ಬಿಜೆಪಿಯ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಂಸದ ಸುನೀಲ್ ಜಾಖರ್ರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜೈವೀರ್ ಶೆರ್ಗಿಲ್ರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ವರ್ಷ ಪಂಜಾಬ್ ಕಾಂಗ್ರೆಸ್ನಲ್ಲಿ ಕೇಳಿ ಬಂದ ಬದಲಾವನೆ ಕೂಗಿನಿಂದ ಕಾಂಗ್ರೆಸ್ ತೊರೆದು ಪಂಜಾಬ್ ಲೋಕ್ ಕಾಂಗ್ರೆಸ್(PLC) ಪಕ್ಷವನ್ ಸ್ಥಾಪಿಸಿದ್ದ ಅಮರೀಂದರ್ ಈ ವರ್ಷ ಸೆಪ್ಟೆಂಬರ್ 19ರಂದು ತಮ್ಮ ಪಕ್ಷವನ್ನ ಬಿಜೆಪಿಯಲ್ಲಿ ವಿಲೀನ ಮಾಡಿದ್ದರು.