• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಮೃತ ಮಹೋತ್ಸವ ಜಾಹೀರಾತಿನಿಂದ ನೆಹರೂಗೆ ಕೊಕ್, ಸಾವರ್ಕರ್‌ಗೆ ಸ್ಥಾನ : ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
August 14, 2022
in ಕರ್ನಾಟಕ, ದೇಶ
0
ಅಮೃತ ಮಹೋತ್ಸವ ಜಾಹೀರಾತಿನಿಂದ ನೆಹರೂಗೆ ಕೊಕ್, ಸಾವರ್ಕರ್‌ಗೆ ಸ್ಥಾನ : ರಾಜ್ಯ ಸರ್ಕಾರದ ವಿರುದ್ಧ ಸಾರ್ವಜನಿಕರ ಆಕ್ರೋಶ
Share on WhatsAppShare on FacebookShare on Telegram

ADVERTISEMENT

75ನೇ ವರ್ಷದ ಸ್ವಾತಂತ್ರ್ಯ ವರ್ಷದ ಅಂಗವಾಗಿ ಜಾಹೀರಾತು ನೀಡಿಕೆ ವೇಳೆ ದೇಶದ ಪ್ರಪ್ರಥಮ ಪ್ರಧಾನಿ, ಸ್ವಾತಂತ್ರ್ಯ ಹೋರಾಟಗಾರಾದ ನೆಹರೂ ಅವರ ಭಾವಚಿತ್ರವನ್ನು ಕೈಬಿಟ್ಟು ರಾಜ್ಯ ಸರ್ಕಾರ ಈಗ ವಿವಾದಕ್ಕೆ ಸಿಲುಕಿದೆ. ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ನೆಹರೂ ಅವರ ಚಿತ್ರವನ್ನು ಉದ್ದೇಶಪೂರ್ವಕ ಕೈಬಿಡಲಾಗಿದೆ ಎಂದು ಸಮಾಜಿಕ ಜಾಲತಾಣದಲ್ಲಿ ಈಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾಗಿ ಬರೋಬ್ಬರಿ 75 ವರ್ಷ. ಈ ಏಳು ದಶಕಗಳ ಅವಯಲ್ಲಿ ದೇಶ ಸಾಸಿರುವ ಪ್ರಗತಿ ಅನೇಕ. ಪ್ರತಿವರ್ಷ ಆಗಸ್ಟ್ 15ರಂದು ನಾವು ಸಡಗರದಿಂದ ಸ್ವಾತಂತ್ರ್ಯೋತ್ಸವ ಆಚರಿಸುತ್ತೇವೆ ಮತ್ತು ಈ ಸಂಭ್ರಮಾಚರಣೆಗೆ ಕಾರಣರಾದವರನ್ನು ನೆನಪು ಮಾಡಿಕೊಳ್ಳುತ್ತೇವೆ. ಆದರೆ ಇಂದಿನ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ದೀರ್ಘ ಕಾಲ ಪ್ರಧಾನಿಯಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ನೆಹರೂ ಅವರ ಭಾವಚಿತ್ರವನ್ನು ಸ್ವತಂತ್ರ್ಯ ಅಮೃತಮಹೋತ್ಸವದ ಜಾಹೀರಾತಿನಲ್ಲಿ ನೆನಪಿಸಿಕೊಳ್ಳದೆ ಇರುವುದು ವಿಷಾದಕರ ವಿಷಯವೇ ಹೌದು.

ಜಾಹೀರಾತಿನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರಬೋಸ್‌, ನೆಹರೂ ಆಡಳಿತದಲ್ಲಿ ಆರ್ ಎಸ್ ಎಸ್ ಅನ್ನು ನಿಷೇಧಿಸಬೇಕು ಎಂದು ಸಲಹೆ ನೀಡಿದ ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಮಾಜಿ ಪ್ರಧಾನಿ ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಸ್ವಾತಂತ್ರ್ಯ ಹೋರಾಟಗಾರರಾದ ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಸಾವರ್ಕರ್‌ ಫೋಟೋವನ್ನು ಮುದ್ರಿಸಲಾಗಿದೆ.

ರಾಷ್ಟ್ರ ನಾಯಕರ ಫೋಟೋದ ಸಾಲಿನಲ್ಲಿ ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿದ ಸಾವರ್ಕರ್ ಫೋಟೋವನ್ನು ಹಾಕಲಾಗಿದೆ, ‘ಕ್ರಾಂತಿಕಾರಿ’ ಎಂಬ ಬಿರುದನ್ನು ಪತ್ರಿಕೆಯಲ್ಲಿ ಸಾವರ್ಕರ್ ಗೆ ನೀಡಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ನೆಹರೂ ಅವರ ಚಿತ್ರವನ್ನು ಹಾಕಿದರೆ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂಬ ಕಾರಣದಿಂದಲೊ ಏನೊ ಅವರು ಮಾಜಿ ಪ್ರಧಾನಿ ನೆಹರೂ ಅವರ ಫೋಟೊ ಇಲ್ಲದೆ ಜಾಹೀರಾತು ನೀಡುತ್ತಿದ್ದಾರೆ. ಇದು ಬಿಜೆಪಿ ಕಾರ್ಯಕ್ರಮ ಅಲ್ಲ , ಇದು ಸರ್ಕಾರದ ಕಾರ್ಯಕ್ರಮ. ಹಾಗಾಗಿ ಕರ್ನಾಟಕದಲ್ಲಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಫೋಟೊವನ್ನು ಹಾಕುವುದು ಸೂಕ್ತ ಎಂಬುದು ಜನ ಸಾಮಾನ್ಯರ ಅಭಿಪ್ರಾಯ.

ಈ ಕುರಿತು ಸಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಸರ್ಕಾರ ತನ್ನ ಪ್ರೊಪಗಂಡಾ ವಿಚಾರ ಬಂದಾಗ ಗಟಾರಕ್ಕಾದರೂ ಇಳಿಯಬಲ್ಲದು ಅನ್ನುವುದಕ್ಕೆ ನೆಹರೂ ಅವರನ್ನು ಹೊರತುಪಡಿಸಿ ಕೊಟ್ಟ ಈ ಜಾಹೀರಾತೇ ಸಾಕ್ಷಿ!. ಕೀಲಿ ಬೊಂಬೆ ಬೊಮ್ಮಾಯಿಯವರೇ, ನೀವು ನಿಮ್ಮ ಗಟಾರದ ಪಕ್ಷ ತಿಪ್ಪರಲಾಗ ಹಾಕಿದರೂ ಇತಿಹಾಸ ಬದಲಿಸಲಾರಿರಿ. ಸ್ವಾತಂತ್ರ್ಯ ಹೋರಾಟ ಮಾಡಿದ ಪಕ್ಷ ಎನ್ನಿಸಿಕೊಳ್ಳಲಾರಿರಿ! ಅಂದಹಾಗೆ ಇಷ್ಟೊಂದು ಸುಳ್ಳು ಹೇಳಿ ಯಾವ ಘನಕಾರ್ಯ ಮಾಡಲಿದ್ದೀರಿ?! ಎಂದು ಪ್ರಶ್ನಿಸಿದ್ದಾರೆ.

ಮತ್ತೊಬ್ಬರು, ಇದೆಲ್ಲಾ ಒಂದು ಕಡೆ ಇರ್ಲಿ, ಇವ್ರು ಗಾಂಧಿ ಫೋಟೋವನ್ನು ಮೊದಲ ಸಾಲಲ್ಲೇ ಮೊದಲನೇ ಫೋಟೋ ಹಾಕಿರೋದು ನೋಡಿ ಆಶ್ಚರ್ಯ ಆಯ್ತು. ಒಂದು ಕಡೆಯಿಂದ ಗಾಂಧಿಯನ್ನು ಬೈಯ್ಯೊದು, ಇನ್ನೊಂದು ಕಡೆ ಗಾಂಧಿಯನ್ನು ಹೊಗಳುವುದು. ತಿಪ್ಪೆ ಸಾರಿಸುವ ಕೆಲಸ ಚೆನ್ನಾಗಿ ಮಾಡ್ತಿದ್ದಾರೆ! ಎಂದಿದ್ದಾರೆ.

ಮತ್ತೋರ್ವ ನೆಟ್ಟಿಗರು, ಬೊಮ್ಮಾಯಿ ಸರ್ಕಾರ ನೆಹರೂ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಪಟ್ಟಿಯಿಂದ ದೂರವಿಡಬಹುದೇ ಹೊರತು ನನ್ನ ಹೃದಯದಿಂದಲ್ಲ ಎಂದು ಬರೆದುಕೊಂಡಿದ್ದಾರೆ.

Tags: BJPCongress Partyಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಈಜುಡುಗೆ ಧರಿಸಿ ಇನ್ಸ್ಟಗ್ರಾಮಿನಲ್ಲಿ ಫೋಟೋ ಹಾಕಿದ ಅಧ್ಯಾಪಕಿಯನ್ನು ಹೊರ ಹಾಕಿದ ಕಾಲೇಜು ಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Next Post

ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ

Related Posts

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

by ಪ್ರತಿಧ್ವನಿ
January 18, 2026
0

ಬೆಂಗಳೂರು : ಇಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ (one-day cricket) ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ( Shubman Gill)...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post
ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ

ಪೊಲೀಸ್‌ ಅಧಿಕಾರಿಯ ಮೇಲಿನ ಹಗೆತನಕ್ಕೆ ದೇವಾಲಯಕ್ಕೆ ಮಾಂಸದ ತುಂಡು ಎಸೆದ ಚಂಚಲ್‌ ತ್ರಿಪಾಠಿ ಬಂಧನ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada