• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಾಯಿ ಭೇಟಿಗೆ ಆನಂದ್‌ ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

Any Mind by Any Mind
March 2, 2022
in ದೇಶ
0
ತಾಯಿ ಭೇಟಿಗೆ ಆನಂದ್‌  ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ಎಲ್ಗರ್‌ ಪರಿಷತ್‌ ಪ್ರಕರಣ ಹಾಗೂ ಮಾವೋವಾದಿಗಳ ಜೊತೆಗೆ ಸಂಪರ್ಕ ಇಟ್ಟುಕೊಂಡ ಆರೋಪದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್‌ ವಾದಿ ಚಿಂತಕ ಆನಂದ್‌ ತೇಲ್ತುಂಬ್ಡೆ ಅವರು ತಮ್ಮ ತಾಯಿಯನ್ನು ಭೇಟಿಯಾಗಲು ಬಾಂಬೆ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ.

ADVERTISEMENT

ಎಲ್ಗರ್‌ ಪರಿಷತ್‌ ಪ್ರಕರಣದ ವಿಚಾರಣಾಧೀನ ಖೈದಿಯಾಗಿರುವ ತೇಲ್ತುಂಬ್ಡೆ ಅವರನ್ನು ಸದ್ಯ ಮುಂಬೈಯ ತಲೋಜಾ ಜೈಲಿನಲ್ಲಿ ಇರಿಸಲಾಗಿದ್ದು, ಕಳೆದ ನವೆಂಬರ್‌ನಲ್ಲಿ ತನ್ನ ಸಹೋದರ ಮಿಲಿಂದ್‌ ತೇಲ್ತುಂಬೆ ಮೃತಪಟ್ಟ ಹಿನ್ನೆಲೆಯಲ್ಲಿ ತನ್ನ ಭೇಟಿಗೆ ಅವಕಾಶ ಕೋರಿ ಅರ್ಜಿ ಹಾಕಿದ್ದರು.  

ತೇಲ್ತುಂಬೆ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್‌ ಬಿ ಶುಕ್ರೆ ಹಾಗೂ ಜಿಎ ಸನಪ್‌ ಅವರಿರುವ ನ್ಯಾಯಪೀಠವು, ಮಾರ್ಚ್‌ 8 ರಿಂದ 10 ರ ನಡುವೆ ಎರಡು ದಿನಗಳ ಕಾಲ ತಾಯಿಯನ್ನು ಭೇಟಿಯಾಗಲು ಅನುಮತಿ ನೀಡಿದೆ.

ಆದರೆ, ತೇಲ್ತುಂಬ್ಡೆ ಅರ್ಜಿಗೆ ಆಕ್ಷೇಪ ಸಲ್ಲಿಸಿದ್ದ ಎನ್‌ಐಎ, ಮೃತಪಟ್ಟ ಮಿಲಿಂದ್‌ ತೇಲ್ತುಂಬ್ಡೆ ಒಬ್ಬ ಮಾವೋವಾದಿ ನಾಯಕ, ಅವರು ಹಲವಾರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ತೇಲ್ತುಂಬ್ಡೆ ಅರ್ಜಿಯನ್ನು ವಜಾಗೊಳಿಸಲು ಕೇಳಿತ್ತು.

ಆದರೆ, ಎನ್‌ಐಎ ಆಕ್ಷೇಪವನ್ನು ತಳ್ಳಿ ಹಾಕಿರುವ ನ್ಯಾಯಪೀಠವು, ʼಮನುಷ್ಯನೊಬ್ಬನ ಸಾವಾಗಿದೆ. ಸಾವು ಸಾವೇ, ಅವರ (ಮಿಲಿಂದ್‌ ತೇಲ್ತುಂಬ್ಡೆ) ವಿರುದ್ಧ ಆರೋಪಳಿರಬಹುದು, ಅವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಹುದು, ಏನೇ ಆದರೂ, ಅವರು ಅರ್ಜಿದಾರರ (ಆನಂದ್‌ ತೇಲ್ತುಂಬ್ಡೆಯ) ಸಹೋದರರೇ ಆಗಿದ್ದಾರೆ ಎಂದು ಹೇಳಿದೆ.

ತೇಲ್ತುಂಬ್ಡೆ ಅವರು ಮಾರ್ಚ್ 8 ಮತ್ತು 10 ರ ನಡುವೆ ಹಗಲಿನಲ್ಲಿ ಪೊಲೀಸ್ ಬೆಂಗಾವಲು ಜೊತೆಯಲ್ಲಿ ತಮ್ಮ ತಾಯಿಯನ್ನು ಭೇಟಿ ಮಾಡಬಹುದು ಹಾಗೂ ಬೆಂಗಾವಲು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

“ಅರ್ಜಿದಾರರಿಗೆ ಮಾರ್ಚ್ 8 ಮತ್ತು 9 ರಂದು ಚಂದ್ರಾಪುರದಲ್ಲಿ ಅವರ ತಾಯಿಯನ್ನು ಭೇಟಿ ಮಾಡಲು ಅವಕಾಶವಿದೆ. ಅವರ ತಾಯಿಯನ್ನು ಭೇಟಿ ಮಾಡುವ ಉದ್ದೇಶವನ್ನು ಸಾಧಿಸಲು, ಅವರನ್ನು ಪೊಲೀಸ್ ಬೆಂಗಾವಲುಗಳೊಂದಿಗೆ ಸೂಕ್ತ ಬಂದೋಬಸ್ತ್‌ನೊಂದಿಗೆ ಕರೆದೊಯ್ಯಬೇಕು. ಆದ್ದರಿಂದ ಮಾರ್ಚ್ 8 ಬೆಳಿಗ್ಗೆ ಅಥವಾ ಮಧ್ಯಾಹ್ನದ ವೇಳೆಗೆ ಚಂದ್ರಾಪುರಕ್ಕೆ ತಲುಪಬಹುದು. ನಂತರ, ಅರ್ಜಿದಾರರು ಸರಿಯಾದ ಸಮಯದಲ್ಲಿ ಮಾರ್ಚ್ 10 ರಂದು ಪೋಲೀಸ್ ಬೆಂಗಾವಲು ಜೊತೆಗೆ ಚಂದ್ರಾಪುರವನ್ನು ಬಿಡುತ್ತಾರೆ. ಹಾಗೂ, ಮಾರ್ಚ್ 10 ರಂದು ಹೊರಡುವ ಮೊದಲು ಸ್ವಲ್ಪ ಸಮಯ ಲಭ್ಯವಿದ್ದರೆ ಹಾಗೂ ಸಾಧ್ಯವಾದರೆ ಅರ್ಜಿದಾರರು ಮತ್ತೆ ತನ್ನ ತಾಯಿಯನ್ನು ಭೇಟಿಯಾಗಲು ಅನುಮತಿಸಬೇಕು” ಎಂದು ನ್ಯಾಯಪೀಠ ಆದೇಶಿಸಿದೆ.

Tags: BJPBombay High courtCongress Partyಆನಂದ್‌ ತೇಲ್ತುಂಬೆನರೇಂದ್ರ ಮೋದಿಬಾಂಬೆ ಹೈಕೋರ್ಟ್ಬಿಜೆಪಿ
Previous Post

Ukraine Vs Russia | ರಷ್ಯಾ ಸೇನೆಯೊಂದಿಗೆ ಸೆಣಸಾಡಲು No ಎಂದ ಜೋ ಬಿಡನ್!

Next Post

ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
Next Post
ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!

ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada