ಭೀಮಾ ಕೋರೆಗಾಂವ್ ಹತ್ಯಾಕಾಂಡದ ಪ್ರಮುಖ ಆರೋಪಿ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಬಾಂಡ್ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ NIA ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿರುವ ಕಾರಣ ಹೈ ಕೋರ್ಟ್ ನೀಡಿರುವ ಆದೇಶಕ್ಕೆ ಒಂದು ವಾರ ತಡೆ ನೀಡಿದೆ.