ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ 26 ಪ್ರತಿಪಕ್ಷಗಳ ಒಕ್ಕೂಟ ʼಇಂಡಿಯಾʼ ಅವಿಶ್ವಾಸ ನಿರ್ಣಯ ಮಂಡಿಸಿದೆ. ಸಭಾಧ್ಯಕ್ಷ ಓಂ ಬಿರ್ಲಾ ಅವರು ನಿರ್ಣಯ ಮೇಲೆ ಸೋಮವಾರ (ಜು.31) ಚರ್ಚೆಗೆ ಅವಕಾಶ ನೀಡಿದ್ದಾರೆ.
ದೇಶದ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಗೆ ಈಗ ʼಇಂಡಿಯಾʼ ಮೈತ್ರಿಕೂಟ ಸಾಕ್ಷಿ ಆಗಲಿದೆ ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡನೆ ಮಾಡುವುದಕ್ಕೆ ಸಭಾಧ್ಯಕ್ಷರಿಗೆ ಮನವಿಯನ್ನು ನೀಡಿದ್ದ ಇಂಡಿಯಾ ಮೈತ್ರಿಕೂಟಕ್ಕೆ ಓಂ ಬಿರ್ಲಾ ಈ ಹಿಂದೆ ಅವಿಶ್ವಾಸ ನಿರ್ಣಯ ಮಂಡನೆಗೆ ದಿನಾಂಕ ತಿಳಿಸಲಾಗುವುದು ಎಂದು ತಿಳಿಸಿದ್ದರು.
ಆದರೆ ಈ ಮಾತಿಗೆ ಆದ್ಯತೆಯನ್ನು ನೀಡಿದ ವಿಪಕ್ಷಗಳು ಸಭಾಧ್ಯಕ್ಷರು ಅವಿಶ್ವಾಸ ನಿರ್ಣಯದ ಚರ್ಚೆಯ ದಿನಾಂಕ ತಿಳಿಸುವವರೆಗೂ ತಾವು ಪ್ರತಿಭಟನೆಯನ್ನು ಬಿಡುವುದಿಲ್ಲಎಂದು ಪಟ್ಟು ಹಿಡಿದಿದ್ದರು.
ಹೀಗಾಗಿ ಕಳೆದ ಹಲವು ದಿನಗಳಿಂದ ಪ್ರಮುಖ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಭಟನೆಗಳನ್ನು ಮಾಡಿಕೊಂಡು ಬರುತ್ತಿವೆ. ಇದು ಕಲಾಪವನ್ನು ಕೂಡ ನುಂಗಿ ಹಾಕಿತ್ತು. ಆದರೆ ಈಗ ಸದ್ಯಕ್ಕೆ ಇದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲು ಸಭಾಧ್ಯಕ್ಷ ಓಂ ಬಿರ್ಲಾ ಮುಂದಾಗಿದ್ದು ಇದೀಗ ಅಧಿಕೃತವಾಗಿ ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಚರ್ಚೆಗೆ ದಿನಾಂಕವನ್ನು ನಿಗದಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? Viral Video ; ರಸ್ತೆ ದಾಟಿದ ಜಿಂಕೆಗಳ ಹಿಂಡು, ಅಚ್ಚರಿಗೊಂಡ ನೆಟ್ಟಿಗರು
ಸೋಮವಾರ ನಡೆಯುವ ಸಂಸತ್ತು ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಸಭಾಧ್ಯಕ್ಷ ಓಂ ಬರ್ಲಾ ಅವರು ಅವಿಶ್ವಾಸ ನಿರ್ಣಯ ಚರ್ಚೆಗೆ ಮುಹೂರ್ತ ಗೊತ್ತುಪಡಿಸಿದ್ದಾರೆ.