• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪೆಗಾಸಸ್ : ಹಿಂದಿನ ಟಿಡಿಪಿ ಸರ್ಕಾರದ ವಿರುದ್ಧ ತನಿಖೆಗೆ ಆಂಧ್ರ ವಿಧಾನಸಭೆ ನಿರ್ಣಯ

ಪ್ರತಿಧ್ವನಿ by ಪ್ರತಿಧ್ವನಿ
March 22, 2022
in ದೇಶ
0
ಪೆಗಾಸಸ್ : ಹಿಂದಿನ ಟಿಡಿಪಿ ಸರ್ಕಾರದ ವಿರುದ್ಧ ತನಿಖೆಗೆ ಆಂಧ್ರ ವಿಧಾನಸಭೆ ನಿರ್ಣಯ
Share on WhatsAppShare on FacebookShare on Telegram

ಆಂಧ್ರ ಪ್ರದೇಶದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದಂತಹ ತೆಲುಗು ದೇಶಂ ಪಾರ್ಟಿಯು ಇಸ್ರೇಲ್ ಮೂಲದ ಕುಖ್ಯಾತ ಪೆಗಾಸಸ್ ತಂತ್ರಾಂಶವನ್ನು ಖರೀದಿಸಿ ಅದನ್ನು ಬಳಸಿಕೊಂಡಿದೆಯೇ ಎಂಬುದರ ಕುರಿತು ಕೂಲಂಕುಷ ತನಿಖೆ ನಡೆಸುವ ಸಲುವಾಗಿ ಸಮಿತಿಯನ್ನು ರಚಿಸಲು ಆಂಧ್ರ ವಿಧಾನ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ADVERTISEMENT

ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಾರ್ಟಿಯ ಶಾಸಕರು ಪೆಗಾಸಸ್ ಕುರಿತಾಗಿ ಸದನದಲ್ಲಿ ದನಿ ಎತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತೀಚಿಗೆ ಈ ಕುರಿತು ಹೇಳಿಕೆ ನೀಡಿದ್ದರು. ಟಿಡಿಪಿ ನೇತೃತ್ವದ ಸರ್ಕಾರ ಅಸ್ಥಿತ್ವದಲ್ಲಿ ಇದ್ದಾಗ ಪೆಗಾಸಸ್ ತಂತ್ರಾಂಶವನ್ನು ಬಳಸಲಾಗಿತ್ತು. ರೂ.25 ಕೋಟಿಗೆ ತಮ್ಮೊಂದಿಗೂ ವ್ಯವಹಾರ ಕುದುರಿಸುವ ಪ್ರಯತ್ನ ನಡೆಸಲಾಗಿತ್ತು, ಎಂದು ಬ್ಯಾನರ್ಜಿ ಹೇಳಿದ್ದರು.

ಈ ಕುರಿತಾಗಿ ಮಾತನಾಡಿರುವ ಆಂಧ್ರದ ವಿತ್ತ ಸಚಿವ ಬಿ ರಾಜೇಂದ್ರನಾಥ್,“ಹಿರಿಯ ನಾಯಕಿ ಹಾಗೂ ಮುಖ್ಯಮಂತ್ರಿಯೂ ಆಗಿರುವ ಮಮತಾ ಬ್ಯಾನರ್ಜಿ ಸುಖಾಸುಮ್ಮನೆ ಆರೋಪ ಹೊರೆಸುವವರಲ್ಲ.2014 ರಿಂದ 2019ರ ವರೆಗಿನ ಅವಧಿಯಲ್ಲಿ ಟಿಡಿಪಿಯು ಪೆಗಾಸಸ್ ಅನ್ನು ಬಳಸಿರುವ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ಕೇವಲ ವಿರೋಧ ಪಕ್ಷದ ನಾಯಕರಷ್ಟೇ ಅಲ್ಲದೇ, ಎಲ್ಲಾ ತರಹದ ಮತದಾರರ ಮೇಲೂ ಕಣ್ಗಾವಲಿಟ್ಟಿರುವ ಸಾಧ್ಯತೆಗಳಿವೆ,” ಎಂದು ಹೇಳಿದ್ದಾರೆ.

2017ರಲ್ಲಿ ಅಂದಿನ ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದ ಎ ಬಿ ವೆಂಕಟೇಶ್ವರ ರಾವ್ ಅವರು, ತಮ್ಮ ಮಗನ ಕಂಪೆನಿಯ ಮೂಲಕ ಇಸ್ರೇಲ್ ಮೂಲದ ಕಂಪೆನಿಯಿಂದ ‘ಡ್ರೋನ್ ಕಣ್ಗಾವಲು’ ವ್ಯವಸ್ಥೆಯನ್ನು ಪರಿಚಯಿಸಲು ಪ್ರಯತ್ನಪಟ್ಟಿದ್ದರು. ಇದಕ್ಕಾಗಿ ಎರಡು ಬಾರಿ ಇಸ್ರೇಲ್’ಗೆ ಭೇಟಿ ನೀಡಿದ್ದರು ಕೂಡಾ. ಟಿಡಿಪಿ ಸರ್ಕಾರ ಕಣ್ಗಾವಲು ವ್ಯವಸ್ಥೆಯ ಪರಿಕರಿಗಳ ಖರೀದಿಗೆ ಅನುದಾನವನ್ನು ನೀಡಿತ್ತು. ನಂತರ ಏಕಾಏಕಿ ಯೋಜನೆಯನ್ನು ಕೈಬಿಡಲಾಯಿತು, ಎಂದಿದ್ದಾರೆ.

