ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಅಭಿನಯಿಸಿರುವ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಲಾಗಿದೆ.
![](https://pratidhvani.com/wp-content/uploads/2024/04/WhatsApp-Image-2024-04-25-at-8.52.15-AM-1024x682.jpeg)
ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
![](https://pratidhvani.com/wp-content/uploads/2024/04/WhatsApp-Image-2024-04-25-at-8.52.14-AM-1-1024x682.jpeg)
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಾನು ಹಾಗೂ ಇಂದ್ರಜಿತ್ ಹಲವು ವರ್ಷಗಳ ಗೆಳೆಯರು. ಅವರ ಮಗ ಸಮರ್ಜಿತ್ ನನ್ನ ಜೊತೆ ಜಾಹೀರಾತೊಂದರಲ್ಲಿ ಅಭಿನಯಿಸಿದ್ದರು. ಆದರೆ, ಈಗ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಇಬ್ಬರು ಯುವ ಪ್ರತಿಭೆಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.
![](https://pratidhvani.com/wp-content/uploads/2024/04/WhatsApp-Image-2024-04-25-at-8.52.14-AM-1024x682.jpeg)
ಅನಿಲ್ ಕುಂಬ್ಳೆ ಅವರ ಜೊತೆಗೆ ನನ್ನದು ಮೂವತ್ತು ವರ್ಷಕ್ಕೂ ಮೀರಿದ ಗೆಳೆತನ. ಹಾಗೆ ಪುನೀತ್ ರಾಜಕುಮಾರ್ ಸಹ ಬಹಳ ಆತ್ಮೀಯರು. ಇಂದು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅನಿಲ್ ಕುಂಬ್ಳೆ ಅವರು ನಮ್ಮ “ಗೌರಿ” ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಧನ್ಯವಾದ ಅರ್ಪಿಸಿದ್ದಾರೆ.
ಮಗ ಸಮರ್ಜಿತ್ ನಾಯಕನಾಗಲು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ಅಭಿನಯಿಸಿದ್ದಾನೆ. ಸಾನ್ಯಾ ಅವರ ಅಭಿನಯ ಕೂಡ ಉತ್ತಮವಾಗಿದೆ. “ಗೌರಿ” ಚಿತ್ರ ಯಾವುದಕ್ಕೂ ಕಡಿಮೆ ಇಲ್ಲದೆ ಅದ್ದೂರಿಯಾಗಿ ಮೂಡಿ ಬಂದಿದೆ ಎಂದು ಇಂದ್ರಜಿತ್ ಹೇಳಿದರು.
![](https://pratidhvani.com/wp-content/uploads/2024/04/WhatsApp-Image-2024-04-25-at-8.52.13-AM-1-1024x682.jpeg)
ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೆ.ಕೆ ಇಬ್ಬರು ಛಾಯಾಗ್ರಾಹಕರಿದ್ದಾರೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಭೇರ್ಗಿ ಹಾಗೂ ಅನಿರುದ್ದ್ ಶಾಸ್ತ್ರಿ ನಾಲ್ವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಮ್ಯಾಥ್ಯೂಸ್ ಮನು ರೀರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಹಾಡು ರಚಿಸಿದ್ದಾರೆ. ಕೈಲಾಶ್ ಖೇರ , ಚಂದನ್ ಶೆಟ್ಟಿ, ಅನಿರುದ್ಧ ಶಾಸ್ತ್ರಿ, ಜಾವೇದ್ ಅಲಿ,ಅನನ್ಯ ಭಟ್, ನಿಹಾಲ್ ತೌರೋ ,ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ, ಸಮರ್ಜಿತ್ ಹಿನ್ನಲೆ ಗಾಯನ ನೀಡಿದ್ದಾರೆ.
ಗುಬ್ಬಿ, ಮಾಸ್ತಿ, ರಾಜಶೇಖರ್ ಹಾಗೂ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ.