ಕಳೆದ ಕೆಲವು ಕಾಲದಿಂದ ಪಂಜಾಬಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬಣ ರಾಜಕಾರಣ ಹೊಸ ಮಗ್ಗುಲಿಗೆ ಹೊರಳಿಕೊಂಡಿದೆ. ಕೊನೆಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕಳೆದ ತಿಂಗಳು ನಾಲ್ಕು ಜನ ಸಚಿವರು ಹಾಗೂ ಸುಮಾರು ಇಪ್ಪತ್ತೈದು ಶಾಸಕರು ಸಿಎಂ ಸಿಂಗ್ ವಿರುದ್ದ ದೂರುಗಳ ಸುರಿಮಳೆಗೈದಿದ್ದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಶಕ್ತಿ ಅವರಿಗಿಲ್ಲ ಎಂದು ಕಟು ಟೀಕೆ ಮಾಡಿದ್ದರು. ಕಳೆದ ಮೇ ತಿಂಗಳಿನಿಂದಲೂ ಪಂಜಾಬ್ ಕಾಂಗ್ರೆಸ್ ಎಂಬುದು ಸುಪ್ತ ಜ್ವಾಲಾಮುಖಿಯಂತೆ ಕುದಿಯುತ್ತಿತ್ತು. ಇದೀಗ, ಅಮರೀಂದರ್ ವಿರೋಧಿ ಬಣಗಳು ಕಡೆಗೂ ಹೈಕಮಾಂಡ್ ಅನ್ನು ಒಲಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
Also Read: ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ನಾಯಕತ್ವ ಬದಲಾವಣೆಗೆ ಎಐಸಿಸಿ ಮೇಲೆ ಒತ್ತಡ