ಪ್ರತಿಷ್ಠಿತ ಮುರುಘಾ ಮಠ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ. ಈ ಕುರಿತು ಚಿತ್ರದುರ್ಗದ ಮುರುಘಾರಾಜೇಂದ್ರ ಬ್ರಹ್ಮನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಫೊಕ್ಸೊ ಕೇಸ್ ದಾಖಲಾಗಿದೆ.
ಮಠದ ಉಚಿತ ವಿದ್ಯಾನಿಲಯದಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆ ವಿದ್ಯಾರ್ಥಿನಿಯರು ಸರದಿಯಂತೆ ಸ್ವಾಮೀಜಿ ಬಳಿಗೆ ಹೋಗಬೇಕು. ಒಪ್ಪದಿದ್ದಾಗ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಕಿರುಕುಳ ನೀಡುತ್ತಾರೆ ಎನ್ನಲಾಗಿದೆ.
ಈ ಕುರಿತು ಮಠದ ವಿದ್ಯಾರ್ಥಿನಿ ಮೂಸೂರು ಒಡನಾಡಿ ಸಂಸ್ಥೆಗೆ ದೂರು ನೀಡಿದ್ದು ಅದರಲ್ಲಿ, ಹಣ್ಣು ಮತ್ತು ಸಿಹಿ ಕೊಟ್ಟು ಸ್ವಾಮೀಜಿಗೆ ನೀಡಿ ಎಂದು ವಿದ್ಯಾನಿಲಯದ ವಾರ್ಡನ್ ಕಳುಹಿಸುತ್ತಿದ್ದರು. ಆಶೀರ್ವಾದ ಮಾಡುವ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ. ಇಂಥಹ ಅನುಭವ ಹಲವರಿಗೆ ಆದರೂ ದೂರು ನೀಡಲು ಹೆದರಿದ್ದಾರೆ. ಚಿತ್ರದುರ್ಗದಲ್ಲಿ ನ್ಯಾಯ ಸಿಗುವುದಿಲ್ಲ ಎಂದು ತಿಳಿದು ನಾವು ಇಲ್ಲಿಗೆ ದೂರು ನೀಡುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ಒಡನಾಡಿ ಸಂಸ್ಥೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಗೆ ಆದಾರದ ಮೇಲೆ ದೂರು ದಾಖಲಿಸಿಕೊಂಡಿದೆ. ಈ ಕುರಿತು ವಿಚಾರಣೆ ನಡೆಸಿದ ಅವರು, ತಮಗಾದ ದೌರ್ಜನ್ಯವನ್ನು ಸಮಿತಿಗೆ ವಿಸ್ತೃತವಾಗಿ ತಿಳಿಸಿದ ನಂತರ ದೂರನ್ನು ದಾಖಲಿಸಿಕೊಳ್ಳಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು.
ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಬಲವಂತದ ಲೈಂಗಿಕ ಕ್ರಿಯೆ ನಂತರ ಸ್ವಾಮೀಜಿ ಸ್ವಚ್ಛತೆಗೆ ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರು ಬಾತ್ರೂಮ್ ಬಳಸುವಂತೆ ಹೇಳುತ್ತಿದ್ದರು. ಕಿರುಕುಳ ಪ್ರಶ್ನಿಸಿದ್ದಕ್ಕೆ ಕೆಲವು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕಿದ್ದಾರೆ. ಈ ಕುರಿತಾಗಿ ಒಡನಾಡಿ ಸಂಸ್ಥೆಯಿಂದ ಪೊಲೀಸ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.