• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!
Share on WhatsAppShare on FacebookShare on Telegram

“ನನಗೆ ಕಮ್ಯುನಿಸ್ಟ್ ಸಿದ್ಧಾಂತದ ಬಗ್ಗೆ ಮಾತನಾಡುವ ಶಕ್ತಿ ಇದೆ. ವಂದೇ ಮಾತರಂ ಬಗ್ಗೆಯೂ ಮಾತನಾಡಬಲ್ಲೇ, ಯಧಾ ಯಧಾಯ ಧರ್ಮಸ್ಯ ಶ್ಲೋಕದ ಬಗ್ಗೆಯೂ ಮಾತನಾಡಬಲ್ಲೆ. ಭಗವದ್ಗೀತೆ, ಚಾಣಕ್ಯ ನೀತಿ ಬಗ್ಗೆ ಮಾತನಾಡಬಲ್ಲೇ. ಸಮಯ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಯಾರಿಗೂ ನೋಯಿಸಲು ಬಯಸುವುದಿಲ್ಲ. ನನ್ನ ಧರ್ಮವನ್ನು ನಾನು ಬಿಡಲು ತಯಾರಿಲ್ಲ.

ADVERTISEMENT

ನಾನು ಹುಟ್ಟಿದ್ದು ಹಿಂದೂವಾಗಿ. ಜೊತೆಗೆ ಕ್ರೈಸ್ತ, ಇಸ್ಲಾಂ, ಜೈನ ಸಿದ್ಧಾಂತದ ಮೇಲೂ ನಂಬಿಕೆ ಹೊಂದಿರುವವನು. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು ಎಂದು ನಂಬಿರುವವನು ನಾನು. ಸೂರ್ಯ, ಚಂದ್ರ, ಬೆಳಕು, ನೀರಿಗೆ ಜಾತಿ, ಧರ್ಮದ ಬೇಧವಿಲ್ಲ. ಪ್ರವಾದಿ ಮೊಹಮದ್ ಪೈಗಂಬರ್ ಅವರ ದಿವ್ಯವಾಣಿ ಬಗ್ಗೆ, ಬುದ್ಧ-ಬಸವಣ್ಣನ ತತ್ವದ ಬಗ್ಗೆ ಅರಿತಿರುವವನು ನಾನು” ಎಂದರು.

“ನನ್ನ ಈ ಹೇಳಿಕೆಯಲ್ಲಿ ರಾಜಕಾರಣ ಮಾಡಬಹುದು, ಕೆಸರೆರಚಾಟ ಮಾಡಬಹುದು ಎಂದು ಭಾವಿಸಿದ್ದರೆ ಅದು ಸುಳ್ಳು. ಓಹ್ ಗಾಡ್ ಗಿವ್ ಮಿ ಸ್ಟ್ರೇಂತ್ ಟು ಬಿ ಪ್ರೊಟೆಕ್ಟೆಡ್ ಫ್ರಂ ಮೈ ಫ್ರೆಂಡ್ಸ್. ಸೋ ದಟ್ ಐ ಕ್ಯಾನ್ ಟೇಕ್ ಕೇರ್ ಮೈ ಎನಿಮೀಸ್ (ಓ ದೇವರೇ, ನನ್ನ ಸ್ನೇಹಿತರಿಂದ ನನ್ನನ್ನು ಕಾಪಾಡಿಕೊಳ್ಳುವ ಶಕ್ತಿಯನ್ನು ನನಗೆ ಕೊಡು. ಉಳಿದಂತೆ ನನ್ನ ಶತ್ರುವನ್ನು ನಾನು ನೋಡಿಕೊಳ್ಳುತ್ತೇನೆ) ಎಂಬ ಪ್ಲೇಟೋ ಅವರ ಮಾತಿನ ಮೇಲೆ ನಂಬಿಕೆ ಹೊಂದಿರುವವನು” ಎಂದು ಹೇಳಿದರು.

