2023ರ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವನೆ ಎದುರಿಸಲಿರುವ ರಾಜಸ್ಥಾನದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ರಾಷ್ಟ್ರೀಯ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರ ಹೆಣೆಯುವುದರಲ್ಲಿ ತೊಡಗಿವೆ.
ಈಗಾಗಲೇ ಶತಾಯ ಗತಾಯ ಅಧಿಕಾರ ಹಿಡಿಯಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಶನಿವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತವರು ಕ್ಷೇತ್ರ ಜೋಧ್ಪುರದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ(OBC) ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
OBC ಸಭೆ ನಂತರ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಅಮಿತ್ ಶಾ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಮಾವೇಶ ಸ್ಥಳಕ್ಕೆ ಆಗಮಿಸುವ ಮುನ್ನ ಶಾ ಮೊದಲು ಜೈಸಲ್ಮೇರ್ನಲ್ಲಿರುವ ತನೋಟ್ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ದೇವಾಲಯದ ಆವರಣದಲ್ಲಿರುವ ಗಡಿ ಪ್ರವಾಸೋದ್ಯಮ ಇಲಾಖೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಯಾಗಿದೆ.
ಜೋಧ್ಪುರಕ್ಕೆ ಶಾ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಬಿಜೆಪಿ ನಾಯಕರೊಬ್ಬರು ಗೃಹ ಸಚಿವರಿಗೆ ಭರ್ಜರಿ ಸ್ವಾಗತ ನೀಡಲಾಗುವುದು 1,500 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಕೇಸರಿ ಪೇಟವನ್ನು ಧರಿಸಿ ವಿಮಾನ ನಿಲ್ದಾಣದಿಂದ ಸಮಾವೇಶ ಸ್ಥಳಕ್ಕೆ ಬೃಹತ್ ಬೈಲ್ ರ್ಯಾಲಿ ಮೂಲಕ ಸ್ವಾಗತ ನೀಡಲಿದ್ದಾರೆ ಎಂದಿದ್ದಾರೆ.
ಶಾ ಆಗಮನಕ್ಕೂ ಮುನ್ನ ಶುಕ್ರವಾರ ಶುರುವಾದ ಎರಡು ದಿನಗಳ ಕಾರ್ಯಗಾರವನ್ನ ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್ ಯಾದವ್, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರಧ್ಯಕ್ಷ ಕೆ.ಲಕ್ಷ್ಮಣ್ ಉದ್ಘಾಟಿಸಿದ್ದಾರೆ.