ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದಿಲ್ಲದೆ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುತ್ತವೆ, ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಅಮರ ಪ್ರೇಮಿ ಅರುಣ್.
ಈಗಾಗಲೇ ಬಳ್ಳಾರಿ ಸುತ್ತಮುತ್ತ 50ದಿನಗಳ ಕಾಲ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.
ಚಿತ್ರದಲ್ಲಿ ನಾಯಕನಾಗಿ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ನಟಿಸಿದ್ದಾರೆ. ಇನ್ನುಳಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ ರಾಮಚಂದ್ರ, ಚೆನ್ನಬಸಪ್ಪ, ಸುನಂದಾ ಹೊಸಪೇಟೆ, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ, ಮಂಡ್ಯ ಮಂಜು, ರಾಜೇಶ್ವರಿ, ರಂಜಿತಾ, ಸಿದ್ಧಾಂತ್, ಅಂಕಿತಾ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ.

ಅತಿಥಿ ಪಾತ್ರದಲ್ಲಿ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯವರು, ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ, ಅರ್ಚನಾ ಕೊಟ್ಟಿಗೆ, ಶ್ವೇತಾ ಭಟ್ ನಟಿಸಿದ್ದಾರೆ.
ಇನ್ನು ಚಿತ್ರಕ್ಕೆ ಪ್ರವೀಣ್ ಕುಮಾರ್ ನಿರ್ದೇಶಿಸಿದ್ದು ಒಲವು ಸಿನಿಮಾ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡಿದೆ.