ಮಾಧ್ಯಮಗಳ ಮುಂದೆಯಲ್ಲ, ಪಕ್ಷದ ಕಚೇರಿಯಲ್ಲಿ ಸಭೆ ಕರೆಯಿರಿ, ಉತ್ತರ ನೀಡುತ್ತೇನೆ

“ನಾನು ಬಿಹಾರಕ್ಕೆ ಹೋದಾಗ ಅಲ್ಲಿ ಕೆಲವರು ನನ್ನನ್ನು ಕೇಳಿದರು. ನನ್ನ ಪಕ್ಷದ ಕೆಲವು ಹಿರಿಯ ನಾಯಕರು, ಸ್ನೇಹಿತರು ನನಗೆ ಬಹಳ ಸಲಹೆ ನೀಡಿರುವುದಕ್ಕೆ ಸಂತೋಷವಿದೆ. ನಾನು ಬೇರೆಯವರಿಗಿಂತ ದೊಡ್ಡವನಲ್ಲ. ಚಿಕ್ಕವನಾಗಿಯೇ ಇದ್ದೇನೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವುದಲ್ಲ, ಕಾಂಗ್ರೆಸ್ ಪಕ್ಷದ ಕಚೇರಿಗೆ ಬನ್ನಿ ಮಾತನಾಡೋಣ. ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ. ಮಾಧ್ಯಮಗಳ ಮುಂದೆ ಮಾತನಾಡಿದರೆ ನಿಮಗೆ ತೃಪ್ತಿ ಸಿಗಬಹುದು. ಬೇರೆ ಪ್ರಯೋಜನವಿಲ್ಲ. ನಿಮ್ಮ ಉತ್ತಮ ಸಲಹೆಗಳನ್ನು ನಾನು ಸ್ವೀಕರಿಸುತ್ತೇನೆ. ನಾನು ನನ್ನ ಬದುಕನ್ನು ಬೇರೆಯವರಿಗೆ ಶಕ್ತಿ ತುಂಬಲು ಬಳಸುತ್ತೇನೆ. ಎಲ್ಲರ ಕಷ್ಟ ಕಾಲದಲ್ಲಿ ನಾನು ಅವರ ಜೊತೆಗೆ ನಿಂತಿದ್ದೆ. ನಾನು ಯಾವ ಹುದ್ದೆಯಲ್ಲಿದ್ದೇನೆ, ಯಾವ ಹುದ್ದೆಯಲ್ಲಿ ಇಲ್ಲ, ಯಾವ ಹುದ್ದೆಗೆ ಹೋಗುತ್ತೇನೆ, ಯಾವ ಹುದ್ದೆಗೆ ಹೋಗುವುದಿಲ್ಲ ಎಂಬುದು ಮುಖ್ಯವಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ” ಎಂದು ಸ್ಪಷ್ಟಪಡಿಸಿದರು.

“ನಾನು ನನ್ನ ಕರ್ತವ್ಯ ಮಾಡುತ್ತಿದ್ದೇನೆ. ಮಾಧ್ಯಮಗಳು ನನ್ನನ್ನು ಬೆಳೆಸಿದ್ದು, ನೀವು ನನ್ನನ್ನು ಟೀಕೆ ಮಾಡಿದಾಗಲೂ ನಾನು ಅವುಗಳನ್ನು ಸ್ವಾಗತಿಸಿದ್ದೇನೆ. ನೀವು ಮಾರ್ಗದರ್ಶನ ನೀಡಿ ನನ್ನನ್ನು ತಿದ್ದಿದ್ದೀರಿ. ಬೇರೆಯವರು ಹೇಳಿದ್ದನ್ನೂ ನೀವು ಪ್ರಸಾರ ಮಾಡುತ್ತೀರಿ. ಆದರೂ ನಾನು ಮಾಧ್ಯಮಗಳನ್ನು ನನ್ನ ಹಿತೈಷಿಗಳು, ಮಾರ್ಗದರ್ಶಕರು ಎಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

DK Shivakumar: ಪಕ್ಷದ ಪರವಾಗಿ ಕೆಲಸ ಮಾಡಿ, ನಂತರ ಅನುಭವಿಸಿದ ಕಷ್ಟ ನನಗೆ ಮಾತ್ರ ಗೊತ್ತು..!!

Next Post

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ನೇಮಕ..

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ - ಉಪಾಧ್ಯಕ್ಷರ ನೇಮಕ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada