• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ಮಲಾ ಸೀತಾರಾಮನ್ ಗೆ ಕ್ಷಮೆಯಾಚಿಸಿದ ಅನ್ನಪೂರ್ಣ ರೆಸ್ಟೋರೆಂಟ್ ಮಾಲಕ; ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೊಸದಿಲ್ಲಿ:ಅನ್ನಪೂರ್ಣ ರೆಸ್ಟೋರೆಂಟ್ Annapurna Restaurant)ಮಾಲಕ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಕ್ಷಮೆ (Apology to Finance Secretary Nirmala Sitharaman)ಯಾಚಿಸಿದ ಬೆನ್ನಲ್ಲಿ ಮೋದಿ ಸರಕಾರದ ವಿರುದ್ಧ ರಾಹುಲ್ ಗಾಂಧಿ Rahul Gandhi)ಟೀಕೆಯನ್ನು Criticism)ಮಾಡಿದ್ದು, ‘ಸಣ್ಣ ವ್ಯಾಪರಿಗಳಿಗೆ ಅವಮಾನ ಸಲ್ಲದು’ ಎಂದು ಹೇಳಿದ್ದಾರೆ.

ADVERTISEMENT

ಜಿಎಸ್ಟಿ ಸರಳೀಕರಣಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲಕರೊಬ್ಬರು ಸಭೆಯೊಂದರಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆಗ್ರಹಿಸಿದ್ದರು, ಇದರ ಬೆನಲ್ಲಿ ಅವರು ನಿರ್ಮಲಾ ಸೀತಾರಾಮನ್ ಬಳಿ ಕ್ಷಮೆ ಯಾಚಿಸುವ ವಿಡಿಯೋ ಕೂಡ ವೈರಲ್ ಆಗಿತ್ತು.

ಈ ಬಗ್ಗೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕೊಯಮತ್ತೂರಿನ ಅನ್ನಪೂರ್ಣ ರೆಸ್ಟೋರೆಂಟ್ ನಂತಹ ಸಣ್ಣ ವ್ಯಾಪಾರ ನಡೆಸುವ ಉದ್ಯಮಿಗಳು ಜಿಎಸ್ಟಿ ಸರಳೀಕರಣಕ್ಕೆ ಆಗ್ರಹಿಸಿದಾಗ ಅವರ ವಿನಂತಿಯನ್ನು ದುರಹಂಕಾರ ಮತ್ತು ಸಂಪೂರ್ಣ ಅಗೌರವದಿಂದ ನೋಡಲಾಗುತ್ತದೆ. ಆದರೆ, ಬಿಲಿಯನೇರ್ ಸ್ನೇಹಿತ ನಿಯಮಗಳನ್ನು ಉಲ್ಲಂಘಿಸಲು, ಕಾನೂನುಗಳನ್ನು ಬದಲಾಯಿಸಲು, ದೇಶದ ಸಂಪತ್ತನ್ನು ಪಡೆಯಲು ಪ್ರಯತ್ನಿಸಿದಾಗ, ಮೋದಿ ಜಿ ರೆಡ್ ಕಾರ್ಪೆಟ್ ಅನ್ನು ಹಾಸುತ್ತಾರೆ ಎಂದು ಹೇಳಿದ್ದಾರೆ.

ನಮ್ಮ ಸಣ್ಣ ವ್ಯಾಪಾರಗಳ ಮಾಲಿಕರು ಈಗಾಗಲೇ ನೋಟು ಅಮಾನ್ಯೀಕರಣ, ಕೈಗೆಟಕದ ಬ್ಯಾಂಕಿಂಗ್ ವ್ಯವಸ್ಥೆ, ತೆರಿಗೆ ಸುಲಿಗೆ ಮತ್ತು ವಿನಾಶಕಾರಿ ಜಿಎಸ್ಟಿಯ ಹೊಡೆತಗಳನ್ನು ಸಹಿಸಿಕೊಂಡಿದ್ದಾರೆ. ಕೊನೆಯದಾಗಿ ಇದೀಗ ಅವರಿಗೆ ಮತ್ತಷ್ಟು ಅವಮಾನ ಮಾಡಲಾಗಿದೆ. ಎಂಎಸ್‌ಎಂಇಗಳು ಹಲವು ವರ್ಷಗಳಿಂದ ಪರಿಹಾರವನ್ನು ಕೇಳುತ್ತಿವೆ. ಈ ದುರಹಂಕಾರಿ ಸರ್ಕಾರವು ಜನರ ಮಾತುಗಳನ್ನು ಆಲಿಸಿದರೆ, ಒಂದೇ ತೆರಿಗೆ ದರದೊಂದಿಗೆ ಸರಳೀಕೃತ ಜಿಎಸ್ಟಿಯನ್ನು ಜಾರಿಗೆ ತಂದರೆ ಲಕ್ಷಾಂತರ ವ್ಯಾಪಾರಿಗಳ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜಿಎಸ್ಟಿಯ ಬದಲಾದ ದರಗಳ ಬಗ್ಗೆ ಹೋಟೆಲ್ ಮಾಲಿಕರು ಹೇಳಿದ್ದಾರೆ.ಹಣಕಾಸು ಸಚಿವರು ಕ್ಷಮೆಯಾಚಿಸುವಂತೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

There was a meeting organised in Coimbatore with businesses and Finance Minister Nirmala Sitharaman

▪️The owner of Sree Annapoorna, a famous vegetarian restaurant chain in Coimbatore, Mr. Srinivasan explained the problems of different GST rates for different items to FM

▪️He… pic.twitter.com/FXCZTWUjcU

— Supriya Shrinate (@SupriyaShrinate) September 13, 2024

ಸಭೆಯೊಂದರಲ್ಲಿ ತಮ್ಮ ಸಮಸ್ಯೆಗಳನ್ನು ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಳಿ ತೋಡಿಕೊಂಡಿದ್ದ ಶ್ರೀನಿವಾಸನ್, ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಸಿಹಿತಿಂಡಿಗಳ ಮೇಲೆ 5% ಜಿಎಸ್ಟಿ ಇದೆ.ಖಾರದ ಮೇಲೆ 12% ಮತ್ತು ಕ್ರೀಮ್ ತುಂಬಿದ ಬನ್ ಗಳ ಮೇಲೆ 18% ಜಿಎಸ್ ಟಿ ಇದೆ, ಬನ್ ಮೇಲೆ ಯಾವುದೇ ಜಿಎಸ್ಟಿ ಇಲ್ಲ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್ಟಿಯನ್ನು ವಿಧಿಸಿ, ಈ ಜಿಎಸ್ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ ಎಂದು ಹೇಳಿದ್ದರು.

Yesterday, Businessman and Annapoorna group’s chairman asked a question to Nirmala Sitharaman on different rates of GST. The video went viral.

That arrogant woman made him apologise today.

“I do not belong to any party, please excuse me”, he said.

Peak arrogance! pic.twitter.com/3RHiJoVait

— Shantanu (@shaandelhite) September 12, 2024

ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮುಗುಳ್ನಕ್ಕಿದ್ದರು. ಆ ಬಳಿಕ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

Tags: Annapurna Restaurant OwnerFinance Minister Nirmala SitaramanRahul Gandhi criticizes the government
Previous Post

ಮಗನಿಗೆ 10 ರೂ. ನೋಟಿನ ಬಂಡಲ್ ಗಳಿಂದ ತೂಕ ಮಾಡಿ ದಾನ ಕೊಟ್ಟ ರೈತ ತಂದೆ! ವಿಡಿಯೋ ವೈರಲ್

Next Post

ಜನರ ಸಲುವಾಗಿ ನಾನು ರಾಜೀನಾಮೆ ನೀಡಲು ಸಿದ್ಧ;ನನಗೆ ನ್ಯಾಯ ಬೇಕು ಸಿಎಂ ಕುರ್ಚಿ ಅಲ್ಲ:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಜನರ ಸಲುವಾಗಿ ನಾನು ರಾಜೀನಾಮೆ ನೀಡಲು ಸಿದ್ಧ;ನನಗೆ ನ್ಯಾಯ ಬೇಕು ಸಿಎಂ ಕುರ್ಚಿ ಅಲ್ಲ:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada