ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ, ಬಜರಂಗ ದಳವು ಕೋಮು ಸೌಹಾರ್ದತೆಗೆ ಭಂಗ ತಂದರೆ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಕೋಮು ಸಂಘಟನೆ ನಿಷೇಧಿಸಲಾಗುವುದು ಅಂತ ಕಾಂಗ್ರೆಸ್ ತನ್ನ ಹೇಳಿತ್ತು. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿದ್ದು, ʻಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಮೂರ್ಖತನಕ್ಕೆ ಒಂದು ಉದಾಹರಣೆ ಅಂತ ಹೇಳಿದ್ರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ಮಾಡಿ ಮಾತನಾಡಿದ ಅವರು, ʻಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ ಮೇಲೆ ನಿಷೇಧ ಹೇರುವ ಭರವಸೆ ನೀಡಿರುವುದು ಮೂರ್ಖತನಕ್ಕೆ ನಿದರ್ಶನ. ಆದರೆ, ಕಾಂಗ್ರೆಸ್ಸಿಗೆ ಇದು ಚುನಾವಣಾ ವಿಷಯವಾಗಿದೆ. ಕರ್ನಾಟಕವು ಹನುಮಂತನ ಜನ್ಮಸ್ಥಳವಾಗಿದೆ. ಕಾಂಗ್ರೆಸ್ ನಾಯಕರು ಅಲ್ಲಿ, ಇಲ್ಲಿ ಹೇಳಿಕೆ ನೀಡುತ್ತಿಲ್ಲ, ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳುತ್ತಿದೆ. ಇದು ಮೂರ್ಖತನಕ್ಕೆ ನಿದರ್ಶನ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.