ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ, ಕನ್ನಡ ಚಿತ್ರರಂಗದ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ಲೋಕಾರ್ಪಣೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಅಂಬಿ ಸ್ಮಾರಕವನ್ನು ಉದ್ಘಾಟಿಸಿದ್ರು. ಜೊತೆಗೆ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ ಕೋರ್ಸ್ ರಸ್ತೆಗೆ ʻರೆಬಲ್ ಸ್ಟಾರ್ ಡಾ.ಎಂ.ಹೆಚ್.ಅಂಬರೀಷ್ ರಸ್ತೆʼ ನಾಮಪಲಕವನ್ನ ಅನಾವರಣಗೊಳಿಸಿದ್ರು.
ಈ ವೇಳೆ ಮಾತ್ನಾಡಿದ ಸಿಎಂ ಬೊಮ್ಮಾಯಿ, ʼಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನ ಗೆದ್ದ ನೇರ, ದಿಟ್ಟ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿʼ ಅಂತ ಹೇಳಿದ್ರು. ರೇಸ್ ಕೋರ್ಸ್ ರಸ್ತೆಯಲ್ಲಿ ಅಂಬರೀಶ್ ಹೆಚ್ಚಾಗಿ ಓಡಾಡ್ತಿದ್ರು. ಅವರ ಅಭಿಮಾನಿಗಳ ಒತ್ತಾಸೆ ಮೇರೆಗೆ ಅಂಬಿ ಅವರ ಹೆಸರು ಇಟ್ಟಿದ್ದೇವೆ. ಅಂಬರೀಶ್ ಅವರದ್ದು ರೀಲ್ & ರಿಯಲ್ ಲೈಫ್ನಲ್ಲೂ ಒಂದೇ ವ್ಯಕ್ತಿತ್ವ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಹೋಗುತ್ತಿತ್ತುʼ ಅಂತ ಸಿಎಂ ಬೊಮ್ಮಾಯಿ ಹೇಳಿದ್ರು. ಇನ್ನು ಈ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ನಟ ರಾಘವೇಂದ್ರ ರಾಜ್ ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಚಿನ್ನೇಗೌಡ ಭಾಗಿಯಾಗಿದ್ರು.
ಇನ್ನು ಅಂಬರೀಶ್ರವರ ಸ್ಮಾರಕ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಅಂಬರೀಶ್ ಅವರ ನೆನಪು ಸದಾ ಕಾಲ ಇರುತ್ತೆ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ಸಾಧಕ. ಹೀಗೆ ಅಂಬರೀಶ್ ಸಾವಿನ ನಂತರವೂ ಬದುಕುತ್ತಿದ್ದಾರೆ. ಅವರ ಸವಿ ನೆನಪಿಗಾಗಿ ಈ ಸ್ಮಾರಕ, ಮ್ಯೂಸಿಯಂ ನಿರ್ಮಾಣಕ್ಕೆ ಅನುದಾನ ನೀಡಲಾಯಿತು. ಇಂದು ಉದ್ಘಾಟನೆ ಮಾಡಿದ್ದು ಸಂತಸ ತಂದಿದೆ’ ಎಂದು ಹೇಳಿದ್ರು.