ವೈಕುಂಠ ಏಕಾದಶಿ ನಿಮಿತ್ತ ತಿಮ್ಮಪ್ಪನ (Tirupati) ದರ್ಶನಕ್ಕೆ ಟಿಕೆಟ್ ಪಡೆದುಕೊಳ್ಳುವ ವೇಳೆ ಕೌಂಟರ್ ಬಳಿ ನೂಕು ನುಗ್ಗಲು ಉಂಟಾಗಿ ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಭಕ್ತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು (Chandra babu naidu) ತಿರುಪತಿಗೆ ಭೇಟಿ ನೀಡಲಿದ್ದಾರೆ.

ಆ ನಂತರ 11-45 ಕ್ಕೆ ತಿರುಪತಿಯ ಆಸ್ಪತ್ರೆಗೆ ಭೇಟಿ ನೀಡಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದು ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.ರುಯಾ ಮತ್ತು ಸ್ವಿಮ್ಸುಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಅವರು ಭೇಟಿ ಮಾಡಲಿದ್ದಾರೆ.

ಈ ವೇಳೆ ಮೃತರ ಕುಂಟುಂಬಸ್ಥರಿಗೆ ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು ಪರಿಹಾರ ಘೋಷಣೆ ಮಾಡಲಿದ್ದಾರೆ. ನಿನ್ನೆ ರಾತ್ರಿ ಈ ದುರ್ಘಟನೆಯ ಹಿನ್ನಲೆ ಟೋಕನ್ ಹಂಚಿಕೆಗೆ ಬ್ರೇಕ್ ಹಾಕಲಾಗಿತ್ತು. ಆದ್ರೆ ಇವತ್ತು ಬೆಳಿಗ್ಗೆಯಿಂದ ಮತ್ತೆ ಟೋಕನ್ ಹಂಚಿಕೆ ಆರಂಭವಾಗಿದೆ.