• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!
Share on WhatsAppShare on FacebookShare on Telegram

“ನನಗೆ ಕಮ್ಯುನಿಸ್ಟ್ ಸಿದ್ಧಾಂತದ ಬಗ್ಗೆ ಮಾತನಾಡುವ ಶಕ್ತಿ ಇದೆ. ವಂದೇ ಮಾತರಂ ಬಗ್ಗೆಯೂ ಮಾತನಾಡಬಲ್ಲೇ, ಯಧಾ ಯಧಾಯ ಧರ್ಮಸ್ಯ ಶ್ಲೋಕದ ಬಗ್ಗೆಯೂ ಮಾತನಾಡಬಲ್ಲೆ. ಭಗವದ್ಗೀತೆ, ಚಾಣಕ್ಯ ನೀತಿ ಬಗ್ಗೆ ಮಾತನಾಡಬಲ್ಲೇ. ಸಮಯ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಯಾರಿಗೂ ನೋಯಿಸಲು ಬಯಸುವುದಿಲ್ಲ. ನನ್ನ ಧರ್ಮವನ್ನು ನಾನು ಬಿಡಲು ತಯಾರಿಲ್ಲ.

ADVERTISEMENT

ನಾನು ಹುಟ್ಟಿದ್ದು ಹಿಂದೂವಾಗಿ. ಜೊತೆಗೆ ಕ್ರೈಸ್ತ, ಇಸ್ಲಾಂ, ಜೈನ ಸಿದ್ಧಾಂತದ ಮೇಲೂ ನಂಬಿಕೆ ಹೊಂದಿರುವವನು. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು ಎಂದು ನಂಬಿರುವವನು ನಾನು. ಸೂರ್ಯ, ಚಂದ್ರ, ಬೆಳಕು, ನೀರಿಗೆ ಜಾತಿ, ಧರ್ಮದ ಬೇಧವಿಲ್ಲ. ಪ್ರವಾದಿ ಮೊಹಮದ್ ಪೈಗಂಬರ್ ಅವರ ದಿವ್ಯವಾಣಿ ಬಗ್ಗೆ, ಬುದ್ಧ-ಬಸವಣ್ಣನ ತತ್ವದ ಬಗ್ಗೆ ಅರಿತಿರುವವನು ನಾನು” ಎಂದರು.

“ನನ್ನ ಈ ಹೇಳಿಕೆಯಲ್ಲಿ ರಾಜಕಾರಣ ಮಾಡಬಹುದು, ಕೆಸರೆರಚಾಟ ಮಾಡಬಹುದು ಎಂದು ಭಾವಿಸಿದ್ದರೆ ಅದು ಸುಳ್ಳು. ಓಹ್ ಗಾಡ್ ಗಿವ್ ಮಿ ಸ್ಟ್ರೇಂತ್ ಟು ಬಿ ಪ್ರೊಟೆಕ್ಟೆಡ್ ಫ್ರಂ ಮೈ ಫ್ರೆಂಡ್ಸ್. ಸೋ ದಟ್ ಐ ಕ್ಯಾನ್ ಟೇಕ್ ಕೇರ್ ಮೈ ಎನಿಮೀಸ್ (ಓ ದೇವರೇ, ನನ್ನ ಸ್ನೇಹಿತರಿಂದ ನನ್ನನ್ನು ಕಾಪಾಡಿಕೊಳ್ಳುವ ಶಕ್ತಿಯನ್ನು ನನಗೆ ಕೊಡು. ಉಳಿದಂತೆ ನನ್ನ ಶತ್ರುವನ್ನು ನಾನು ನೋಡಿಕೊಳ್ಳುತ್ತೇನೆ) ಎಂಬ ಪ್ಲೇಟೋ ಅವರ ಮಾತಿನ ಮೇಲೆ ನಂಬಿಕೆ ಹೊಂದಿರುವವನು” ಎಂದು ಹೇಳಿದರು.

ಮಾಧ್ಯಮಗಳ ಮುಂದೆಯಲ್ಲ, ಪಕ್ಷದ ಕಚೇರಿಯಲ್ಲಿ ಸಭೆ ಕರೆಯಿರಿ, ಉತ್ತರ ನೀಡುತ್ತೇನೆ

“ನಾನು ಬಿಹಾರಕ್ಕೆ ಹೋದಾಗ ಅಲ್ಲಿ ಕೆಲವರು ನನ್ನನ್ನು ಕೇಳಿದರು. ನನ್ನ ಪಕ್ಷದ ಕೆಲವು ಹಿರಿಯ ನಾಯಕರು, ಸ್ನೇಹಿತರು ನನಗೆ ಬಹಳ ಸಲಹೆ ನೀಡಿರುವುದಕ್ಕೆ ಸಂತೋಷವಿದೆ. ನಾನು ಬೇರೆಯವರಿಗಿಂತ ದೊಡ್ಡವನಲ್ಲ. ಚಿಕ್ಕವನಾಗಿಯೇ ಇದ್ದೇನೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವುದಲ್ಲ, ಕಾಂಗ್ರೆಸ್ ಪಕ್ಷದ ಕಚೇರಿಗೆ ಬನ್ನಿ ಮಾತನಾಡೋಣ. ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ. ಮಾಧ್ಯಮಗಳ ಮುಂದೆ ಮಾತನಾಡಿದರೆ ನಿಮಗೆ ತೃಪ್ತಿ ಸಿಗಬಹುದು. ಬೇರೆ ಪ್ರಯೋಜನವಿಲ್ಲ. ನಿಮ್ಮ ಉತ್ತಮ ಸಲಹೆಗಳನ್ನು ನಾನು ಸ್ವೀಕರಿಸುತ್ತೇನೆ. ನಾನು ನನ್ನ ಬದುಕನ್ನು ಬೇರೆಯವರಿಗೆ ಶಕ್ತಿ ತುಂಬಲು ಬಳಸುತ್ತೇನೆ. ಎಲ್ಲರ ಕಷ್ಟ ಕಾಲದಲ್ಲಿ ನಾನು ಅವರ ಜೊತೆಗೆ ನಿಂತಿದ್ದೆ. ನಾನು ಯಾವ ಹುದ್ದೆಯಲ್ಲಿದ್ದೇನೆ, ಯಾವ ಹುದ್ದೆಯಲ್ಲಿ ಇಲ್ಲ, ಯಾವ ಹುದ್ದೆಗೆ ಹೋಗುತ್ತೇನೆ, ಯಾವ ಹುದ್ದೆಗೆ ಹೋಗುವುದಿಲ್ಲ ಎಂಬುದು ಮುಖ್ಯವಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ” ಎಂದು ಸ್ಪಷ್ಟಪಡಿಸಿದರು.

“ನಾನು ನನ್ನ ಕರ್ತವ್ಯ ಮಾಡುತ್ತಿದ್ದೇನೆ. ಮಾಧ್ಯಮಗಳು ನನ್ನನ್ನು ಬೆಳೆಸಿದ್ದು, ನೀವು ನನ್ನನ್ನು ಟೀಕೆ ಮಾಡಿದಾಗಲೂ ನಾನು ಅವುಗಳನ್ನು ಸ್ವಾಗತಿಸಿದ್ದೇನೆ. ನೀವು ಮಾರ್ಗದರ್ಶನ ನೀಡಿ ನನ್ನನ್ನು ತಿದ್ದಿದ್ದೀರಿ. ಬೇರೆಯವರು ಹೇಳಿದ್ದನ್ನೂ ನೀವು ಪ್ರಸಾರ ಮಾಡುತ್ತೀರಿ. ಆದರೂ ನಾನು ಮಾಧ್ಯಮಗಳನ್ನು ನನ್ನ ಹಿತೈಷಿಗಳು, ಮಾರ್ಗದರ್ಶಕರು ಎಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

DK Shivakumar: ಪಕ್ಷದ ಪರವಾಗಿ ಕೆಲಸ ಮಾಡಿ, ನಂತರ ಅನುಭವಿಸಿದ ಕಷ್ಟ ನನಗೆ ಮಾತ್ರ ಗೊತ್ತು..!!

Next Post

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ನೇಮಕ..

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ - ಉಪಾಧ್ಯಕ್ಷರ ನೇಮಕ..

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada