ಲೋಕ ಎಲೆಕ್ಷನ್ ಬೆನ್ನಲ್ಲೇ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಕೇಸರಿ ನಾಯಕರಿಗೆ ಸಿಎಂ ಸಿದ್ದು ಕೌಂಟರ್ ಕೊಡ್ತಿದ್ದಾರೆ.
ಕೇಂದ್ರಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
![](https://pratidhvani.com/wp-content/uploads/2024/04/cmdp-1709016261-1024x576.jpg)
ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾಗೆ ಕನ್ನಡಿಗರ ಮತ ಕೇಳಲು ಯಾವ ನೈತಿಗತೆಯೂ ಇಲ್ಲ. ಬರಗಾಲದ ಪರಿಹಾರವಾಗಿ 5 ಪೈಸೆಯೂ ನೀಡಿಲ್ಲ. ಅಮಿತ್ ಶಾ ತಮ್ಮ ಮನೆಯಿಂದ ಪರಿಹಾರ ಕೊಡ್ತಾರಾ…? ಎಂದು ಪ್ರಶ್ನಿಸಿದರು.
ಮೊದಲು ಬರ ಪರಿಹಾರ ನೀಡಿ ನಂತರ ಕರ್ನಾಟಕಕ್ಕೆ ಬರಲಿ. ಕನ್ನಡಿಗರು ಬಿಜೆಪಿಗೆ ಸರಿಯಾಗಿ ಪಾಠ ಕಲಿಸ್ತಾರೆ ಎಂದು ಗುಡುಗಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ವಕ್ತಾರರ ರೀತಿ ಮಾತನಾಡುತ್ತಿದ್ದಾರೆ. ಪರಿಹಾರ ನೀಡದವರನ್ನ ಹೆಚ್.ಡಿಕೆ ಸಮರ್ಥಿಸಿಕೊಳ್ತಾರೆ ಎಂದು ಕಿಡಿಕಾರಿದರು.
ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ ಹೇಳಿಕೆಗೆ ಸಿಎಂ ವ್ಯಂಗ್ಯವಾಡಿದ್ರು.ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು.
ಈಗ ದೇವರು ಎಂದರೆ ಆಗ ಯಾರಿದ್ದರು.ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ.
![](https://pratidhvani.com/wp-content/uploads/2024/04/siddaramaiah-amit-shah-1707637250-1024x576.jpg)
ಈ ಬಾರಿ ಜೆಡಿಎಸ್ ನವರು ಮೂರು ಮೂರರಲ್ಲೂ ಸೋಲುತ್ತಾರೆ.ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ.ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದರ ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ.
ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು.
ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ.ಪ್ರಜ್ವಲ್ ನನ್ನು ಸೋಲಿಸುತ್ತೇನೆ.ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ.
ಪ್ರಜ್ವಲ್ ಸೋಲುತ್ತಾನೆ ಎಂದು
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
![](https://pratidhvani.com/wp-content/uploads/2024/04/Siddaramaiah-1-4.webp)