ ಇಮಾಮ್‌
Previous Post

HDKಯನ್ನು ಸೋಲಿಸಲು ಒಂದಾದ್ರಾ ಮಾಜಿ ಶಾಸಕ ಬಾಲಕೃಷ್ಣಾ ಮತ್ತು ಸಿ.ಪಿ ಯೋಗೀಶ್ವರ್?

Next Post

ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

ರಾಜಕೀಯ ಲಾಭಕ್ಕಾಗಿ ನಕಲಿ ಲಸಿಕೆ ಅಭಿಯಾನ ನಡೆಸಿದರೆ ತುಮಕೂರು ಶಾಸಕ ಗೌರಿಶಂಕರ್?

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada