ಚಾಮರಾಜನಗರ : ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಫಿಕ್ಸ್ ಆಗಿದೆ. ಈ ಬಾರಿ ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ಗೆ ಈ ಬಾರಿ ಬಹುಮತ ಸಿಗಲಿದೆ ಎಂದು ಹೇಳುತ್ತಿವೆ. ಹೀಗಾಗಿ ಹೇಗಾದರೂ ಮಾಡಿ ಅಧಿಕಾರವನ್ನು ಉಳಿಸಿಕೊಂಡು ಚುನಾವಣಾ ಪೂರ್ವ ಸಮೀಕ್ಷೆಗಳ ಫಲಿತಾಂಶವನ್ನೇ ಬುಡಮೇಲು ಮಾಡುವ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ.
ಹೀಗಾಗಿ ಅಣ್ಣಾಮಲೈರನ್ನು ಬಳಕೆ ಮಾಡಿಕೊಂಡು ಬಿಜೆಪಿ ತಮಿಳು ಭಾಷಿಕರನ್ನು ಸೆಳೆಯಲು ಪ್ಲಾನ್ ರೂಪಿಸಿದೆ. ಇದೇ ಕಾರಣಕ್ಕೆ ಇಂದು ಚಾಮರಾಜನಗರದ ಹನೂರಿಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ ನೀಡುತ್ತಿದ್ದಾರೆ. ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿರುವ ಒಬಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅಣ್ಣಾಮಲೈ ಹೆಚ್ಚಾಗಿ ತಮಿಳು ಭಾಷಿಕರೇ ಹೆಚ್ಚಿರುವ ಹನೂರಿನಲ್ಲಿ ಕಮಾಲ್ ಮಾಡುವ ತಯಾರಿಯಲ್ಲಿದ್ದಾರೆ.
ಹನೂರು ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಇಲ್ಲಿ ತಮಿಳು ಭಾಷೆ ಮಾತನಾಡುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ತಮಿಳು ಭಾಷೆಯನ್ನೇ ಬಳಕೆ ಮಾಡಿಕೊಂಡು ಕಾಂಗ್ರೆಸ್ ಭದ್ರಕೋಟೆಯನ್ನು ಅಲುಗಾಡಿಸುವ ಪ್ಲಾನ್ ಬಿಜೆಪಿಯದ್ದಾಗಿದೆ. ಹೀಗಾಗಿ ಅಣ್ಣಾಮಲೈಮ್ಯಾಜಿಕ್ ಚುನಾವಣೆಯಲ್ಲಿ ವರ್ಕೌಟ್ ಆಗುತ್ತಾ ಅನ್ನೋದು ಮೇ 13ರಂದು ತಿಳಿಯಲಿದೆ.