ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಜಾಬ್ನಲ್ಲಿ ಹಿಂದೆಂದೂ ಕಾಣದ ರೀತಿ ಸೋಲನ್ನು ಕಂಡಿತ್ತು. ಅದರಂತೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಪಿಸಿಸಿ ಆದ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ ಪಡೆದಿದ್ದರು.
ಇಂದು ನೂತನ ಪಿಸಿಸಿ ಅಧ್ಯಕ್ಷರನ್ನಾಗಿ ಶಾಸಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ನನ್ನು ನೂತನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮಾತನಾಡಿದ ವಾರಿಂಗ್ ನಾವು ರಾಜ್ಯದಲ್ಲಿ 3D ಸೂತ್ರವನ್ನು ಪಾಲಿಸಬೇಕಿದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಸಿಧು ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಹಿಂದಿನ ಮುಖ್ಯಮಂತ್ರಿಗಳಾದ ಅಮರೀಂದರ್ ಸಿಂಗ್ ಹಾಗೂ ಚರಣ್ಜಿತ್ ಸಿಂಗ್ ಚನ್ನಿ ಕಾರಣ ಎಂದು ದೂರಿದ್ದಾರೆ.
ಮುಂದುವರೆದು, ನಾನು ಮೊದಲಿಗೆ ನೂತನ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಹಿಂದೆ ನಡೆದ ತಪ್ಪುಗಳು ಮುಂದೆ ಪುನರಾವರ್ತನೆಯಾಗದಂತೆ ನೋಡಿಕೊಳ್ಳಿ. ಪಕ್ಷಕ್ಕೆ ಪುನಶ್ಚೇತನದ ಅವಶ್ಯಕತೆಯಿದೆ ಹಿಂದಿನ ಇಬ್ಬರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮರಳು ಮಾಫಿಯಾಗೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದ್ದಾರೆ.

ಮಾತನಾಡುವ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ರನ್ನು ಹಾಡಿ ಹೊಗಳಿದ ಸಿಧು ಪಂಜಾಬ್ನಲ್ಲಿ ಮಾನ್ ಭ್ರಷ್ಟಾಚಾರದ ವಿರುದ್ದ ಹೋರಾಡಿದರೆ ನಾನು ಅವರನ್ನು ಸದಾ ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಚನ್ನಿ, ಪಕ್ಷದ ಹಾಲಿ/ಮಾಜಿ ಶಾಸಕರು ಹಾಗೂ ಸಂಸದರು ಉಪಸ್ಥಿತರಿದ್ದರು.