ಈ ಆರೋಪಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ವೆಂಕಟೇಶ್ವರ ರಾವ್,2019ರ ಮೇ ತಿಂಗಳವರೆಗೆ ಯಾವುದೇ ಸರ್ಕಾರಿ ಏಜೆನ್ಸಿಗಳು ಪೆಗಾಸಸ್ ಖರೀದಿಸಿಲ್ಲ ಎಂದು ನಾನು ದೃಢವಾಗಿ ಹೇಳುತ್ತೇನೆ. ಯಾವುದೇ ಫೋನ್ ಟ್ಯಾಪಿಂಗ್ ಕೂಡಾ ನಡೆದಿಲ್ಲ. ಆದರೆ, ಟಿಡಿಪಿ ಅಧೀಕಾರ ಕಳೆದುಕೊಂಡ ಬಳಿಕ ಏನು ನಡೆದಿದೆ ಎಂದು ನನಗೆ ತಿಳಿದಿಲ್ಲ, ಎಂದಿದ್ದಾರೆ.

ಆಂಧ್ರ ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಸದಸ್ಯರ ಮನವಿಯನ್ನು ಪುರಸ್ಕರಿಸಿ ಇನ್ನೆರಡು ದಿನಗಳಲ್ಲಿ ತನಿಖಾ ಸಮಿತಿ ರಚಿಸಿ ಕೂಲಂಕುಷವಾದ ತನಿಖೆಯನ್ನು ನಡೆಸಲು ಸೂಚಿಸಿದ್ದಾರೆ.

ಟಿಡಿಪಿ ಸರ್ಕಾರವಿದ್ದಾಗ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ಲೋಕೇಶ್ ಅವರು ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಮಮತಾ ಬ್ಯಾನರ್ಜಿಯವರಿಗೆ ಯಾರೋ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಒಂದು ವೇಳೆ ನಾವು ಪೆಗಾಸಸ್ ಬಳಸಿದ್ದಿದ್ದರೆ 2019ರಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷ ಅಧಿಕಾರಕ್ಕೆ ಬರುತ್ತಿರಲಿಲ್ಲ, ಎಂದು ಹೇಳಿದ್ದಾರೆ.

ನಾಲ್ವರು ಟಿಡಿಪಿ ಸದಸ್ಯರ ಅಮಾನತು

ಆಂಧ್ರ ಪ್ರದೇಶ ವಿಧಾನಸಭೆ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ ನಾಲ್ವರು ಸದಸ್ಯರನ್ನು ಬಜೆಟ್ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಪಟ್ಟಣದಲ್ಲಿ ಅಕ್ರಮ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿವೆ ಎಂಬ ವಿಷಯದ ಚರ್ಚೆಗೆ ಒತ್ತಾಯಿಸಿ ಟಿಡಿಪಿ ಸದಸ್ಯರು ಸದನದಲ್ಲಿ ಗದ್ದಲ ಎಬ್ಬಿಸಿದರು. ಆಗಾಗಿ ಅಶೋಕ್ ಬೆಂದಾಲಂ, ವೆಲಗಪುಡಿ ರಾಮಕೃಷ್ಣ ಬಾಬು, ಮಂಟೆನಾ ರಾಮರಾಜು ಮತ್ತು ಅನಗಣಿ ಸತ್ಯ ಪ್ರಸಾದ್ ಈ ನಾಲ್ವರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.

ತಮ್ಮ ಅಶಿಸ್ತಿನ ವರ್ತನೆಯ ಮೂಲಕ ಸದನಕ್ಕೆ ಅಪಖ್ಯಾತಿ ತಂದ ನಾಲ್ಕು ಸದಸ್ಯರನ್ನು ಹೆಸರಿಸಿ, ಅಧಿವೇಶನದ ಮುಂದಿನ ಅವಧಿಯಲ್ಲಿ ಪಾಲ್ಗೊಳ್ಳದಿರುವಂತೆ ಆದೇಶಿಸಿದ್ಧಾರೆ.

Tags: BJPCongress PartyCovid 19ಆಂಧ್ರ ವಿಧಾನಸಭೆಟಿಡಿಪಿ ಸರ್ಕಾರನರೇಂದ್ರ ಮೋದಿಪೆಗಾಸಸ್ಪೆಗಾಸಸ್‌ಪೆಗಾಸಸ್ ಸ್ಪೈವೇರ್ಬಿಜೆಪಿ
Previous Post

ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

Next Post

ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada