• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ರಾಜ್ಯ ಬಜೆಟ್​ನಲ್ಲಿ ಸಿಎಂ ಕೊಟ್ಟ ವಿಶೇಷ ಕೊಡುಗೆಗಳ ವಿಶ್ಲೇಷಣೆ..!

ಕೃಷ್ಣ ಮಣಿ by ಕೃಷ್ಣ ಮಣಿ
February 18, 2023
in ಅಂಕಣ
0
ಕರ್ನಾಟಕ ಬಜೆಟ್ 2023: ಪದವಿವರೆಗೆ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ- ಸಿಎಂ ಘೋಷಣೆ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಬಜೆಟ್​ ಮಂಡನೆ ಆಗಿದೆ. ಮುಂದಿನ ಚುನಾವಣೆಗೆ ಹೋಗುತ್ತಿರುವ ಈ ಹೊತ್ತಿನಲ್ಲಿ ಬಿಜೆಪಿ ಸರ್ಕಾರ ಬಜೆಟ್​ ಮಂಡನೆ ಮಾಡಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಎಲ್ಲಾ ವರ್ಗವನ್ನು ಮೆಚ್ಚಿಸಲು ಬಜೆಟ್​ನಲ್ಲಿ ಸಾಕಷ್ಟು ಸರ್ಕಸ್​ ಮಾಡಿದ್ದಾರೆ. 8 ಪ್ರಮುಖ ಹೊಸ ಘೋಷಣೆಗಳನ್ನು ಮಾಡಿರುವ ಬಸವರಾಜ ಬೊಮ್ಮಾಯಿ, ಸರ್ಕಾರಿ ಕಾಲೇಜಿನ ಪಿಯು, ಡಿಗ್ರಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಜಾರಿ ಮಾಡ್ತೇವೆ ಎಂದಿದ್ದಾರೆ. ಆದರೆ ಸರ್ಕಾರಿ ಕಾಲೇಜಿನಲ್ಲಿ ಫೀ ಎಷ್ಟಿದೆ ಎನ್ನುವುದನ್ನು ಜನರೇ ಅರ್ಥ ಮಾಡಿಕೊಳ್ಳಬೇಕಿದೆ. ಸರ್ಕಾರಿ ಶಾಲಾ-ಕಾಲೇಜುಗಳ ಮಕ್ಕಳಿಗೆ 1000 ಬಸ್ ನೀಡಲು ಹೊಸ ಯೋಜನೆ ಮಾಡಿದ್ದೇವೆ, ಅದಕ್ಕಾಗಿ 100 ಕೋಟಿ  ನೀಡಿದ್ದೇನೆ ಎಂದಿದ್ದಾರೆ. ಆದರೆ ಇರುವ ಬಸ್​ಗಳಲ್ಲಿ ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋಗುವುದನ್ನು ಮೊದಲು ತಡೆದರೆ ಉತ್ತಮ.

ADVERTISEMENT

ರೈತರಿಗೆ ಭೂಸಿರಿ ಯೋಜನೆ ಜಾರಿ ಮಾಡ್ತೇವೆ ಎಂದಿದ್ದು, ಕಿಸಾನ್ ಕಾರ್ಡ್ ರೈತರಿಗೆ 10 ಸಾವಿರ ಸಹಾಯಧನ ನೀಡ್ತೇವೆ ಎಂದಿದ್ದಾರೆ. ಆದರೆ ರಸಗೊಬ್ಬರ ದರ ಗಗನಕ್ಕೇರಿದ್ದು, ದರ ಇಳಿಕೆ ಬಗ್ಗೆ ಮಾತನಾಡಿಲ್ಲ. ಹಳ್ಳಿ ಮುತ್ತು ಯೋಜನೆ ಮಾಡಲಿದ್ದು, CET ಯಲ್ಲಿ ಆಯ್ಕೆಯಾದ 500 ವಿದ್ಯಾರ್ಥಿಗಳಿಗೆ ಉಚಿತ ವೃತ್ತಿಪರ ಕೋರ್ಸ್​ ಜಾರಿಗೆ ನಿರ್ಧಾರ ಮಾಡಿದ್ದಾರೆ. ಆದರೆ ಸರ್ಕಾರದ ಕಾಲೇಜುಗಳಲ್ಲಿ ಶಿಕ್ಷಣ ಮೌಲ್ಯ ಹೇಗಿದೆ..? ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ, ವೇತನ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ವಾತ್ಸಲ್ಯ ಯೋಜನೆಯಲ್ಲಿ ಹಳ್ಳಿಗಾಡಿನ 6 ವರ್ಷದ ಮಕ್ಕಳಿಗೆ  ವರ್ಷಕ್ಕೆ 2 ಸಲ ಉಚಿತ ಆರೋಗ್ಯ ತಪಾಸಣೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು ಗೃಹಿಣಿ ಶಕ್ತಿ ಯೋಜನೆಯಲ್ಲಿ ಭೂರಹಿತ ಮಹಿಳಾ ಕಾರ್ಮಿಕರಿಗೆ ವರ್ಷಕ್ಕೆ 6 ಸಾವಿರ ಸಹಾಯಧನ, 1 ಲಕ್ಷ ಗೃಹಿಣಿಯರಿಗೆ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡ್ತೇವೆ ಎಂದಿದ್ದಾರೆ. ಆದರೆ ಗೃಹಿಣಿಯರು ಗ್ಯಾಸ್ ದರ ಭರಿಸಲಾಗದೆ ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಕಿಂಚಿತ್ತು ಮಾತನಾಡಿಲ್ಲ.

ನಮ್ಮ ನೆಲೆ ಯೋಜನೆ ಜಾರಿ ಮಾಡುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದು, ಗೃಹಮಂಡಳಿಯಿಂದ ಆರ್ಥಿಕ ದುರ್ಬಲ ವರ್ಗದವರಿಗೆ 10 ಸಾವಿರ ನಿವೇಶನ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಕಳೆದ ಮೂರು ವರ್ಷದಲ್ಲಿ ರಾಜ್ಯ ಸರ್ಕಾರ ಎಷ್ಟು ಜನರಿಗೆ ವಸತಿ ಯೋಜನೆ ಕೊಟ್ಟಿದ್ದೇವೆ ಎನ್ನುವ ಮಾಹಿತಿ ಹೇಳಿದ್ದರೆ, ಈ ಘೋಷಣೆಯನ್ನು ಒಪ್ಪಿಕೊಳ್ಳಬಹುದು. ಕಲಿಕೆ ಜೊತೆಗೆ ಕೌಶಲ್ಯ ತರಬೇತಿ ಕೊಡ್ತೇವೆ ಎಂದಿರುವ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗಳಿಗೆ ಕೈಗಾರಿಕಾ ಆದ್ಯತಾ ಹಾಗೂ ಉದ್ಯಮಶೀಲ ತರಬೇತಿ ನೀಡ್ತೇವೆ ಎಂದಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ.

ರೈತರಿಗೆ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಆದರೆ ಯಾವುದೇ ಸಹಕಾರ ಸಂಘದಿಂದ 50 ಸಾವಿರಕ್ಕಿಂತ ಹೆಚ್ಚಿನ ಸಾಲ ಕೊಡ್ತಿಲ್ಲ ಎನ್ನುವುದು ರೈತರನ್ನು ಕೇಳಿ ನೋಡಿದ್ರೆ ಗೊತ್ತಾಗುತ್ತದೆ. ಅಷ್ಟು ಮಾತ್ರವಲ್ಲದೆ 50 ಸಾವಿರ ಸಾಲ ಕೊಡಲು ಅಧಿಕಾರಿಗಳ ಕಿರುಕುಳ ಎಷ್ಟಿದೆ ಎನ್ನುವುದನ್ನು ಅನ್ನದಾತರನ್ನು ಕೇಳಿದ್ರೆ ಸತ್ಯ ಗೊತ್ತಾಗುತ್ತದೆ. BPL ಪಡಿತರ ಚೀಟಿ ಹೊಂದಿದವರಿಗೆ ನೀಡುತ್ತಿರುವ ಅಕ್ಕಿಯನ್ನು 5 ಕೆಜಿಯಿಂದ 6 ಕೆಜಿಗೆ ಹೆಚ್ಚಳ ಮಾಡ್ತೇವೆ ಎಂದಿದ್ದಾರೆ. ಆದರೆ ಕಳೆದ ನಾಲ್ಕೈದು ತಿಂಗಳಿಂದ  5 ಕೆಜಿ ಅಕ್ಕಿ ಹೊರತುಪಡಿಸಿ ಗೋದಿ, ಸಕ್ಕರೆ, ಬೇಳೆ ಯಾವುದನ್ನೂ ನೀಡದಿರುವುದು ಯಾಕೆ ಎನ್ನುವುದನ್ನು ಸಿಎಂ ಬಹಿರಂಗ ಮಾಡಬೇಕಿದೆ.

8 ಜಿಲ್ಲೆಗಳಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಮಾಡ್ತೇವೆ ಎಂದು ಬಜೆಟ್​’ನಲ್ಲಿ ಘೋಷಣೆ ಮಾಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣ ಮಾಡುವುದಕ್ಕೆ ತಡೆಯಾಗಿರುವ ಖಾಸಗಿ ಆಸ್ಪತ್ರೆ ಯಾವುದು ಎನ್ನುವುದನ್ನು ಬಹಿರಂಗ ಮಾಡಬೇಕಿದೆ. ಇನ್ನು ರಾಜ್ಯದಲ್ಲಿ 19 ಹೊಸ ESI ಆಸ್ಪತ್ರೆಗಳ ನಿರ್ಮಾಣ ಮಾಡುವ ಘೋಷಣೆ ಮಾಡಿದ್ದಾರೆ. ಆದರೆ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವಧಿಯಲ್ಲಿ ನಿರ್ಮಾಣ ಆಗಿರುವ ಹೈಟೆಕ್​ ಇಎಸ್​’ಐ ಆಸ್ಪತ್ರೆಯನ್ನು ಉಪಯೋಗ ಮಾಡಿಕೊಳ್ಳದೆ ಬಿಟ್ಟಿರುವುದು ಯಾಕೆ..? ಎನ್ನುವುದನ್ನು ಬಹಿರಂಗ ಮಾಡಬೇಕಿದೆ. ಕ್ಯಾನ್ಸರ್ ಪತ್ತೆಗೆ ಫಸ್ಟ್​​ ಟೈಂ ಜೀವಸುಧೆ ಲ್ಯಾಬ್ ಹಾಗು ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಕಲಬುರಗಿಯಲ್ಲಿ IVF ಸೆಂಟರ್​’ಗಳನ್ನು ತೆರೆಯುವ ಘೋಷಣೆ ಮಾಡಿರುವುದು ಉತ್ತಮ ಬೆಳವಣಿಗೆ ಎನ್ನಬಹುದು. ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಹಾಯಕರು, ಗ್ರಾಮ ಪಂಚಾಯ್ತಿ ಸದಸ್ಯರು, ಅತಿಥಿ ಶಿಕ್ಷಕರು, ಲೈಬ್ರರಿ ಸಿಬ್ಬಂದಿಯ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ ಎನ್ನುವುದು ಮೂಗಿಗೆ ತುಪ್ಪ ಸವರುವ ಕೆಲಸ ಎನ್ನಬಹುದು.

Tags: cm basavaraj bommaikarnataka budget-2023ಬಿಜೆಪಿ
Previous Post

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ

Next Post

ನೆಹರು ದ್ವೇಷಿಗಳೆˌ ಇದನ್ನು ಓದಿ

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
ನೆಹರು ದ್ವೇಷಿಗಳೆˌ ಇದನ್ನು ಓದಿ

ನೆಹರು ದ್ವೇಷಿಗಳೆˌ ಇದನ್ನು ಓದಿ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada