• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಕಿ ಮೇಲಿನ ದೌರ್ಜನ್ಯ ಆರೋಪ : ಬಂಗಾರಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ..!

ಪ್ರತಿಭಟನಾ ಸ್ಥಳಕ್ಕೆ ಸ್ವಾಮಿ ಭೇಟಿ ನೀಡಿದ ಶಾಸಕ ಎಸ್‌.ಎನ್.‌ ನಾರಾಯಣ ಭೇಟಿ : ಆರೋಪಿಯ ಮೇಲೆ ಕಾನೂನಿನ ಅಡಿಯಲ್ಲಿ ಶಿಕ್ಷೆ ವಿಧಿಸುವ ಭರವಸೆ..

ಪ್ರತಿಧ್ವನಿ by ಪ್ರತಿಧ್ವನಿ
September 3, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಾಲಕಿ ಮೇಲಿನ ದೌರ್ಜನ್ಯ ಆರೋಪ : ಬಂಗಾರಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ..!
Share on WhatsAppShare on FacebookShare on Telegram

ಕೋಲಾರ : ಜಿಲ್ಲೆಯ ಬಂಗಾರಪೇಟೆಯಲ್ಲಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.  37 ವರ್ಷದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT
HD Kumaraswamy : ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಕುಮಾರಸ್ವಾಮಿ ಟಾಂಗ್‌..! #priyankkharge #hdkumaraswamy

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬಾಲಕಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಆಸ್ಪತ್ರೆ ವೃತ್ತದಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ಕೆಲಕಾಲ ಆತಂಕ ಉಂಟಾಗಿ ಪರಿಸ್ಥಿತಿ ಬಿಗಡಾಯಿಸಿತ್ತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಭದ್ರತೆ ಕೈಗೊಂಡರು. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ, ಬಂಗಾರಪೇಟೆ ಸರ್ಕಲ್ ಇನ್‌ಸ್ಪೆಕ್ಟರ್ ರವಿಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಇದನ್ನೂ ಓದಿ : 2024–29ರ ನೀತಿಯಡಿ ರಾಜ್ಯ ಪ್ರವಾಸೋದ್ಯಮಕ್ಕೆ 1,080.97 ಕೋಟಿ ಹೂಡಿಕೆ : ಸಚಿವ ಜಾರ್ಜ್..

ಈ ನಡುವೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹಾಗೂ ಮುಖಂಡ ಶಂಶುದ್ದೀನ್ ಬಾಬು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಮನವೊಲಿಸಿದ್ದಾರೆ. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪದ ಸತ್ಯಾಸತ್ಯತೆ ಹಾಗೂ ಇತರರ ಪಾತ್ರದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

Tags: Bangarapate MLAChild HarrasmentCommunal ViolenceCRIME NEWSkarnataka newsKolar newsKolar PolicePratidhvaniRapist ArrestS N narayana swamy
Previous Post

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Next Post

9 ವರ್ಷಗಳ ಕಾನೂನು ಸಮರ ಅಂತ್ಯ : ದುನಿಯಾ ವಿಜಯ್‌ – ನಾಗರತ್ನಗೆ ಡಿವೋರ್ಸ್‌ ; ನಟ ನೀಡಬೇಕಾದ ಜೀವನಾಂಶವೆಷ್ಟು..?

Related Posts

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?
Top Story

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

by ಪ್ರತಿಧ್ವನಿ
September 15, 2026
0

ಬೆಂಗಳೂರು : ಒಂದು ಕಾಲದಲ್ಲಿ ಕರ್ನಾಟಕ ರಾಜಕಾರಣದಲ್ಲಿ ಬಿಜೆಪಿಗಿಂತಲೂಹೆಚ್ಚಿನ ಶಕ್ತಿ ಹೊಂದಿದ್ದ ಜೆಡಿಎಸ್, ಇಂದು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವುದು ರಾಜಕೀಯ ವಾಸ್ತವ. ದೇವೇಗೌಡರ ರಾಜಕೀಯ ಪರಂಪರೆ,...

Read moreDetails
ಉದ್ಯೋಗಿಗಳಿಗೆ ವಜಾ ಶಾಕ್; ಒರಾಕಲ್‌ನಿಂದ ಬಿಗ್‌ ಲೇ-ಆಫ್!

ಉದ್ಯೋಗಿಗಳಿಗೆ ವಜಾ ಶಾಕ್; ಒರಾಕಲ್‌ನಿಂದ ಬಿಗ್‌ ಲೇ-ಆಫ್!

September 15, 2026
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

September 15, 2026
ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಗಡುವು ವಿಸ್ತರಣೆ: ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್!

ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಗಡುವು ವಿಸ್ತರಣೆ: ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್!

September 15, 2026
ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
Next Post
9 ವರ್ಷಗಳ ಕಾನೂನು ಸಮರ ಅಂತ್ಯ : ದುನಿಯಾ ವಿಜಯ್‌ – ನಾಗರತ್ನಗೆ ಡಿವೋರ್ಸ್‌ ; ನಟ ನೀಡಬೇಕಾದ ಜೀವನಾಂಶವೆಷ್ಟು..?

9 ವರ್ಷಗಳ ಕಾನೂನು ಸಮರ ಅಂತ್ಯ : ದುನಿಯಾ ವಿಜಯ್‌ - ನಾಗರತ್ನಗೆ ಡಿವೋರ್ಸ್‌ ; ನಟ ನೀಡಬೇಕಾದ ಜೀವನಾಂಶವೆಷ್ಟು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada