• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭ್ರಷ್ಟಾಚಾರ ಆರೋಪ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ!

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ದೇಶ
0
ಭ್ರಷ್ಟಾಚಾರ ಆರೋಪ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ!
Share on WhatsAppShare on FacebookShare on Telegram

  ಭ್ರಷ್ಟಾಚಾರ ಮಾಡಿದ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ.

ADVERTISEMENT

ಚಂದ್ರಬಾಬು ನಾಯ್ಡು ಅವರು ಅಧಿಕಾರಾವಧಿಯಲ್ಲಿ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ಸ್ಥಾಪಿಸಲಾಗಿದ್ದ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದು, ಇದೇ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯ ಅಧಿಕಾರಿಗಳು ಶನಿವಾರ ಮುಂಜಾನೆ ನಾಯ್ಡು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅದಕ್ಕೂ ಮುನ್ನ ಹೈಡ್ರಾಮವೇ ನಡೆದಿದ್ದು, ತಡರಾತ್ರಿ ವಾರೆಂಟ್‌ ಜೊತೆ ಬಂದ ಅಧಿಕಾರಿಗಳೊಂದಿಗೆ ನಾಯ್ಡು ಬೆಂಬಲಿಗರು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

#WATCH | Criminal Investigation Department (CID) arrest former Andhra Pradesh CM and TDP chief N Chandrababu Naidu.

(Video Source: TDP) pic.twitter.com/W2KN3BDUjY

— ANI (@ANI) September 9, 2023

 ಪೊಲೀಸರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ ಎಂದು ನಾಯ್ಡು ಆರೋಪಿಸಿದ್ದಾರೆ. “ನನ್ನ ಹೆಸರು ಎಲ್ಲಿದೆ ಎಂದು ನನಗೆ ತೋರಿಸಿ. ಮೂಲಭೂತ ಸಾಕ್ಷ್ಯಗಳಿಲ್ಲದೆ ಅವರು ನನ್ನನ್ನು ಹೇಗೆ ಬಂಧಿಸುತ್ತಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರವನ್ನು ಮಾಡಿಲ್ಲ. ಯಾವುದೇ ಸರಿಯಾದ ಮಾಹಿತಿಯಿಲ್ಲದೆ ಸಿಐಡಿ ನನ್ನನ್ನು ಬಂಧಿಸಿದೆ ಎಂದು ನಾಯ್ಡು ಹೇಳಿದರು.

“ನಾನು ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ಮಾಡಿಲ್ಲ. ಯಾವುದೇ ಸರಿಯಾದ ಮಾಹಿತಿಯಿಲ್ಲದೆ ಸಿಐಡಿ ನನ್ನನ್ನು ಬಂಧಿಸಿದೆ. ಸಾಕ್ಷ್ಯವನ್ನು ತೋರಿಸಲು ನಾನು ಅವರನ್ನು ಕೇಳಿದೆ ಆದರೆ ಅವರು ತೋರಿಸಲು ನಿರಾಕರಿಸಿದರು. ನನ್ನ ಪಾತ್ರವಿಲ್ಲದೆ ಎಫ್‌ಐಆರ್‌ಗೆ ನನ್ನ ಹೆಸರನ್ನು ಲಗತ್ತಿಸಿದ್ದಾರೆ ” ಎಂದು ನಾಯ್ಡು ಹೇಳಿದ್ದಾರೆ.

ಟಿಡಿಪಿ ಮುಖ್ಯಸ್ಥರನ್ನು ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಬೆಳಿಗ್ಗೆ 6 ಗಂಟೆಗೆ ಜ್ಞಾನಪುರಂನಲ್ಲಿರುವ ಆರ್ ಕೆ ಫಂಕ್ಷನ್ ಹಾಲ್‌ನಿಂದ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಮುಂಜಾನೆ, ಆಪಾದಿತ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನ ವಾರಂಟ್ ಜಾರಿಯಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹಿರಿಯ ನಾಯಕನ ವಿರುದ್ಧ ತಡರಾತ್ರಿ ಪೊಲೀಸರು ಕ್ರಮ ಕೈಗೊಂಡಿರುವುದನ್ನು ಪಕ್ಷದ ಮುಖಂಡರು ಖಂಡಿಸಿದ್ದಾರೆ.

Tags: AndhraArrestCopcorruption caseN Chandrababu NaiduTDP
Previous Post

12 ಹಾಲಿ ಬಿಜೆಪಿ ಸಂಸದರಿಗೆ ಕೈತಪ್ಪಲಿದೆಯಾ ಟಿಕೆಟ್.!?

Next Post

ಖಾಲಿಸ್ತಾನಿ ಉಗ್ರವಾದಕ್ಕೆ ಕೊನೆ ಹಾಡಲು ಭಾರತದೊಂದಿಗೆ ಕೆಲಸ: ಯುಕೆ ಪ್ರಧಾನಿ ರಿಷಿ ಸುನಕ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಖಾಲಿಸ್ತಾನಿ ಉಗ್ರವಾದಕ್ಕೆ ಕೊನೆ ಹಾಡಲು ಭಾರತದೊಂದಿಗೆ ಕೆಲಸ: ಯುಕೆ ಪ್ರಧಾನಿ ರಿಷಿ ಸುನಕ್

ಖಾಲಿಸ್ತಾನಿ ಉಗ್ರವಾದಕ್ಕೆ ಕೊನೆ ಹಾಡಲು ಭಾರತದೊಂದಿಗೆ ಕೆಲಸ: ಯುಕೆ ಪ್ರಧಾನಿ ರಿಷಿ ಸುನಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada